<p><strong>ಬೆಳಗಾವಿ: ‘</strong>ನಗರದಲ್ಲಿ ನಿರ್ಮಿಸಲಾಗುತ್ತಿರುವ ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ಹೆಸರು ನಾಮಕರಣ ಮಾಡಿದ ನಂತರವೇ ಉದ್ಘಾಟಿಸಲಾಗುವುದು’ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದರು.</p>.<p>ಇಲ್ಲಿನ ಎನ್ಡಬ್ಲ್ಯುಕೆಆರ್ಟಿಸಿ 3ನೇ ಡಿಪೊದಲ್ಲಿ ನೌಕರರ ವಿಶ್ರಾಂತಿ ಗೃಹ ಉದ್ಘಾಟನೆ ವೇಳೆ ಶುಕ್ರವಾರ ತಮ್ಮನ್ನು ಭೇಟಿಯಾದ ಶ್ರೀನಿವಾಸ ತಾಳೂಕರ ಮೊದಲಾದ ಕನ್ನಡಪರ ಹೋರಾಟಗಾರಿಗೆ ಸಚಿವರು ಈ ವಿಷಯ ತಿಳಿಸಿದರು.</p>.<p>‘ನಿಲ್ದಾಣಕ್ಕೆ ಚನ್ನಮ್ಮ ಹೆಸರಿಡಬೇಕು ಎಂಬ ಬೇಡಿಕೆ ಹಿಂದಿನಿಂದಲೂ ಇದೆ. ಇಲ್ಲಿಯವರೇ ಆದ ನಿಮ್ಮ ಅಧಿಕಾರದ ಅವಧಿಯಲ್ಲೇ ಈ ಕಾರ್ಯವಾಗಬೇಕು’ ಎಂದು ಹೋರಾಟಗಾರರು ಒತ್ತಾಯಿಸಿದರು.</p>.<p class="Subhead"><strong>ಅನುದಾನಕ್ಕೆ ತೊಂದರೆ ಇಲ್ಲ</strong></p>.<p>ಇದಕ್ಕೂ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ‘ಜಿಲ್ಲಾ ಮಟ್ಟದಲ್ಲಿ ಸರ್ಕಾರಿ ಸಾರಿಗೆ ಬಸ್ಗಳ ಡಿಪೊಗಳಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ವಿಶ್ರಾಂತಿ ಗೃಹಗಳನ್ನು ನಿರ್ಮಿಸುತ್ತಿದ್ದೇವೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡುತ್ತಿದ್ದೇವೆ. ಇದಕ್ಕಾಗಿ ಆರ್ಒ ಘಟಕಗಳನ್ನು ಅಳವಡಿಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಕಾಮಗಾರಿಯು ಕೋವಿಡ್–19 ಪರಿಸ್ಥಿತಿಯ ಕಾರಣದಿಂದ ವಿಳಂಬವಾಗಿದೆ. ಏಪ್ರಿಲ್ನಲ್ಲಿ ಮುಗಿಸುತ್ತೇವೆ ಎಂದು ಗುತ್ತಿಗೆದಾರರು ಹೇಳಿದ್ದಾರೆ. ಅವರಿಗೆ ನೋಟಿಸ್ ಕೂಡ ನೀಡಿದ್ದೇವೆ. ಅನುದಾನ ಬಿಡುಗಡೆಯಲ್ಲಿ ನಮ್ಮಿಂದ ವಿಳಂಬವಾಗಿಲ್ಲ. ಮತ್ತೆ ವಿಳಂಬವಾದರೆ ದಂಡ ವಿಧಿಸಲಾಗುವುದು. ಇದೇ 20ರ ಒಳಗೆ ಆ ಕಂಪನಿಯವರನ್ನು ಕರೆಸಿ ತಾಕೀತು ಮಾಡಲಾಗುವುದು. ಅಂತೆಯೆ, ನಗರ ಬಸ್ ನಿಲ್ದಾಣದ ಕಾಮಗಾರಿಯನ್ನೂ ತ್ವರಿತವಾಗಿ ಮುಗಿಸಲಾಗುವುದು’ ಎಂದು ಹೇಳಿದರು.</p>.<p class="Subhead"><strong>ಘೋಷಣೆಯಾದ ಬಳಿಕ ನಿರ್ಧಾರ</strong></p>.<p>‘ನಗರಪಾಲಿಕೆಯಲ್ಲಿ ಎಂಇಎಸ್ ಮತ್ತು ಕನ್ನಡ ಭಾಷಿಕರು ಎನ್ನುವ ಆಧಾರದ ಮೇಲೆ ಈವರೆಗೆ ಚುನಾವಣೆ ನಡೆದಿದೆ. ಈ ಬಾರಿ ಪಕ್ಷದ ಚಿಹ್ನೆಯ ಮೇಲೆ ಸ್ಪರ್ಧಿಸುವ ಬಗ್ಗೆ ಚುನಾವಣೆ ಘೋಷಣೆಯಾದ ಬಳಿಕ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.</p>.<p>‘ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಜು ಚಿಕ್ಕನಗೌಡರ ಸಾವಿನಲ್ಲಿ ಅನುಮಾನವಿದೆ ಎಂಬ ಸುದ್ದಿಗಳು ಬರುತ್ತಿವೆ. ಹಾಗೇನಾದರೂ ಇದ್ದಲ್ಲಿ ತನಿಖೆ ನಡೆಸುವ ಕೆಲಸವೂ ಆಗುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<p>ಡಿಪೊದಲ್ಲಿ ನಿರ್ಮಿಸಿದ ಪುರುಷರ ಹಾಗೂ ಮಹಿಳೆಯರ ವಿಶ್ರಾಂತಿ ಗೃಹ ಮತ್ತು ಶುದ್ಧ ಕುಡಿಯುವ ನೀರಿನ ಘಟಕವನ್ನು ಸಚಿವರು ಉದ್ಘಾಟಿಸಿದರು.</p>.<p>ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅನಿಲ ಬೆನಕೆ, ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವ ಮುಂಜಿ, ಆರ್ಟಿಒ ಶಿವಾನಂದ ಮಗದುಮ್ ಇದ್ದರು.</p>.<p>***</p>.<p class="Briefhead"><strong>ಸಚಿವರ ಕಾರಿಗೆ ಡಿಪೊದಲ್ಲಿ ಡೀಸೆಲ್!</strong></p>.<p>ಸಾರಿಗೆ ಸಚಿವರೂ ಆಗಿರುವ ಲಕ್ಷ್ಮಣ ಸವದಿ ಅವರ ಖಾಸಗಿ ಕಾರಿಗೆ ಚಾಲಕ ಬಸ್ ಡಿಪೊದಲ್ಲಿನ ಪೆಟ್ರೋಲ್ ಬಂಕ್ನಿಂದ ಡೀಸೆಲ್ ತುಂಬಿಸಿಕೊಂಡರು.</p>.<p>ನಗರದ 3ನೇ ಬಸ್ ಡಿಪೊದಲ್ಲಿ ಸಾರಿಗೆ ಇಲಾಖೆಯಿಂದ ನಿರ್ಮಿಸಿದ ವಿಶ್ರಾಂತಿ ಗೃಹದ ಉದ್ಘಾಟನೆಗೆಂದು ಸವದಿ ಆ ವಾಹನದಲ್ಲಿ ಬಂದಿದ್ದರು. ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರೆ, ಇತ್ತ ಅವರ ಡಿಪೊದಲ್ಲಿನ ಬಂಕ್ನಿಂದ ಇಂಧನ ತುಂಬಿಸಿದರು.</p>.<p>ಸರ್ಕಾರಿ ಸಾರಿಗೆ ಬಸ್ಗಳಿಗೆ ಇಂಧನಕ್ಕಾಗಿ ಈ ಬಂಕ್ ತೆರೆಯಲಾಗಿದೆ. ಆದರೆ, ಸಚಿವರು ಇಲ್ಲಿ ಪ್ರವಾಸಕ್ಕೆ ಬಳಸುವ ತಮ್ಮ ವಾಹನಕ್ಕೆ ಡೀಸೆಲ್ ಹಾಕಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: ‘</strong>ನಗರದಲ್ಲಿ ನಿರ್ಮಿಸಲಾಗುತ್ತಿರುವ ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ಹೆಸರು ನಾಮಕರಣ ಮಾಡಿದ ನಂತರವೇ ಉದ್ಘಾಟಿಸಲಾಗುವುದು’ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದರು.</p>.<p>ಇಲ್ಲಿನ ಎನ್ಡಬ್ಲ್ಯುಕೆಆರ್ಟಿಸಿ 3ನೇ ಡಿಪೊದಲ್ಲಿ ನೌಕರರ ವಿಶ್ರಾಂತಿ ಗೃಹ ಉದ್ಘಾಟನೆ ವೇಳೆ ಶುಕ್ರವಾರ ತಮ್ಮನ್ನು ಭೇಟಿಯಾದ ಶ್ರೀನಿವಾಸ ತಾಳೂಕರ ಮೊದಲಾದ ಕನ್ನಡಪರ ಹೋರಾಟಗಾರಿಗೆ ಸಚಿವರು ಈ ವಿಷಯ ತಿಳಿಸಿದರು.</p>.<p>‘ನಿಲ್ದಾಣಕ್ಕೆ ಚನ್ನಮ್ಮ ಹೆಸರಿಡಬೇಕು ಎಂಬ ಬೇಡಿಕೆ ಹಿಂದಿನಿಂದಲೂ ಇದೆ. ಇಲ್ಲಿಯವರೇ ಆದ ನಿಮ್ಮ ಅಧಿಕಾರದ ಅವಧಿಯಲ್ಲೇ ಈ ಕಾರ್ಯವಾಗಬೇಕು’ ಎಂದು ಹೋರಾಟಗಾರರು ಒತ್ತಾಯಿಸಿದರು.</p>.<p class="Subhead"><strong>ಅನುದಾನಕ್ಕೆ ತೊಂದರೆ ಇಲ್ಲ</strong></p>.<p>ಇದಕ್ಕೂ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ‘ಜಿಲ್ಲಾ ಮಟ್ಟದಲ್ಲಿ ಸರ್ಕಾರಿ ಸಾರಿಗೆ ಬಸ್ಗಳ ಡಿಪೊಗಳಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ವಿಶ್ರಾಂತಿ ಗೃಹಗಳನ್ನು ನಿರ್ಮಿಸುತ್ತಿದ್ದೇವೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡುತ್ತಿದ್ದೇವೆ. ಇದಕ್ಕಾಗಿ ಆರ್ಒ ಘಟಕಗಳನ್ನು ಅಳವಡಿಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಕಾಮಗಾರಿಯು ಕೋವಿಡ್–19 ಪರಿಸ್ಥಿತಿಯ ಕಾರಣದಿಂದ ವಿಳಂಬವಾಗಿದೆ. ಏಪ್ರಿಲ್ನಲ್ಲಿ ಮುಗಿಸುತ್ತೇವೆ ಎಂದು ಗುತ್ತಿಗೆದಾರರು ಹೇಳಿದ್ದಾರೆ. ಅವರಿಗೆ ನೋಟಿಸ್ ಕೂಡ ನೀಡಿದ್ದೇವೆ. ಅನುದಾನ ಬಿಡುಗಡೆಯಲ್ಲಿ ನಮ್ಮಿಂದ ವಿಳಂಬವಾಗಿಲ್ಲ. ಮತ್ತೆ ವಿಳಂಬವಾದರೆ ದಂಡ ವಿಧಿಸಲಾಗುವುದು. ಇದೇ 20ರ ಒಳಗೆ ಆ ಕಂಪನಿಯವರನ್ನು ಕರೆಸಿ ತಾಕೀತು ಮಾಡಲಾಗುವುದು. ಅಂತೆಯೆ, ನಗರ ಬಸ್ ನಿಲ್ದಾಣದ ಕಾಮಗಾರಿಯನ್ನೂ ತ್ವರಿತವಾಗಿ ಮುಗಿಸಲಾಗುವುದು’ ಎಂದು ಹೇಳಿದರು.</p>.<p class="Subhead"><strong>ಘೋಷಣೆಯಾದ ಬಳಿಕ ನಿರ್ಧಾರ</strong></p>.<p>‘ನಗರಪಾಲಿಕೆಯಲ್ಲಿ ಎಂಇಎಸ್ ಮತ್ತು ಕನ್ನಡ ಭಾಷಿಕರು ಎನ್ನುವ ಆಧಾರದ ಮೇಲೆ ಈವರೆಗೆ ಚುನಾವಣೆ ನಡೆದಿದೆ. ಈ ಬಾರಿ ಪಕ್ಷದ ಚಿಹ್ನೆಯ ಮೇಲೆ ಸ್ಪರ್ಧಿಸುವ ಬಗ್ಗೆ ಚುನಾವಣೆ ಘೋಷಣೆಯಾದ ಬಳಿಕ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.</p>.<p>‘ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಜು ಚಿಕ್ಕನಗೌಡರ ಸಾವಿನಲ್ಲಿ ಅನುಮಾನವಿದೆ ಎಂಬ ಸುದ್ದಿಗಳು ಬರುತ್ತಿವೆ. ಹಾಗೇನಾದರೂ ಇದ್ದಲ್ಲಿ ತನಿಖೆ ನಡೆಸುವ ಕೆಲಸವೂ ಆಗುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<p>ಡಿಪೊದಲ್ಲಿ ನಿರ್ಮಿಸಿದ ಪುರುಷರ ಹಾಗೂ ಮಹಿಳೆಯರ ವಿಶ್ರಾಂತಿ ಗೃಹ ಮತ್ತು ಶುದ್ಧ ಕುಡಿಯುವ ನೀರಿನ ಘಟಕವನ್ನು ಸಚಿವರು ಉದ್ಘಾಟಿಸಿದರು.</p>.<p>ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅನಿಲ ಬೆನಕೆ, ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವ ಮುಂಜಿ, ಆರ್ಟಿಒ ಶಿವಾನಂದ ಮಗದುಮ್ ಇದ್ದರು.</p>.<p>***</p>.<p class="Briefhead"><strong>ಸಚಿವರ ಕಾರಿಗೆ ಡಿಪೊದಲ್ಲಿ ಡೀಸೆಲ್!</strong></p>.<p>ಸಾರಿಗೆ ಸಚಿವರೂ ಆಗಿರುವ ಲಕ್ಷ್ಮಣ ಸವದಿ ಅವರ ಖಾಸಗಿ ಕಾರಿಗೆ ಚಾಲಕ ಬಸ್ ಡಿಪೊದಲ್ಲಿನ ಪೆಟ್ರೋಲ್ ಬಂಕ್ನಿಂದ ಡೀಸೆಲ್ ತುಂಬಿಸಿಕೊಂಡರು.</p>.<p>ನಗರದ 3ನೇ ಬಸ್ ಡಿಪೊದಲ್ಲಿ ಸಾರಿಗೆ ಇಲಾಖೆಯಿಂದ ನಿರ್ಮಿಸಿದ ವಿಶ್ರಾಂತಿ ಗೃಹದ ಉದ್ಘಾಟನೆಗೆಂದು ಸವದಿ ಆ ವಾಹನದಲ್ಲಿ ಬಂದಿದ್ದರು. ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರೆ, ಇತ್ತ ಅವರ ಡಿಪೊದಲ್ಲಿನ ಬಂಕ್ನಿಂದ ಇಂಧನ ತುಂಬಿಸಿದರು.</p>.<p>ಸರ್ಕಾರಿ ಸಾರಿಗೆ ಬಸ್ಗಳಿಗೆ ಇಂಧನಕ್ಕಾಗಿ ಈ ಬಂಕ್ ತೆರೆಯಲಾಗಿದೆ. ಆದರೆ, ಸಚಿವರು ಇಲ್ಲಿ ಪ್ರವಾಸಕ್ಕೆ ಬಳಸುವ ತಮ್ಮ ವಾಹನಕ್ಕೆ ಡೀಸೆಲ್ ಹಾಕಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>