<p><strong>ಚಿಕ್ಕೋಡಿ</strong>: ತಾಲ್ಲೂಕಿನ ಮಜಲಟ್ಟಿಯ ಕಲ್ಮೇಶ್ವರ ಅಲ್ಲಮಪ್ರಭು ಮಂದಿರದ ಪೀಠಾಧಿಕಾರಿ ಬಸವಪ್ರಭು ಮಹಾರಾಜರು(76) ಭಾನುವಾರ ಹೃದಯಾಘಾತದಿಂದ ನಿಧನರಾದರು.</p>.<p>ಅವರಿಗೆ ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.</p>.<p>ಮಜಲಟ್ಟಿ ಮತ್ತು ಚಿಂಚಣಿಯಲ್ಲಿ ಮಂದಿರಗಳನ್ನು ಹೊಂದಿದ್ದ ಶ್ರೀಗಳು, ಕಳೆದ 45 ವರ್ಷಗಳಿಂದ ಕಲ್ಮೇಶ್ವರ–ಅಲ್ಲಮಪ್ರಭು ಸಂಪ್ರದಾಯದಂತೆ ಕರ್ನಾಟಕ, ಮಹಾರಾಷ್ಟ್ರದಲ್ಲಿ ಪ್ರವಚನ ಹೇಳುತ್ತಿದ್ದರು. ಅಪಾರ ಭಕ್ತರನ್ನು ಹೊಂದಿದ್ದ ಅವರು, ಪ್ರತಿ ಅಮಾವಾಸ್ಯೆ ಹಾಗೂ ಹುಣ್ಣಿಮೆ ದಿನ ಸತ್ಸಂಗ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದರು. </p>.<p>ಚಿಂಚಣಿ ಹಾಗೂ ಮಜಲಟ್ಟಿಯಲ್ಲಿ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು. ಸಾವಿರಾರು ಭಕ್ತರು ಅಂತಿಮ ದರ್ಶನ ಪಡೆದರು. ಮಜಲಟ್ಟಿಯಲ್ಲಿ ಭಾನುವಾರ ರಾತ್ರಿ ಅಂತ್ಯಕ್ರಿಯೆ ನೆರವೇರಿತು.</p>.<p>ನಿಪ್ಪಾಣಿಯ ಪ್ರಾಣಲಿಂಗ ಸ್ವಾಮೀಜಿ, ಸದಲಗಾದ ಶ್ರದ್ಧಾನಂದ ಸ್ವಾಮೀಜಿ, ಚಿಕ್ಕೋಡಿಯ ಸಂಪಾದನಾ ಸ್ವಾಮೀಜಿ, ಸಿಗರೂರಿನ ಅಭಿನವ ಕಲ್ಮೇಶ್ವರ ಮಹಾರಾಜರು, ಆಡಿಯ ಸಿದ್ದೇಶ್ವರ ಸ್ವಾಮೀಜಿ, ಶಾಸಕ ದುರ್ಯೋಧನ ಐಹೊಳೆ, ಮುಖಂಡರಾದ ರುದ್ರಪ್ಪ ಸಂಗಪ್ಪಗೋಳ, ಮಹೇಶ ಭಾತೆ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ತಾಲ್ಲೂಕಿನ ಮಜಲಟ್ಟಿಯ ಕಲ್ಮೇಶ್ವರ ಅಲ್ಲಮಪ್ರಭು ಮಂದಿರದ ಪೀಠಾಧಿಕಾರಿ ಬಸವಪ್ರಭು ಮಹಾರಾಜರು(76) ಭಾನುವಾರ ಹೃದಯಾಘಾತದಿಂದ ನಿಧನರಾದರು.</p>.<p>ಅವರಿಗೆ ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.</p>.<p>ಮಜಲಟ್ಟಿ ಮತ್ತು ಚಿಂಚಣಿಯಲ್ಲಿ ಮಂದಿರಗಳನ್ನು ಹೊಂದಿದ್ದ ಶ್ರೀಗಳು, ಕಳೆದ 45 ವರ್ಷಗಳಿಂದ ಕಲ್ಮೇಶ್ವರ–ಅಲ್ಲಮಪ್ರಭು ಸಂಪ್ರದಾಯದಂತೆ ಕರ್ನಾಟಕ, ಮಹಾರಾಷ್ಟ್ರದಲ್ಲಿ ಪ್ರವಚನ ಹೇಳುತ್ತಿದ್ದರು. ಅಪಾರ ಭಕ್ತರನ್ನು ಹೊಂದಿದ್ದ ಅವರು, ಪ್ರತಿ ಅಮಾವಾಸ್ಯೆ ಹಾಗೂ ಹುಣ್ಣಿಮೆ ದಿನ ಸತ್ಸಂಗ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದರು. </p>.<p>ಚಿಂಚಣಿ ಹಾಗೂ ಮಜಲಟ್ಟಿಯಲ್ಲಿ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು. ಸಾವಿರಾರು ಭಕ್ತರು ಅಂತಿಮ ದರ್ಶನ ಪಡೆದರು. ಮಜಲಟ್ಟಿಯಲ್ಲಿ ಭಾನುವಾರ ರಾತ್ರಿ ಅಂತ್ಯಕ್ರಿಯೆ ನೆರವೇರಿತು.</p>.<p>ನಿಪ್ಪಾಣಿಯ ಪ್ರಾಣಲಿಂಗ ಸ್ವಾಮೀಜಿ, ಸದಲಗಾದ ಶ್ರದ್ಧಾನಂದ ಸ್ವಾಮೀಜಿ, ಚಿಕ್ಕೋಡಿಯ ಸಂಪಾದನಾ ಸ್ವಾಮೀಜಿ, ಸಿಗರೂರಿನ ಅಭಿನವ ಕಲ್ಮೇಶ್ವರ ಮಹಾರಾಜರು, ಆಡಿಯ ಸಿದ್ದೇಶ್ವರ ಸ್ವಾಮೀಜಿ, ಶಾಸಕ ದುರ್ಯೋಧನ ಐಹೊಳೆ, ಮುಖಂಡರಾದ ರುದ್ರಪ್ಪ ಸಂಗಪ್ಪಗೋಳ, ಮಹೇಶ ಭಾತೆ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>