<p><strong>ಚಿಕ್ಕೋಡಿ:</strong> ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಚಿಕ್ಕೋಡಿ ಜಿಲ್ಲೆಯನ್ನು ಘೋಷಣೆ ಮಾಡುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಸೋಮವಾರ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.</p>.<p>ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಬೆಳಗಾವಿಯನ್ನು ವಿಭಜಿಸಿ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಬೆಳಗಾವಿಯ ಅಧಿವೇಶನದಲ್ಲಿ ಘೋಷಣೆ ಮಾಡಬೇಕು. ವಾರದೊಳಗಾಗಿ ಚಿಕ್ಕೋಡಿ ಜಿಲ್ಲೆ ಘೋಷಣೆ ಮಾಡದಿದ್ದಲ್ಲಿ ಶುಕ್ರವಾರ ಅಥವಾ ಶನಿವಾರ ರೈಲು ತಡೆ ಚಳವಳಿ ಹಮ್ಮಿಕೊಳ್ಳುವುದಾಗಿ ಮುಖಂಡ ನಾಗೇಶ ಮಾಳಿ ಆಗ್ರಹಿಸಿದರು.</p>.<p>ಚಿಕ್ಕೋಡಿ ಜಿಲ್ಲೆ ಘೋಷಣೆಗೆ ಒತ್ತಾಯಿಸಿ 3 ದಶಕಗಳಿಂದ ಹೋರಾಟ ನಡೆಯುತ್ತಲೇ ಇದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮೊದಲು ಮಾತು ಕೊಟ್ಟಂತೆ ಚಿಕ್ಕೋಡಿ ಜಿಲ್ಲೆಯನ್ನು ಘೋಷಿಸಿ ಮಾತು ಉಳಿಸಿಕೊಳ್ಳಬೇಕು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಎಸ್.ವೈ.ಹಂಜಿ ಒತ್ತಾಯಿಸಿ ಗ್ರೇಡ್– 2 ತಹಶೀಲ್ದಾರ್ ಪರಿಮಳಾ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದರು.</p>.<p>ಕಾರ್ಯಾಧ್ಯಕ್ಷ ರುದ್ರಪ್ಪ ಸಂಗಪ್ಪಗೋಳ, ಸುರೇಶ ಬ್ಯಾಕುಡೆ, ನಾಗೇಶ ಮಾಳಿ, ಭರತ ಕಲಾಚಂದ್ರ, ಕೃಷ್ಣ ಕೆಂಚನ್ನವರ, ಸಂಜಯ ಪಾಟೀಲ, ಕುಮಾರ ಗುಡೆ, ರಾಜೇಂದ್ರ ಗಸ್ತಿ, ವೈಶಾಲಿ ಭೋಸಲೆ, ಸುರೇಶ ಇಟಕರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಚಿಕ್ಕೋಡಿ ಜಿಲ್ಲೆಯನ್ನು ಘೋಷಣೆ ಮಾಡುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಸೋಮವಾರ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.</p>.<p>ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಬೆಳಗಾವಿಯನ್ನು ವಿಭಜಿಸಿ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಬೆಳಗಾವಿಯ ಅಧಿವೇಶನದಲ್ಲಿ ಘೋಷಣೆ ಮಾಡಬೇಕು. ವಾರದೊಳಗಾಗಿ ಚಿಕ್ಕೋಡಿ ಜಿಲ್ಲೆ ಘೋಷಣೆ ಮಾಡದಿದ್ದಲ್ಲಿ ಶುಕ್ರವಾರ ಅಥವಾ ಶನಿವಾರ ರೈಲು ತಡೆ ಚಳವಳಿ ಹಮ್ಮಿಕೊಳ್ಳುವುದಾಗಿ ಮುಖಂಡ ನಾಗೇಶ ಮಾಳಿ ಆಗ್ರಹಿಸಿದರು.</p>.<p>ಚಿಕ್ಕೋಡಿ ಜಿಲ್ಲೆ ಘೋಷಣೆಗೆ ಒತ್ತಾಯಿಸಿ 3 ದಶಕಗಳಿಂದ ಹೋರಾಟ ನಡೆಯುತ್ತಲೇ ಇದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮೊದಲು ಮಾತು ಕೊಟ್ಟಂತೆ ಚಿಕ್ಕೋಡಿ ಜಿಲ್ಲೆಯನ್ನು ಘೋಷಿಸಿ ಮಾತು ಉಳಿಸಿಕೊಳ್ಳಬೇಕು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಎಸ್.ವೈ.ಹಂಜಿ ಒತ್ತಾಯಿಸಿ ಗ್ರೇಡ್– 2 ತಹಶೀಲ್ದಾರ್ ಪರಿಮಳಾ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದರು.</p>.<p>ಕಾರ್ಯಾಧ್ಯಕ್ಷ ರುದ್ರಪ್ಪ ಸಂಗಪ್ಪಗೋಳ, ಸುರೇಶ ಬ್ಯಾಕುಡೆ, ನಾಗೇಶ ಮಾಳಿ, ಭರತ ಕಲಾಚಂದ್ರ, ಕೃಷ್ಣ ಕೆಂಚನ್ನವರ, ಸಂಜಯ ಪಾಟೀಲ, ಕುಮಾರ ಗುಡೆ, ರಾಜೇಂದ್ರ ಗಸ್ತಿ, ವೈಶಾಲಿ ಭೋಸಲೆ, ಸುರೇಶ ಇಟಕರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>