<p><strong>ಬೆಳಗಾವಿ:</strong> ಚಲನಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ನೇತೃತ್ವದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋಆಪರೇಟಿವ್ ಸೊಸೈಟಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 2,063 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಇಲ್ಲಿನ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.</p>.<p>ಸಿಐಡಿ ಡಿವೈಎಸ್ಪಿ ಕೆ.ಪುರುಷೋತ್ತಮ ನೇತೃತ್ವದ ತಂಡ ಪ್ರಕರಣ ಕುರಿತು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಿದ್ಧಪಡಿಸಿದೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಸರ್ಕಾರಿ ಅಭಿಯೋಜಕ ಮುರಳೀಧರ ಕುಲಕರ್ಣಿ, ‘ಈ ಸೊಸೈಟಿಯು ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಇದು 35 ಶಾಖೆ ಹೊಂದಿದೆ. ಆಕರ್ಷಕ ಹಾಗೂ ಹೆಚ್ಚಿನ ಬಡ್ಡಿ ನೀಡುವುದಾಗಿ, 26ಸಾವಿರಕ್ಕೂ ಹೆಚ್ಚಿನ ಗ್ರಾಹಕರಿಂದ ಒಟ್ಟು ₹ 281.14 ಕೋಟಿ ಠೇವಣಿ ಇರಿಸಿಕೊಂಡಿದ್ದಾರೆ. ಆದರೆ, ಅವರಿಗೆ ಬಡ್ಡಿ ಅಥವಾ ಅಸಲು ಮೊತ್ತವನ್ನಾಗಲಿ ಹಿಂತಿರುಗಿಸದೆ, ಸ್ವಂತಕ್ಕಾಗಿ ಬಳಸಿಕೊಂಡು ಠೇವಣಿದಾರರಿಗೆ ವಂಚಿಸಿದ ಬಗ್ಗೆ ಇಲ್ಲಿನ ಸಹಕಾರಿ ಸಂಘಗಳ ಉಪನಿಬಂಧಕರು 2017ರ ಸೆ.1ರಂದು ಖಡೇಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು’ ಎಂದು ತಿಳಿಸಿದರು.</p>.<p>‘ಉಪನಿಬಂಧಕರು ನಡೆಸಿದ ಲೆಕ್ಕಪತ್ರಗಳ ತನಿಖೆ ಕಾಲಕ್ಕೆ, ಸೊಸೈಟಿ ಅಧ್ಯಕ್ಷರು ಹಾಗೂ ನಿರ್ದೇಶಕರು ಉಪವಿಧಿಗಳ ಪ್ರಕಾರ ಉಪಯೋಗಿಸದೆ 62 ಖೊಟ್ಟಿ ಖಾತೆಗಳನ್ನು ತೆಗೆದು ಆ ಖಾತೆಗಳಿಂದ ₹ 275 ಕೋಟಿ ಸಾಲ ನೀಡಿದಂತೆ ತೋರಿಸಿ ಆ ಹಣವನ್ನು ದುರ್ಬಳಕೆ ಮಾಡಿಕೊಂಡು ತಮ್ಮ ತಮ್ಮ ಹೆಸರಿನಲ್ಲಿ ಆಸ್ತಿ ಖರೀದಿಸಿರುವುದು ಕಂಡುಬಂದಿದೆ. ಈ ಬಗ್ಗೆ ಸಿಐಡಿ ತಂಡ ತನಿಖೆ ನಡೆಸಿದೆ. ತನಿಖೆ ಮುಂದುವರಿಸಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಚಲನಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ನೇತೃತ್ವದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋಆಪರೇಟಿವ್ ಸೊಸೈಟಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 2,063 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಇಲ್ಲಿನ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.</p>.<p>ಸಿಐಡಿ ಡಿವೈಎಸ್ಪಿ ಕೆ.ಪುರುಷೋತ್ತಮ ನೇತೃತ್ವದ ತಂಡ ಪ್ರಕರಣ ಕುರಿತು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಿದ್ಧಪಡಿಸಿದೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಸರ್ಕಾರಿ ಅಭಿಯೋಜಕ ಮುರಳೀಧರ ಕುಲಕರ್ಣಿ, ‘ಈ ಸೊಸೈಟಿಯು ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಇದು 35 ಶಾಖೆ ಹೊಂದಿದೆ. ಆಕರ್ಷಕ ಹಾಗೂ ಹೆಚ್ಚಿನ ಬಡ್ಡಿ ನೀಡುವುದಾಗಿ, 26ಸಾವಿರಕ್ಕೂ ಹೆಚ್ಚಿನ ಗ್ರಾಹಕರಿಂದ ಒಟ್ಟು ₹ 281.14 ಕೋಟಿ ಠೇವಣಿ ಇರಿಸಿಕೊಂಡಿದ್ದಾರೆ. ಆದರೆ, ಅವರಿಗೆ ಬಡ್ಡಿ ಅಥವಾ ಅಸಲು ಮೊತ್ತವನ್ನಾಗಲಿ ಹಿಂತಿರುಗಿಸದೆ, ಸ್ವಂತಕ್ಕಾಗಿ ಬಳಸಿಕೊಂಡು ಠೇವಣಿದಾರರಿಗೆ ವಂಚಿಸಿದ ಬಗ್ಗೆ ಇಲ್ಲಿನ ಸಹಕಾರಿ ಸಂಘಗಳ ಉಪನಿಬಂಧಕರು 2017ರ ಸೆ.1ರಂದು ಖಡೇಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು’ ಎಂದು ತಿಳಿಸಿದರು.</p>.<p>‘ಉಪನಿಬಂಧಕರು ನಡೆಸಿದ ಲೆಕ್ಕಪತ್ರಗಳ ತನಿಖೆ ಕಾಲಕ್ಕೆ, ಸೊಸೈಟಿ ಅಧ್ಯಕ್ಷರು ಹಾಗೂ ನಿರ್ದೇಶಕರು ಉಪವಿಧಿಗಳ ಪ್ರಕಾರ ಉಪಯೋಗಿಸದೆ 62 ಖೊಟ್ಟಿ ಖಾತೆಗಳನ್ನು ತೆಗೆದು ಆ ಖಾತೆಗಳಿಂದ ₹ 275 ಕೋಟಿ ಸಾಲ ನೀಡಿದಂತೆ ತೋರಿಸಿ ಆ ಹಣವನ್ನು ದುರ್ಬಳಕೆ ಮಾಡಿಕೊಂಡು ತಮ್ಮ ತಮ್ಮ ಹೆಸರಿನಲ್ಲಿ ಆಸ್ತಿ ಖರೀದಿಸಿರುವುದು ಕಂಡುಬಂದಿದೆ. ಈ ಬಗ್ಗೆ ಸಿಐಡಿ ತಂಡ ತನಿಖೆ ನಡೆಸಿದೆ. ತನಿಖೆ ಮುಂದುವರಿಸಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>