<p>ಚಿಕ್ಕೋಡಿ: ‘ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲರಿಗೂ ಸಮಾನತೆ ನೀಡಿದರು’ ಎಂದು ಖಡಕಲಾಟ ಠಾಣೆ ಪಿಎಸ್ಐ ಕೃಷ್ಣವೇಣಿ ಗೋರನಹೊಸೂರ ಹೇಳಿದರು.</p>.<p>ತಾಲ್ಲೂಕಿನ ಧುಳಗನವಾಡಿ ಗ್ರಾಮದಲ್ಲಿ ಚಿಕ್ಕೋಡಿಯ ಆಶಾದೀಪ ಸಮುದಾಯ ಕಲಾಕೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಭೀಮಗೀತ ಗಾಯನ ಕಲಾಸಂಭ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ವಿಶ್ವನಾಥ ಧುಮಾಳ ಮಾತನಾಡಿ, ‘ಶಿಕ್ಷಣದಿಂದ ಮಾತ್ರ ನಮ್ಮ ಬದುಕನ್ನು ಸುಂದರಗೊಳಿಸಿಕೊಳ್ಳಬಹುದಾಗಿದೆ’ ಎಂದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭೀಮಗೀತ ಗಾಯನ, ವೀರಗಾಸೆ ಕುಣಿತ, ಡೊಳ್ಳಿನ ಪದ, ಹಾಸ್ಯ ಅಭಿನಯ, ಗೀಗೀಪದ ಮುಂತಾದ ಮನೋರಂಜನಾ ಕಾರ್ಯಕ್ರಮಗಳನ್ನು ಕಲಾವಿದರು ಪ್ರದರ್ಶಿಸಿದರು.</p>.<p>ನಾಯಿಂಗ್ಲಜ ಗ್ರಾಮ ಪಂಚಾಯಿತಿ ಪಿಡಿಒ ಶಿವಾನಂದ ದೇಸಾಯಿ, ಶಿವಕುಮಾರ ಕಮತೆ, ಮಾರತಿ ಕಾಮಗೌಡ, ಭರತ ಕಲಾಚಂದ್ರ, ಅಪ್ಪಾಸಾಹೇಬ ಖೋತ, ಆನಂದ ಕಮತೆ, ಸುಪ್ರಿಯಾ ಕಲಾಚಂದ್ರ, ಸುಜಾತ ಮಗದುಮ್ಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-21-160606040</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕೋಡಿ: ‘ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲರಿಗೂ ಸಮಾನತೆ ನೀಡಿದರು’ ಎಂದು ಖಡಕಲಾಟ ಠಾಣೆ ಪಿಎಸ್ಐ ಕೃಷ್ಣವೇಣಿ ಗೋರನಹೊಸೂರ ಹೇಳಿದರು.</p>.<p>ತಾಲ್ಲೂಕಿನ ಧುಳಗನವಾಡಿ ಗ್ರಾಮದಲ್ಲಿ ಚಿಕ್ಕೋಡಿಯ ಆಶಾದೀಪ ಸಮುದಾಯ ಕಲಾಕೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಭೀಮಗೀತ ಗಾಯನ ಕಲಾಸಂಭ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ವಿಶ್ವನಾಥ ಧುಮಾಳ ಮಾತನಾಡಿ, ‘ಶಿಕ್ಷಣದಿಂದ ಮಾತ್ರ ನಮ್ಮ ಬದುಕನ್ನು ಸುಂದರಗೊಳಿಸಿಕೊಳ್ಳಬಹುದಾಗಿದೆ’ ಎಂದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭೀಮಗೀತ ಗಾಯನ, ವೀರಗಾಸೆ ಕುಣಿತ, ಡೊಳ್ಳಿನ ಪದ, ಹಾಸ್ಯ ಅಭಿನಯ, ಗೀಗೀಪದ ಮುಂತಾದ ಮನೋರಂಜನಾ ಕಾರ್ಯಕ್ರಮಗಳನ್ನು ಕಲಾವಿದರು ಪ್ರದರ್ಶಿಸಿದರು.</p>.<p>ನಾಯಿಂಗ್ಲಜ ಗ್ರಾಮ ಪಂಚಾಯಿತಿ ಪಿಡಿಒ ಶಿವಾನಂದ ದೇಸಾಯಿ, ಶಿವಕುಮಾರ ಕಮತೆ, ಮಾರತಿ ಕಾಮಗೌಡ, ಭರತ ಕಲಾಚಂದ್ರ, ಅಪ್ಪಾಸಾಹೇಬ ಖೋತ, ಆನಂದ ಕಮತೆ, ಸುಪ್ರಿಯಾ ಕಲಾಚಂದ್ರ, ಸುಜಾತ ಮಗದುಮ್ಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-21-160606040</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>