<p><strong>ಚಿಕ್ಕೋಡಿ (ಬೆಳಗಾವಿ ಜಿಲ್ಲೆ):</strong> ಪಟ್ಟಣದಲ್ಲಿ ನಿರ್ಮಿಸಿದ ಕೃಷಿ ಇಲಾಖೆ ಕಚೇರಿ, ಹೆಚ್ಚುವರಿ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ, ಸಾರ್ವಜನಿಕ ಗ್ರಂಥಾಲಯ, ಇಂದಿರಾ ಕ್ಯಾಂಟೀನ್, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕೇಂದ್ರೀಯ ವಿದ್ಯಾಲಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದ್ದರೂ ಉದ್ಘಾಟನೆ ಭಾಗ್ಯ ಮಾತ್ರ ಒದಗಿಬಂದಿಲ್ಲ!</p>.<p>ಕೆಲವು ಕಟ್ಟಡಗಳು ನಾಲ್ಕು ತಿಂಗಳ ಹಿಂದೆ ಮುಗಿದಿದ್ದರೆ ಇನ್ನು ಕೆಲವು ಪೂರ್ಣಗೊಂಡು ವರ್ಷಗಳೇ ಉರುಳಿವೆ. ₹1.75 ಕೋಟಿ ಅನುದಾನದಲ್ಲಿ ಚಿಕ್ಕೋಡಿ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ₹5.70 ಕೋಟಿ ಮೊತ್ತದಲ್ಲಿ ಹೆಚ್ಚುವರಿ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ, ₹40 ಲಕ್ಷ ವೆಚ್ಚದಲ್ಲಿ ಸಾರ್ವಜನಿಕ ಗ್ರಂಥಾಲಯ, ₹20 ಕೋಟಿ ಅನುದಾನದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ₹27.20 ಕೋಟಿಯಲ್ಲಿ ಸದಲಗಾದಲ್ಲಿ ಕೇಂದ್ರೀಯ ವಿದ್ಯಾಲಯ ಸಿದ್ಧಗೊಳಿಸಲಾಗಿದೆ. ಇದರೊಂದಿಗೆ ಚಿಕ್ಕೋಡಿ ಪಟ್ಟಣದಲ್ಲಿ ಹೆಸ್ಕಾಂ ಕಚೇರಿ ಮುಂದೆ ಹಾಗೂ ಬಿಇಒ ಕಚೇರಿ ಆವರಣದಲ್ಲಿ ಎರಡು ಪ್ರತ್ಯೇಕ ಇಂದಿರಾ ಕ್ಯಾಂಟೀನ್ ಕಟ್ಟಡ ಪೂರ್ಣಗೊಂಡಿವೆ. ಆದರೆ, ಜನೋಪಯೋಗಿ ಆಗಿಲ್ಲ.</p>.<p><strong>ಬೆಳಕು ಚೆಲ್ಲಿದ ‘ಪ್ರಜಾವಾಣಿ’: </strong></p><p>ಚಿಕ್ಕೋಡಿಯ ತಾಯಿ– ಮಕ್ಕಳ ಆಸ್ಪತ್ರೆ ಹಾಗೂ ತಾಲ್ಲೂಕಿನ ಸದಲಗಾದ ಕೇಂದ್ರೀಯ ವಿದ್ಯಾಲಯ ಕುರಿತು ‘ಪ್ರಜಾವಾಣಿ’ ಮೇಲಿಂದ ಮೇಲೆ ಬೆಳಕು ಚೆಲ್ಲಿತು. ಪರಿಣಾಮ, ಉದ್ಘಾಟನೆಯಾಗದಿದ್ದರೂ ಇವು ಕಾರ್ಯಾರಂಭ ಮಾಡಿವೆ.</p>.<p>‘₹2.50 ಕೋಟಿ ವೆಚ್ಚದಲ್ಲಿ ಚಿಕ್ಕೋಡಿ ಪುರಸಭೆಗೆ ಕಟ್ಟಡ ನಿರ್ಮಾಣಗೊಂಡು 6 ವರ್ಷಗಳೇ ಕಳೆದಿದ್ದವು. ಈ ಬಗ್ಗೆ ‘ಪ್ರಜಾವಾಣಿ’ ಜನಧ್ವನಿ ಪ್ರಕಟಿಸಿತು. ತುರ್ತು ಕ್ರಮ ಕೈಗೊಂಡ ಶಾಸಕ ಗಣೇಶ ಹುಕ್ಕೇರಿ ಅವರು 2025ರ ಮಾರ್ಚ್ 28ರಂದು ಲೋಕಾರ್ಪಣೆಗೊಳಿಸಿದರು. ಆದರೆ, ಇದೂವರೆಗೆ ಹಳೆಯ ಕಟ್ಟದಿಂದ ಹೊಸ ಕಟ್ಟಡಕ್ಕೆ ಸಂಪೂರ್ಣ ಆಡಳಿತ ಸಲಕರಣೆಗಳು ಸ್ಥಳಾಂತರವಾಗಿಲ್ಲ’ ಎನ್ನುತ್ತಾರೆ ಪಟ್ಟಣವಾಸಿಗಳು.</p>.<p><strong>ಅರ್ಧಕ್ಕೆ ನಿಂತ ಕಟ್ಟಡ: </strong></p><p>ಪಟ್ಟಣದ ಇಂದಿರಾನಗರ ಗೇಟ್ ಬಳಿ 2013ರಲ್ಲಿ ₹1.17 ಕೋಟಿ ಅನುದಾನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ದೇವರಾಜ ಅರಸು ಭವನ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಅನುದಾನದ ಕೊರತೆಯಿಂದ ಅರ್ಧಕ್ಕೆ ನಿಂತಿದ್ದು, 12 ವರ್ಷಗಳಿಂದ ಹಾಗೇ ಉಳಿದಿದೆ ಎಂದು ಜನರು ಅಸಮಾಧಾನ ವ್ಯಕ್ತಪಡಿಸುತ್ತಾರೆ.</p>.<div><blockquote>ಕಟ್ಟಡಗಳನ್ನು ಬೇರೆ ಬೇರೆ ಇಲಾಖೆಗಳ ಅನುದಾನದಲ್ಲಿ ನಿರ್ಮಿಸಲಾಗಿದೆ. ಆಯಾ ಇಲಾಖೆಯ ಸಚಿವರ ಜತೆ ಚರ್ಚಿಸಿ ಶೀಘ್ರ ಉದ್ಘಾಟಿಸಲಾಗುವುದು </blockquote><span class="attribution">ಗಣೇಶ ಹುಕ್ಕೇರಿ ಶಾಸಕ ಚಿಕ್ಕೋಡಿ– ಸದಲಗಾ</span></div>.<div><blockquote>ಪಟ್ಟಣದಲ್ಲಿ ಎರಡು ಇಂದಿರಾ ಕ್ಯಾಂಟೀನ್ ಸಿದ್ಧಗೊಂಡಿವೆ. ಸ್ಥಳೀಯ ಶಾಸಕರ ಅನುಮತಿ ಪಡೆದು ಶೀಘ್ರ ಜನಾರ್ಪಣೆ ಮಾಡಲಾಗುವುದು </blockquote><span class="attribution">ಜಗದೀಶ ಈಟಿ ಮುಖ್ಯಾಧಿಕಾರಿ ಪುರಸಭೆ ಚಿಕ್ಕೋಡಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ (ಬೆಳಗಾವಿ ಜಿಲ್ಲೆ):</strong> ಪಟ್ಟಣದಲ್ಲಿ ನಿರ್ಮಿಸಿದ ಕೃಷಿ ಇಲಾಖೆ ಕಚೇರಿ, ಹೆಚ್ಚುವರಿ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ, ಸಾರ್ವಜನಿಕ ಗ್ರಂಥಾಲಯ, ಇಂದಿರಾ ಕ್ಯಾಂಟೀನ್, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕೇಂದ್ರೀಯ ವಿದ್ಯಾಲಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದ್ದರೂ ಉದ್ಘಾಟನೆ ಭಾಗ್ಯ ಮಾತ್ರ ಒದಗಿಬಂದಿಲ್ಲ!</p>.<p>ಕೆಲವು ಕಟ್ಟಡಗಳು ನಾಲ್ಕು ತಿಂಗಳ ಹಿಂದೆ ಮುಗಿದಿದ್ದರೆ ಇನ್ನು ಕೆಲವು ಪೂರ್ಣಗೊಂಡು ವರ್ಷಗಳೇ ಉರುಳಿವೆ. ₹1.75 ಕೋಟಿ ಅನುದಾನದಲ್ಲಿ ಚಿಕ್ಕೋಡಿ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ₹5.70 ಕೋಟಿ ಮೊತ್ತದಲ್ಲಿ ಹೆಚ್ಚುವರಿ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ, ₹40 ಲಕ್ಷ ವೆಚ್ಚದಲ್ಲಿ ಸಾರ್ವಜನಿಕ ಗ್ರಂಥಾಲಯ, ₹20 ಕೋಟಿ ಅನುದಾನದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ₹27.20 ಕೋಟಿಯಲ್ಲಿ ಸದಲಗಾದಲ್ಲಿ ಕೇಂದ್ರೀಯ ವಿದ್ಯಾಲಯ ಸಿದ್ಧಗೊಳಿಸಲಾಗಿದೆ. ಇದರೊಂದಿಗೆ ಚಿಕ್ಕೋಡಿ ಪಟ್ಟಣದಲ್ಲಿ ಹೆಸ್ಕಾಂ ಕಚೇರಿ ಮುಂದೆ ಹಾಗೂ ಬಿಇಒ ಕಚೇರಿ ಆವರಣದಲ್ಲಿ ಎರಡು ಪ್ರತ್ಯೇಕ ಇಂದಿರಾ ಕ್ಯಾಂಟೀನ್ ಕಟ್ಟಡ ಪೂರ್ಣಗೊಂಡಿವೆ. ಆದರೆ, ಜನೋಪಯೋಗಿ ಆಗಿಲ್ಲ.</p>.<p><strong>ಬೆಳಕು ಚೆಲ್ಲಿದ ‘ಪ್ರಜಾವಾಣಿ’: </strong></p><p>ಚಿಕ್ಕೋಡಿಯ ತಾಯಿ– ಮಕ್ಕಳ ಆಸ್ಪತ್ರೆ ಹಾಗೂ ತಾಲ್ಲೂಕಿನ ಸದಲಗಾದ ಕೇಂದ್ರೀಯ ವಿದ್ಯಾಲಯ ಕುರಿತು ‘ಪ್ರಜಾವಾಣಿ’ ಮೇಲಿಂದ ಮೇಲೆ ಬೆಳಕು ಚೆಲ್ಲಿತು. ಪರಿಣಾಮ, ಉದ್ಘಾಟನೆಯಾಗದಿದ್ದರೂ ಇವು ಕಾರ್ಯಾರಂಭ ಮಾಡಿವೆ.</p>.<p>‘₹2.50 ಕೋಟಿ ವೆಚ್ಚದಲ್ಲಿ ಚಿಕ್ಕೋಡಿ ಪುರಸಭೆಗೆ ಕಟ್ಟಡ ನಿರ್ಮಾಣಗೊಂಡು 6 ವರ್ಷಗಳೇ ಕಳೆದಿದ್ದವು. ಈ ಬಗ್ಗೆ ‘ಪ್ರಜಾವಾಣಿ’ ಜನಧ್ವನಿ ಪ್ರಕಟಿಸಿತು. ತುರ್ತು ಕ್ರಮ ಕೈಗೊಂಡ ಶಾಸಕ ಗಣೇಶ ಹುಕ್ಕೇರಿ ಅವರು 2025ರ ಮಾರ್ಚ್ 28ರಂದು ಲೋಕಾರ್ಪಣೆಗೊಳಿಸಿದರು. ಆದರೆ, ಇದೂವರೆಗೆ ಹಳೆಯ ಕಟ್ಟದಿಂದ ಹೊಸ ಕಟ್ಟಡಕ್ಕೆ ಸಂಪೂರ್ಣ ಆಡಳಿತ ಸಲಕರಣೆಗಳು ಸ್ಥಳಾಂತರವಾಗಿಲ್ಲ’ ಎನ್ನುತ್ತಾರೆ ಪಟ್ಟಣವಾಸಿಗಳು.</p>.<p><strong>ಅರ್ಧಕ್ಕೆ ನಿಂತ ಕಟ್ಟಡ: </strong></p><p>ಪಟ್ಟಣದ ಇಂದಿರಾನಗರ ಗೇಟ್ ಬಳಿ 2013ರಲ್ಲಿ ₹1.17 ಕೋಟಿ ಅನುದಾನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ದೇವರಾಜ ಅರಸು ಭವನ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಅನುದಾನದ ಕೊರತೆಯಿಂದ ಅರ್ಧಕ್ಕೆ ನಿಂತಿದ್ದು, 12 ವರ್ಷಗಳಿಂದ ಹಾಗೇ ಉಳಿದಿದೆ ಎಂದು ಜನರು ಅಸಮಾಧಾನ ವ್ಯಕ್ತಪಡಿಸುತ್ತಾರೆ.</p>.<div><blockquote>ಕಟ್ಟಡಗಳನ್ನು ಬೇರೆ ಬೇರೆ ಇಲಾಖೆಗಳ ಅನುದಾನದಲ್ಲಿ ನಿರ್ಮಿಸಲಾಗಿದೆ. ಆಯಾ ಇಲಾಖೆಯ ಸಚಿವರ ಜತೆ ಚರ್ಚಿಸಿ ಶೀಘ್ರ ಉದ್ಘಾಟಿಸಲಾಗುವುದು </blockquote><span class="attribution">ಗಣೇಶ ಹುಕ್ಕೇರಿ ಶಾಸಕ ಚಿಕ್ಕೋಡಿ– ಸದಲಗಾ</span></div>.<div><blockquote>ಪಟ್ಟಣದಲ್ಲಿ ಎರಡು ಇಂದಿರಾ ಕ್ಯಾಂಟೀನ್ ಸಿದ್ಧಗೊಂಡಿವೆ. ಸ್ಥಳೀಯ ಶಾಸಕರ ಅನುಮತಿ ಪಡೆದು ಶೀಘ್ರ ಜನಾರ್ಪಣೆ ಮಾಡಲಾಗುವುದು </blockquote><span class="attribution">ಜಗದೀಶ ಈಟಿ ಮುಖ್ಯಾಧಿಕಾರಿ ಪುರಸಭೆ ಚಿಕ್ಕೋಡಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>