‘ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಕಷ್ಟು ಯತ್ನ ನಡೆಸಿದ್ದಾರೆ. ಆದರೆ, ಈ ಜಾಗ ರಕ್ಷಣಾ ಇಲಾಖೆಗೆ ಸೇರಿದ್ದರಿಂದ ಕಾರ್ಯಾಚರಣೆಗೆ ಹಿನ್ನಡೆ ಆಗುತ್ತಿದೆ. ಈ ಜಾಗ ಬಹಳ ವರ್ಷಗಳಿಂದ ಖಾಲಿ ಇದ್ದ ಕಾರಣ ವಿಷಜಂತುಗಳೂ ಮನೆಮಾಡಿವೆ. ವನ್ಯಮೃಗಗಳು ಅವಿತುಕೊಳ್ಳಲು ಸಾಧ್ಯವಾಗಿದೆ. ಈ ಬಗ್ಗೆ ಇಲಾಖೆಯ ಅಧಿಕಾರಿಗಳಿಗೂ ಮಾಹಿತಿ ನೀಡುತ್ತೇನೆ’ ಎಂದರು.