<p><strong>ಚಿಕ್ಕೋಡಿ:</strong> ‘ಪದಾಧಿಕಾರಿಗಳ ನೇಮಕದೊಂದಿಗೆ ಪಕ್ಷಕ್ಕೆ ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶವಾಗಿದೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ವಿನಯಕುಮಾರ ಸೊರಕೆ ಹೇಳಿದರು.</p>.<p>ಪಟ್ಟಣದ ಲೋಕೋಪಯೋಗಿ ಸಭಾಭವನದಲ್ಲಿ ಬುಧವಾರ ಆಯೋಜಿಸಿದ ಚಿಕ್ಕೋಡಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. </p>.<p>‘ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಪಕ್ಷ ಮುಂದಡಿ ಇಟ್ಟಿದೆ. ಸಾಮಾಜಿಕ ಕಳಕಳಿ ಹೊಂದಿರುವ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳೇ ಚುನಾವಣೆ ಗೆಲ್ಲಲು ಆಧಾರವಾಗಿದೆ’ ಎಂದರು.</p>.<p>ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷ ಮುನೀರ ಜನಸಾಲಿ ಮಾತನಾಡಿ, ‘ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕರನ್ನು ಹುಟ್ಟು ಹಾಕುವವರೇ ಬೂತ್ ಮಟ್ಟದ ಕಾರ್ಯಕರ್ತರು. ಹಾಗಾಗಿ ಬೂತ್ ಮಟ್ಟದ ಕಾರ್ಯಕರ್ತರ ಜವಾಬ್ದಾರಿಯು ಮಹತ್ತರವಾಗಿದೆ’ ಎಂದು ಹೇಳಿದರು.</p>.<p>ಸಭೆಯನ್ನು ಉದ್ದೇಶಿಸಿ ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.</p>.<p>ಸಭೆಯಲ್ಲಿ ಮುಖಂಡರಾದ ಮಲ್ಲಿಕಾರ್ಜುನ ರಾಶಿಂಗೆ, ಸಿದಿಕ್ ಅಂಕಲಗಿ, ಸಂತೋಷ ಮುಡಸಿ, ನಿರ್ಮಲಾ ಪಾಟೀಲ, ರಮೇಶ ಪಾಟೀಲ, ಶರಣಪ್ಪ ಕೊಟಗಿ, ಪ್ರಭಾಕರ ಕೋರೆ, ಸಾಬೀರ ಜಮಾದಾರ, ಗುಲಾಬಹುಸೇನ್ ಬಾಗವಾನ, ರವಿ ಪಾಟೀಲ, ರಾಮಕೃಷ್ಣ ಪಾನಬುಡೆ, ಸತೀಶ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ‘ಪದಾಧಿಕಾರಿಗಳ ನೇಮಕದೊಂದಿಗೆ ಪಕ್ಷಕ್ಕೆ ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶವಾಗಿದೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ವಿನಯಕುಮಾರ ಸೊರಕೆ ಹೇಳಿದರು.</p>.<p>ಪಟ್ಟಣದ ಲೋಕೋಪಯೋಗಿ ಸಭಾಭವನದಲ್ಲಿ ಬುಧವಾರ ಆಯೋಜಿಸಿದ ಚಿಕ್ಕೋಡಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. </p>.<p>‘ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಪಕ್ಷ ಮುಂದಡಿ ಇಟ್ಟಿದೆ. ಸಾಮಾಜಿಕ ಕಳಕಳಿ ಹೊಂದಿರುವ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳೇ ಚುನಾವಣೆ ಗೆಲ್ಲಲು ಆಧಾರವಾಗಿದೆ’ ಎಂದರು.</p>.<p>ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷ ಮುನೀರ ಜನಸಾಲಿ ಮಾತನಾಡಿ, ‘ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕರನ್ನು ಹುಟ್ಟು ಹಾಕುವವರೇ ಬೂತ್ ಮಟ್ಟದ ಕಾರ್ಯಕರ್ತರು. ಹಾಗಾಗಿ ಬೂತ್ ಮಟ್ಟದ ಕಾರ್ಯಕರ್ತರ ಜವಾಬ್ದಾರಿಯು ಮಹತ್ತರವಾಗಿದೆ’ ಎಂದು ಹೇಳಿದರು.</p>.<p>ಸಭೆಯನ್ನು ಉದ್ದೇಶಿಸಿ ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.</p>.<p>ಸಭೆಯಲ್ಲಿ ಮುಖಂಡರಾದ ಮಲ್ಲಿಕಾರ್ಜುನ ರಾಶಿಂಗೆ, ಸಿದಿಕ್ ಅಂಕಲಗಿ, ಸಂತೋಷ ಮುಡಸಿ, ನಿರ್ಮಲಾ ಪಾಟೀಲ, ರಮೇಶ ಪಾಟೀಲ, ಶರಣಪ್ಪ ಕೊಟಗಿ, ಪ್ರಭಾಕರ ಕೋರೆ, ಸಾಬೀರ ಜಮಾದಾರ, ಗುಲಾಬಹುಸೇನ್ ಬಾಗವಾನ, ರವಿ ಪಾಟೀಲ, ರಾಮಕೃಷ್ಣ ಪಾನಬುಡೆ, ಸತೀಶ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>