<p><strong>ಚಿಕ್ಕೋಡಿ</strong>: ಇಲ್ಲಿನ ಪುರಸಭೆ ಕಚೇರಿ ಕೂಗಳತೆ ದೂರದಲ್ಲಿ ಪುರಸಭೆಯಿಂದ ನಿರ್ಮಿಸಿರುವ ಫ್ಯಾಬ್ರಿಕ್ ವಾಣಿಜ್ಯ ಮಳಿಗೆ ಉದ್ಘಾಟನೆಯಾಗಿ ಒಂದು ವರ್ಷ ಕಳೆದರೂ ಬಳಕೆಗೆ ಮುಕ್ತವಾಗಿಲ್ಲ.</p>.<p>ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ–2 ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಪ್ರಯತ್ನದಿಂದ ₹98 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ವಾಣಿಜ್ಯ ಮಳಿಗೆಯನ್ನು 2024ರ ನವೆಂಬರ್ನಲ್ಲಿ ಉದ್ಘಾಟಿಸಲಾಗಿದೆ.</p>.<p>ಕಾಮಗಾರಿಗೆ 2023-24ನೇ ಸಾಲಿನಲ್ಲಿ ಎಸ್ಎಫ್ಸಿ ಮುಕ್ತ ನಿಧಿ ಯೋಜನೆಯಡಿ ₹63 ಲಕ್ಷ, 15ನೇ ಹಣಕಾಸು ಯೋಜನೆಯಡಿ ₹35 ಲಕ್ಷ ವ್ಯಯಿಸಲಾಗಿದೆ. ರಾಜಕಾಲುವೆ ಮೇಲೆ 27 ಅಂಗಡಿ ತಲೆ ಎತ್ತಿವೆ.</p>.<p>ಕೆಲ ದಿನಗಳ ಹಿಂದಷ್ಟೇ ₹7 ಕೋಟಿಗೂ ಅಧಿಕ ವೆಚ್ಚದಲ್ಲಿ ಗುರುವಾರ ಪೇಟೆಯಲ್ಲಿ ಕೈಗೊಂಡ ರಸ್ತೆ ವಿಸ್ತರಣೆ ಹಾಗೂ ಭೂಗತ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಈಗ ಅಲ್ಲಿಯೇ ವ್ಯಾಪಾರಿಗಳು ಮತ್ತೆ ವ್ಯಾಪಾರ ವಹಿವಾಟು ಆರಂಭಿಸಿದ್ದಾರೆ.</p>.<p>ಆದರೆ, ಅದಕ್ಕೆ ಹೊಂದಿಕೊಂಡ ವಾಣಿಜ್ಯ ಮಳಿಗೆಯನ್ನು ಬಳಕೆಗೆ ಮುಕ್ತಗೊಳಿಸದಿರುವುದು, ಅಂಗಡಿಗಳನ್ನು ವ್ಯಾಪಾರಿಗಳಿಗೆ ಬಾಡಿಗೆಗೆ ನೀಡದಿರುವುದು ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಎತ್ತಿ ತೋರಿಸುತ್ತಿದೆ.</p>.<p>ಈ ಮಳಿಗೆಯಲ್ಲಿ ಒಂದು ಬದಿ 13, ಇನ್ನೊಂದು ಬದಿ 14 ಅಂಗಡಿಗಳಿವೆ. ಆದರೆ, ಮಳಿಗೆಗಳ ಬಳಿ ವಾಹನಗಳ ನಿಲುಗಡೆಗೆ ವ್ಯವಸ್ಥೆಯೇ ಇಲ್ಲದಿರುವುದು ಸಮಸ್ಯೆಯನ್ನು ಇನ್ನಷ್ಟು ಕಗ್ಗಂಟಾಗಿಸಿದೆ!</p>.<p>ಈ ಮಳಿಗೆಯನ್ನು ರಾಜಕಾಲುವೆ ಮೇಲೆ ನಿರ್ಮಿಸಲಾಗಿದೆ. ಒಂದು ಬದಿ ಕಿತ್ತೂರು ರಾಣಿ ಚನ್ನಮ್ಮನ ಪ್ರತಿಮೆ, ಇನ್ನೊಂದು ಬದಿ ತೆರೆದ ಚರಂಡಿ ಇದೆ. ತೆರೆದ ಚರಂಡಿ ಇರುವ ಕಡೆ ತಡೆಗೋಡೆಯನ್ನೂ ನಿರ್ಮಿಸಿಲ್ಲ. ಹಾಗಾಗಿ ವಾಣಿಜ್ಯ ಮಳಿಗೆಯತ್ತ ಬರುವ ಗ್ರಾಹಕರು ಆತಂಕದಿಂದ ಸಂಚರಿಸುವ ಪರಿಸ್ಥಿತಿ ಇದೆ.</p>.<p>ಕಡಿದಾದ ಕಂದಕದಲ್ಲಿ ಚರಂಡಿ ನೀರು ಹರಿಯುತ್ತಿದ್ದು, ಸುತ್ತಲಿನ ಪರಿಸರದಲ್ಲಿ ದುರ್ನಾತ ಹರಡಿದೆ. ಹಾಗಾಗಿ ಮಳಿಗೆಗಳತ್ತ ಸಾಗುವವರು ಮೂಗಿಗೆ ಕರವಸ್ತ್ರ ಕಟ್ಟಿಕೊಂಡು ಸಾಗಬೇಕಿದೆ. ಹಾಗಾಗಿ ಸುತ್ತಲಿನ ವಾತಾವರಣ ಶುಚಿಗೊಳಿಸಿ, ತಡೆಗೋಡೆ ನಿರ್ಮಿಸಬೇಕು ಎಂಬ ಆಗ್ರಹವೂ ಕೇಳಿಬರುತ್ತಿದೆ.</p>.<p>‘ವಾಣಿಜ್ಯ ಮಳಿಗೆಗೆ ಆಗಮಿಸುವ ಗ್ರಾಹಕರು ಹಾಗೂ ವ್ಯಾಪಾರಿಗಳ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಬೇಕು. ಆಗ ಮಳಿಗೆ ಪೂರ್ಣಪ್ರಮಾಣದಲ್ಲಿ ಬಳಕೆಯಾಗಲಿದೆ. ಮಳಿಗೆ ಇರುವ ಸ್ಥಳದಲ್ಲೇ ಇಕ್ಕಟ್ಟಾದ ಸೇತುವೆ ಇದ್ದು, ಅದನ್ನು ವಿಸ್ತರಣೆ ಮಾಡಬೇಕು’ ಎಂಬುದು ಸಾರ್ವಜನಿಕರ ಆಗ್ರಹ.</p>.<p><strong>ಯಾರು ಏನಂತಾರೆ...?</strong> </p><p>ರಾಜಕಾಲುವೆ ಮೇಲೆ ₹98 ಲಕ್ಷ ವೆಚ್ಚದಲ್ಲಿ ವಾಣಿಜ್ಯ ಮಳಿಗೆ ನಿರ್ಮಿಸಿ ಅನುಕೂಲ ಕಲ್ಪಿಸಲಾಗಿದೆ. ಇದೇರೀತಿ ಹಲವು ಕಡೆ ಮಳಿಗೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ </p><p><strong>ಪ್ರಕಾಶ ಹುಕ್ಕೇರಿ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ–2</strong> </p><p>ವಾಣಿಜ್ಯ ಮಳಿಗೆ ಹಂಚಿಕೆಗಾಗಿ ಮೀಸಲಾತಿ ಪ್ರಕಟಿಸಲಾಗಿದ್ದು ಬಾಡಿಗೆಗೆ ನೀಡಲು ಒಂದು ವಾರದಲ್ಲಿ ಪ್ರಕ್ರಿಯೆ ಕೈಗೊಳ್ಳಲಾಗುವುದು </p><p><strong>ಜಗದೀಶ ಈಟಿ ಮುಖ್ಯಾಧಿಕಾರಿ ಪುರಸಭೆ</strong> </p><p>ಮಳಿಗೆಗೆ ಆಗಮಿಸುವ ಗ್ರಾಹಕರಿಗೆ ಅನುಕೂಲವಾಗುವಂತೆ ವಾಹನಗಳ ನಿಲುಗಡೆ ವ್ಯವಸ್ಥೆ ಮಾಡಬೇಕು. ಮಳಿಗೆಯ ಇನ್ನೊಂದು ಬದಿ ತಡೆಗೋಡೆ ನಿರ್ಮಿಸಬೇಕು </p><p><strong>ಶಾಂತಾರಾಮ ಜೋಗಳೆ</strong> </p><p>ಸಾಮಾಜಿಕ ಕಾರ್ಯಕರ್ತ ವಾಣಿಜ್ಯ ಮಳಿಗೆ ಸಮರ್ಪಕವಾಗಿ ಬಳಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ </p><p><strong>ಕೃಷ್ಣ ಕೆಂಚನ್ನವರ ಗ್ರಾಹಕ</strong></p><p> ವಾಣಿಜ್ಯ ಮಳಿಗೆಯ ಅಂಗಡಿಗಳ ಹರಾಜು ಪ್ರಕ್ರಿಯೆ ಆರಂಭವಾಗದಿರುವುದು ಅಧಿಕಾರಿಗಳ ನಿರ್ಲಕ್ಷ್ಯ ಎತ್ತಿ ತೋರಿಸುತ್ತದೆ</p><p><strong>ರಾಚಪ್ಪ ಶಿವಾಪುರೆ ಸ್ಥಳೀಯ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ಇಲ್ಲಿನ ಪುರಸಭೆ ಕಚೇರಿ ಕೂಗಳತೆ ದೂರದಲ್ಲಿ ಪುರಸಭೆಯಿಂದ ನಿರ್ಮಿಸಿರುವ ಫ್ಯಾಬ್ರಿಕ್ ವಾಣಿಜ್ಯ ಮಳಿಗೆ ಉದ್ಘಾಟನೆಯಾಗಿ ಒಂದು ವರ್ಷ ಕಳೆದರೂ ಬಳಕೆಗೆ ಮುಕ್ತವಾಗಿಲ್ಲ.</p>.<p>ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ–2 ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಪ್ರಯತ್ನದಿಂದ ₹98 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ವಾಣಿಜ್ಯ ಮಳಿಗೆಯನ್ನು 2024ರ ನವೆಂಬರ್ನಲ್ಲಿ ಉದ್ಘಾಟಿಸಲಾಗಿದೆ.</p>.<p>ಕಾಮಗಾರಿಗೆ 2023-24ನೇ ಸಾಲಿನಲ್ಲಿ ಎಸ್ಎಫ್ಸಿ ಮುಕ್ತ ನಿಧಿ ಯೋಜನೆಯಡಿ ₹63 ಲಕ್ಷ, 15ನೇ ಹಣಕಾಸು ಯೋಜನೆಯಡಿ ₹35 ಲಕ್ಷ ವ್ಯಯಿಸಲಾಗಿದೆ. ರಾಜಕಾಲುವೆ ಮೇಲೆ 27 ಅಂಗಡಿ ತಲೆ ಎತ್ತಿವೆ.</p>.<p>ಕೆಲ ದಿನಗಳ ಹಿಂದಷ್ಟೇ ₹7 ಕೋಟಿಗೂ ಅಧಿಕ ವೆಚ್ಚದಲ್ಲಿ ಗುರುವಾರ ಪೇಟೆಯಲ್ಲಿ ಕೈಗೊಂಡ ರಸ್ತೆ ವಿಸ್ತರಣೆ ಹಾಗೂ ಭೂಗತ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಈಗ ಅಲ್ಲಿಯೇ ವ್ಯಾಪಾರಿಗಳು ಮತ್ತೆ ವ್ಯಾಪಾರ ವಹಿವಾಟು ಆರಂಭಿಸಿದ್ದಾರೆ.</p>.<p>ಆದರೆ, ಅದಕ್ಕೆ ಹೊಂದಿಕೊಂಡ ವಾಣಿಜ್ಯ ಮಳಿಗೆಯನ್ನು ಬಳಕೆಗೆ ಮುಕ್ತಗೊಳಿಸದಿರುವುದು, ಅಂಗಡಿಗಳನ್ನು ವ್ಯಾಪಾರಿಗಳಿಗೆ ಬಾಡಿಗೆಗೆ ನೀಡದಿರುವುದು ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಎತ್ತಿ ತೋರಿಸುತ್ತಿದೆ.</p>.<p>ಈ ಮಳಿಗೆಯಲ್ಲಿ ಒಂದು ಬದಿ 13, ಇನ್ನೊಂದು ಬದಿ 14 ಅಂಗಡಿಗಳಿವೆ. ಆದರೆ, ಮಳಿಗೆಗಳ ಬಳಿ ವಾಹನಗಳ ನಿಲುಗಡೆಗೆ ವ್ಯವಸ್ಥೆಯೇ ಇಲ್ಲದಿರುವುದು ಸಮಸ್ಯೆಯನ್ನು ಇನ್ನಷ್ಟು ಕಗ್ಗಂಟಾಗಿಸಿದೆ!</p>.<p>ಈ ಮಳಿಗೆಯನ್ನು ರಾಜಕಾಲುವೆ ಮೇಲೆ ನಿರ್ಮಿಸಲಾಗಿದೆ. ಒಂದು ಬದಿ ಕಿತ್ತೂರು ರಾಣಿ ಚನ್ನಮ್ಮನ ಪ್ರತಿಮೆ, ಇನ್ನೊಂದು ಬದಿ ತೆರೆದ ಚರಂಡಿ ಇದೆ. ತೆರೆದ ಚರಂಡಿ ಇರುವ ಕಡೆ ತಡೆಗೋಡೆಯನ್ನೂ ನಿರ್ಮಿಸಿಲ್ಲ. ಹಾಗಾಗಿ ವಾಣಿಜ್ಯ ಮಳಿಗೆಯತ್ತ ಬರುವ ಗ್ರಾಹಕರು ಆತಂಕದಿಂದ ಸಂಚರಿಸುವ ಪರಿಸ್ಥಿತಿ ಇದೆ.</p>.<p>ಕಡಿದಾದ ಕಂದಕದಲ್ಲಿ ಚರಂಡಿ ನೀರು ಹರಿಯುತ್ತಿದ್ದು, ಸುತ್ತಲಿನ ಪರಿಸರದಲ್ಲಿ ದುರ್ನಾತ ಹರಡಿದೆ. ಹಾಗಾಗಿ ಮಳಿಗೆಗಳತ್ತ ಸಾಗುವವರು ಮೂಗಿಗೆ ಕರವಸ್ತ್ರ ಕಟ್ಟಿಕೊಂಡು ಸಾಗಬೇಕಿದೆ. ಹಾಗಾಗಿ ಸುತ್ತಲಿನ ವಾತಾವರಣ ಶುಚಿಗೊಳಿಸಿ, ತಡೆಗೋಡೆ ನಿರ್ಮಿಸಬೇಕು ಎಂಬ ಆಗ್ರಹವೂ ಕೇಳಿಬರುತ್ತಿದೆ.</p>.<p>‘ವಾಣಿಜ್ಯ ಮಳಿಗೆಗೆ ಆಗಮಿಸುವ ಗ್ರಾಹಕರು ಹಾಗೂ ವ್ಯಾಪಾರಿಗಳ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಬೇಕು. ಆಗ ಮಳಿಗೆ ಪೂರ್ಣಪ್ರಮಾಣದಲ್ಲಿ ಬಳಕೆಯಾಗಲಿದೆ. ಮಳಿಗೆ ಇರುವ ಸ್ಥಳದಲ್ಲೇ ಇಕ್ಕಟ್ಟಾದ ಸೇತುವೆ ಇದ್ದು, ಅದನ್ನು ವಿಸ್ತರಣೆ ಮಾಡಬೇಕು’ ಎಂಬುದು ಸಾರ್ವಜನಿಕರ ಆಗ್ರಹ.</p>.<p><strong>ಯಾರು ಏನಂತಾರೆ...?</strong> </p><p>ರಾಜಕಾಲುವೆ ಮೇಲೆ ₹98 ಲಕ್ಷ ವೆಚ್ಚದಲ್ಲಿ ವಾಣಿಜ್ಯ ಮಳಿಗೆ ನಿರ್ಮಿಸಿ ಅನುಕೂಲ ಕಲ್ಪಿಸಲಾಗಿದೆ. ಇದೇರೀತಿ ಹಲವು ಕಡೆ ಮಳಿಗೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ </p><p><strong>ಪ್ರಕಾಶ ಹುಕ್ಕೇರಿ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ–2</strong> </p><p>ವಾಣಿಜ್ಯ ಮಳಿಗೆ ಹಂಚಿಕೆಗಾಗಿ ಮೀಸಲಾತಿ ಪ್ರಕಟಿಸಲಾಗಿದ್ದು ಬಾಡಿಗೆಗೆ ನೀಡಲು ಒಂದು ವಾರದಲ್ಲಿ ಪ್ರಕ್ರಿಯೆ ಕೈಗೊಳ್ಳಲಾಗುವುದು </p><p><strong>ಜಗದೀಶ ಈಟಿ ಮುಖ್ಯಾಧಿಕಾರಿ ಪುರಸಭೆ</strong> </p><p>ಮಳಿಗೆಗೆ ಆಗಮಿಸುವ ಗ್ರಾಹಕರಿಗೆ ಅನುಕೂಲವಾಗುವಂತೆ ವಾಹನಗಳ ನಿಲುಗಡೆ ವ್ಯವಸ್ಥೆ ಮಾಡಬೇಕು. ಮಳಿಗೆಯ ಇನ್ನೊಂದು ಬದಿ ತಡೆಗೋಡೆ ನಿರ್ಮಿಸಬೇಕು </p><p><strong>ಶಾಂತಾರಾಮ ಜೋಗಳೆ</strong> </p><p>ಸಾಮಾಜಿಕ ಕಾರ್ಯಕರ್ತ ವಾಣಿಜ್ಯ ಮಳಿಗೆ ಸಮರ್ಪಕವಾಗಿ ಬಳಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ </p><p><strong>ಕೃಷ್ಣ ಕೆಂಚನ್ನವರ ಗ್ರಾಹಕ</strong></p><p> ವಾಣಿಜ್ಯ ಮಳಿಗೆಯ ಅಂಗಡಿಗಳ ಹರಾಜು ಪ್ರಕ್ರಿಯೆ ಆರಂಭವಾಗದಿರುವುದು ಅಧಿಕಾರಿಗಳ ನಿರ್ಲಕ್ಷ್ಯ ಎತ್ತಿ ತೋರಿಸುತ್ತದೆ</p><p><strong>ರಾಚಪ್ಪ ಶಿವಾಪುರೆ ಸ್ಥಳೀಯ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>