<p><strong>ಚಿಕ್ಕೋಡಿ</strong>: ಕೆಎಲ್ಇ ಗೌರವಾಧ್ಯಕ್ಷ ಪ್ರಭಾಕರ ಕೋರೆ ಪ್ರಯತ್ನದಿಂದ ಡಿಕೆಎಸ್ಎಸ್ಕೆ ಶಾಖೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ತೆರೆಯುವ ಮೂಲಕ ಆರ್ಥಿಕ ಪ್ರಗತಿಗೆ ಕಾರಣರಾಗಿದ್ದಾರೆ ಎಂದು ಅಂಕಲಿಯ ಡಿಕೆಎಸ್ಎಸ್ಕೆ ಶಾಖೆಯ ಅಧ್ಯಕ್ಷ ಶಿವಾನಂದ ಹಕಾರೆ ಹೇಳಿದರು.</p>.<p>ತಾಲ್ಲೂಕಿನ ಅಂಕಲಿ ಗ್ರಾಮದಲ್ಲಿ ಸೋಮವಾರ ಡಿ.ಕೆ.ಎಸ್.ಎಸ್.ಕೆ ಶಾಖೆಯ 35ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಡಿ.ಕೆ.ಎಸ್.ಎಸ್.ಕೆಯ 5ನೇ ಶಾಖೆಯು 35 ವಸಂತಗಳನ್ನು ಕಂಡಿದ್ದು, ಇಲ್ಲಿಯವರೆಗೆ ₹ 23.86 ಕೋಟಿ ಠೇವು ಸಂಗ್ರಹಿಸಿದೆ. ₹ 3.54 ಕೋಟಿ ಸಾಲ ವಿತರಿಸಿದೆ. ₹ 897.75 ಕೋಟಿ ವಾರ್ಷಿಕ ವಹಿವಾಟು ಹೊಂದಿದ್ದು, 2025-26ನೇ ಆರ್ಥಿಕ ವರ್ಷದಲ್ಲಿ ₹ 65 ಲಕ್ಷ ಲಾಭ ಗಳಿಸಿದೆ ಎಂದರು. ಸಿ.ಬಿ. ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್.ಬಿ. ಖಾಂಡಗಾವೆ ಮಾತನಾಡಿದರು. ಮುಖ್ಯ ಶಾಖೆಯ ವ್ಯವಸ್ಥಾಪಕ ನಿರ್ದೇಶಕ ಡಿ.ಎಸ್. ಕರೋಶಿ, ಶಾಖಾ ವ್ಯವಸ್ಥಾಪಕ ಸಂದೀಪ ಜೋಗೋಜೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-21-1172057771</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ಕೆಎಲ್ಇ ಗೌರವಾಧ್ಯಕ್ಷ ಪ್ರಭಾಕರ ಕೋರೆ ಪ್ರಯತ್ನದಿಂದ ಡಿಕೆಎಸ್ಎಸ್ಕೆ ಶಾಖೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ತೆರೆಯುವ ಮೂಲಕ ಆರ್ಥಿಕ ಪ್ರಗತಿಗೆ ಕಾರಣರಾಗಿದ್ದಾರೆ ಎಂದು ಅಂಕಲಿಯ ಡಿಕೆಎಸ್ಎಸ್ಕೆ ಶಾಖೆಯ ಅಧ್ಯಕ್ಷ ಶಿವಾನಂದ ಹಕಾರೆ ಹೇಳಿದರು.</p>.<p>ತಾಲ್ಲೂಕಿನ ಅಂಕಲಿ ಗ್ರಾಮದಲ್ಲಿ ಸೋಮವಾರ ಡಿ.ಕೆ.ಎಸ್.ಎಸ್.ಕೆ ಶಾಖೆಯ 35ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಡಿ.ಕೆ.ಎಸ್.ಎಸ್.ಕೆಯ 5ನೇ ಶಾಖೆಯು 35 ವಸಂತಗಳನ್ನು ಕಂಡಿದ್ದು, ಇಲ್ಲಿಯವರೆಗೆ ₹ 23.86 ಕೋಟಿ ಠೇವು ಸಂಗ್ರಹಿಸಿದೆ. ₹ 3.54 ಕೋಟಿ ಸಾಲ ವಿತರಿಸಿದೆ. ₹ 897.75 ಕೋಟಿ ವಾರ್ಷಿಕ ವಹಿವಾಟು ಹೊಂದಿದ್ದು, 2025-26ನೇ ಆರ್ಥಿಕ ವರ್ಷದಲ್ಲಿ ₹ 65 ಲಕ್ಷ ಲಾಭ ಗಳಿಸಿದೆ ಎಂದರು. ಸಿ.ಬಿ. ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್.ಬಿ. ಖಾಂಡಗಾವೆ ಮಾತನಾಡಿದರು. ಮುಖ್ಯ ಶಾಖೆಯ ವ್ಯವಸ್ಥಾಪಕ ನಿರ್ದೇಶಕ ಡಿ.ಎಸ್. ಕರೋಶಿ, ಶಾಖಾ ವ್ಯವಸ್ಥಾಪಕ ಸಂದೀಪ ಜೋಗೋಜೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-21-1172057771</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>