<p>ಚಂದ್ರಶೇಖರ ಎಸ್.ಚಿನಕೇಕರ</p>.<p><strong>ಚಿಕ್ಕೋಡಿ:</strong> ಕಳೆದೊಂದು ವಾರದಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದ ಪಟ್ಟಣವೂ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳ ರಸ್ತೆಗಳು ಅಧೋಗತಿಗೆ ತಲುಪಿವೆ. ಗುಂಡಿಗಳಿಂದ ತುಂಬಿದ ಈ ರಸ್ತೆಗಳಲ್ಲಿ ವಾಹನ ಸವಾರರು ಪ್ರಯಾಸಪಡುತ್ತ ಸಂಚರಿಸುತ್ತಿದ್ದಾರೆ. </p>.<p>ಚಿಕ್ಕೋಡಿಯ ಅಂಕಲಿ ಖೂಟದ ಬಳಿ ಇರುವ ರಸ್ತೆ ಹಲವು ವರ್ಷಗಳಿಂದ ಡಾಂಬರೀಕರಣ ಕಂಡಿಲ್ಲ. ಕನಿಷ್ಠ ಪಕ್ಷ ಆ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚುವ ಕೆಲಸವೂ ಆಗಿಲ್ಲ.</p>.<p>ಈಚೆಗೆ ಗ್ಯಾಸ್ ಪೈಪ್ಲೈನ್ ಕಾಮಗಾರಿ ಕೈಗೆತ್ತಿಕೊಂಡ ಖಾಸಗಿ ಕಂಪನಿ ಎಲ್ಲೆಂದರಲ್ಲಿ ರಸ್ತೆ ಅಗೆದಿದೆ. ದುರ್ಗಮವಾದ ಈ ರಸ್ತೆಯಲ್ಲಿ ಗುಂಡಿ ಇವೆಯೋ ಅಥವಾ ಗುಂಡಿಯಲ್ಲೇ ರಸ್ತೆ ಇದೆಯೋ? ಎಂದು ಅನುಮಾನ ಪಡುವಂತಾಗಿದೆ.</p>.<p>ಪಟ್ಟಣದ ಹೃದಯಭಾಗವಾದ ಬಸವೇಶ್ವರ ವೃತ್ತದ ಬಳಿ ಇರುವ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಿದೆ. ಸ್ವಲ್ಪ ಎಚ್ಚರ ತಪ್ಪಿದರೂ ಅಪಘಾತ ಗ್ಯಾರಂಟಿ ಎನ್ನುವ ಸ್ಥಿತಿ ಇದೆ.</p>.<p>ಪ್ರತಿ ಮಳೆಗಾಲದಲ್ಲಿ ಈ ರಸ್ತೆಗಳು ಅಧೋಗತಿಗೆ ತಲುಪುತ್ತಿದ್ದರೂ, ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಕಂಡುಬರುತ್ತಿದೆ. ಹಾಳಾಗಿರುವ ರಸ್ತೆಗಳಲ್ಲಿ ಸಂಚಾರ ಸಮಸ್ಯೆ ಮಿತಿಮೀರಿದೆ.</p>.<p>‘ಜಿಲ್ಲಾಕೇಂದ್ರವಾಗುವ ಎಲ್ಲ ಸ್ಥಾನಮಾನ ಹೊಂದಿದ ಚಿಕ್ಕೋಡಿಯಲ್ಲಿ ರಸ್ತೆಗಳ ಅವ್ಯವಸ್ಥೆ ಹಲವು ವರ್ಷಗಳಿಂದ ಇದೆ. ಜನರು ಆಕ್ರೋಶ ವ್ಯಕ್ತಪಡಿಸಿದಾಗ ಗುಂಡಿ ಮುಚ್ಚುವ ಬದಲಿಗೆ, ಹೊಸದಾಗಿ ರಸ್ತೆ ನಿರ್ಮಿಸಬೇಕು. ವಾಹನ ಸವಾರರ ಜೀವದೊಂದಿಗೆ ಚೆಲ್ಲಾಟವಾಡಬಾರದು’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><blockquote>ಚಿಕ್ಕೋಡಿಯಲ್ಲಿ ಪ್ರತಿ ಮಳೆಗಾಲದಲ್ಲಿ ರಸ್ತೆ ಹಾಳಾಗುತ್ತಿವೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ಅಗತ್ಯವಿದೆ</blockquote><span class="attribution">ಮಂಜುನಾಥ ಪರಗೌಡ ವಾಹನ ಸವಾರ ಕೇರೂರ</span></div>.<div><blockquote>ಚಿಕ್ಕೋಡಿ ಪಟ್ಟಣದ ರಸ್ತೆಗಳ ತುಂಬೆಲ್ಲ ಗುಂಡಿ ಬಿದ್ದಿದ್ದು ಸಂಚಾರಕ್ಕೆ ತೊಡಕಾಗಿದೆ. ಪುಟ್ಟ ಮಕ್ಕಳು ಆತಂಕದಿಂದ ಸಂಚರಿಸುತ್ತಿದ್ದಾರೆ</blockquote><span class="attribution">-ಮಹೇಶ ಪತ್ತಾರ, ವಿದ್ಯಾರ್ಥಿ ಚಿಕ್ಕೋಡಿ</span></div>.<div><blockquote>ಹೆದ್ದಾರಿಗಳು ಪ್ರಮುಖ ರಸ್ತೆಗಳಲ್ಲಿ ಗುಂಡಿ ಹೆಚ್ಚಿದ್ದರಿಂದ ಸಂಚಾರಕ್ಕೆ ಸಮಸ್ಯೆಯಾಗಿದೆ. ಪ್ರಯಾಣದ ಅವಧಿ ದುಪ್ಪಟ್ಟಾಗಿದೆ</blockquote><span class="attribution"> ಪೂಜಾ ಸಾಳುಂಕೆ, ಸ್ಥಳೀಯ ಮಹಿಳೆ</span></div>.<div><blockquote> ಪಟ್ಟಣದ ಹಲವು ಕಡೆಗೆ ರಸ್ತೆ ಡಾಂಬರೀಕಣ ಮಾಡಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಗುಂಡಿ ಬಿದ್ದಿರುವುದು ಗಮನಕ್ಕೆ ಬಂದಿದೆ. ಮಳೆ ನಿಂತ ತಕ್ಷಣ ರಸ್ತೆಗಳ ಸುಧಾರಣೆಗೆ ಕ್ರಮ ವಹಿಸಲಾಗುವುದು </blockquote><span class="attribution">ಜಗದೀಶ ಈಟಿ, ಮುಖ್ಯಾಧಿಕಾರಿ ಪುರಸಭೆ ಚಿಕ್ಕೋಡಿ</span></div>.<div><blockquote>ಲೋಕೋಪಯೋಗಿ ಇಲಾಖೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ಕರೆದು ರಸ್ತೆಗಳಲ್ಲಿನ ಗುಂಡಿ ಮುಚ್ಚುವಂತೆ ಸೂಚಿಸಲಾಗಿದೆ</blockquote><span class="attribution">- ರಾಜೇಶ ಬುರ್ಲಿ, ತಹಶೀಲ್ದಾರ್ ಚಿಕ್ಕೋಡಿ</span></div>. <p><strong>ಹೆದ್ದಾರಿಯಲ್ಲೂ ಇದೇ ಸ್ಥಿತಿ:</strong> ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ವಿವಿಧ ರಾಜ್ಯ ಹೆದ್ದಾರಿಗಳಲ್ಲಿ ಇದೇ ಸ್ಥಿತಿ ಇದೆ. ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಯಲ್ಲಿ ಕಮತನೂರ ಗೇಟ್ನಿಂದ ಕಾಗವಾಡದವರೆಗೆ ಗುಂಡಿಗಳು ಹೆಚ್ಚಿವೆ. ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಿಲ್ಲ. ಕಬ್ಬೂರ ಪಟ್ಟಣದ ಟೋಲ್ ನಾಕಾ ಬಳಿ ಹಾದುಹೋಗಿರುವ ಚಿಕ್ಕೋಡಿ ಉಪಕಾಲುವೆ ಬಳಿ ಗುಂಡಿ ಬಿದ್ದು ಹಲವು ತಿಂಗಳಾಗಿವೆ. ಆದರೆ ಇಂದಿಗೂ ದುರಸ್ತಿಯಾಗಿಲ್ಲ. ಚಿಕ್ಕೋಡಿಯಿಂದ ಮಹಾರಾಷ್ಟ್ರದ ಇಚಲಕರಂಜಿಗೆ ತೆರಳುವ ಮಾರ್ಗದ ರಸ್ತೆಯೂ ಹಾಳಾಗಿದೆ.</p>.<p> <strong>‘ಯುದ್ಧೋಪಾದಿಯಲ್ಲಿ ದುರಸ್ತಿ ಮಾಡಿ’</strong> </p><p>‘ಸತತ ಮಳೆ ಪ್ರವಾಹದಿಂದ ಬೆಳಗಾವಿ ಜಿಲ್ಲೆಯಲ್ಲಿನ ರಸ್ತೆಗಳೆಲ್ಲ ಹಾಳಾಗಿವೆ. ಯುದ್ಧೋಪಾದಿಯಲ್ಲಿ ಅವುಗಳನ್ನು ದುರಸ್ತಿ ಮಾಡಿ ಸವಾರರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಂದ್ರಶೇಖರ ಎಸ್.ಚಿನಕೇಕರ</p>.<p><strong>ಚಿಕ್ಕೋಡಿ:</strong> ಕಳೆದೊಂದು ವಾರದಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದ ಪಟ್ಟಣವೂ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳ ರಸ್ತೆಗಳು ಅಧೋಗತಿಗೆ ತಲುಪಿವೆ. ಗುಂಡಿಗಳಿಂದ ತುಂಬಿದ ಈ ರಸ್ತೆಗಳಲ್ಲಿ ವಾಹನ ಸವಾರರು ಪ್ರಯಾಸಪಡುತ್ತ ಸಂಚರಿಸುತ್ತಿದ್ದಾರೆ. </p>.<p>ಚಿಕ್ಕೋಡಿಯ ಅಂಕಲಿ ಖೂಟದ ಬಳಿ ಇರುವ ರಸ್ತೆ ಹಲವು ವರ್ಷಗಳಿಂದ ಡಾಂಬರೀಕರಣ ಕಂಡಿಲ್ಲ. ಕನಿಷ್ಠ ಪಕ್ಷ ಆ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚುವ ಕೆಲಸವೂ ಆಗಿಲ್ಲ.</p>.<p>ಈಚೆಗೆ ಗ್ಯಾಸ್ ಪೈಪ್ಲೈನ್ ಕಾಮಗಾರಿ ಕೈಗೆತ್ತಿಕೊಂಡ ಖಾಸಗಿ ಕಂಪನಿ ಎಲ್ಲೆಂದರಲ್ಲಿ ರಸ್ತೆ ಅಗೆದಿದೆ. ದುರ್ಗಮವಾದ ಈ ರಸ್ತೆಯಲ್ಲಿ ಗುಂಡಿ ಇವೆಯೋ ಅಥವಾ ಗುಂಡಿಯಲ್ಲೇ ರಸ್ತೆ ಇದೆಯೋ? ಎಂದು ಅನುಮಾನ ಪಡುವಂತಾಗಿದೆ.</p>.<p>ಪಟ್ಟಣದ ಹೃದಯಭಾಗವಾದ ಬಸವೇಶ್ವರ ವೃತ್ತದ ಬಳಿ ಇರುವ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಿದೆ. ಸ್ವಲ್ಪ ಎಚ್ಚರ ತಪ್ಪಿದರೂ ಅಪಘಾತ ಗ್ಯಾರಂಟಿ ಎನ್ನುವ ಸ್ಥಿತಿ ಇದೆ.</p>.<p>ಪ್ರತಿ ಮಳೆಗಾಲದಲ್ಲಿ ಈ ರಸ್ತೆಗಳು ಅಧೋಗತಿಗೆ ತಲುಪುತ್ತಿದ್ದರೂ, ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಕಂಡುಬರುತ್ತಿದೆ. ಹಾಳಾಗಿರುವ ರಸ್ತೆಗಳಲ್ಲಿ ಸಂಚಾರ ಸಮಸ್ಯೆ ಮಿತಿಮೀರಿದೆ.</p>.<p>‘ಜಿಲ್ಲಾಕೇಂದ್ರವಾಗುವ ಎಲ್ಲ ಸ್ಥಾನಮಾನ ಹೊಂದಿದ ಚಿಕ್ಕೋಡಿಯಲ್ಲಿ ರಸ್ತೆಗಳ ಅವ್ಯವಸ್ಥೆ ಹಲವು ವರ್ಷಗಳಿಂದ ಇದೆ. ಜನರು ಆಕ್ರೋಶ ವ್ಯಕ್ತಪಡಿಸಿದಾಗ ಗುಂಡಿ ಮುಚ್ಚುವ ಬದಲಿಗೆ, ಹೊಸದಾಗಿ ರಸ್ತೆ ನಿರ್ಮಿಸಬೇಕು. ವಾಹನ ಸವಾರರ ಜೀವದೊಂದಿಗೆ ಚೆಲ್ಲಾಟವಾಡಬಾರದು’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><blockquote>ಚಿಕ್ಕೋಡಿಯಲ್ಲಿ ಪ್ರತಿ ಮಳೆಗಾಲದಲ್ಲಿ ರಸ್ತೆ ಹಾಳಾಗುತ್ತಿವೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ಅಗತ್ಯವಿದೆ</blockquote><span class="attribution">ಮಂಜುನಾಥ ಪರಗೌಡ ವಾಹನ ಸವಾರ ಕೇರೂರ</span></div>.<div><blockquote>ಚಿಕ್ಕೋಡಿ ಪಟ್ಟಣದ ರಸ್ತೆಗಳ ತುಂಬೆಲ್ಲ ಗುಂಡಿ ಬಿದ್ದಿದ್ದು ಸಂಚಾರಕ್ಕೆ ತೊಡಕಾಗಿದೆ. ಪುಟ್ಟ ಮಕ್ಕಳು ಆತಂಕದಿಂದ ಸಂಚರಿಸುತ್ತಿದ್ದಾರೆ</blockquote><span class="attribution">-ಮಹೇಶ ಪತ್ತಾರ, ವಿದ್ಯಾರ್ಥಿ ಚಿಕ್ಕೋಡಿ</span></div>.<div><blockquote>ಹೆದ್ದಾರಿಗಳು ಪ್ರಮುಖ ರಸ್ತೆಗಳಲ್ಲಿ ಗುಂಡಿ ಹೆಚ್ಚಿದ್ದರಿಂದ ಸಂಚಾರಕ್ಕೆ ಸಮಸ್ಯೆಯಾಗಿದೆ. ಪ್ರಯಾಣದ ಅವಧಿ ದುಪ್ಪಟ್ಟಾಗಿದೆ</blockquote><span class="attribution"> ಪೂಜಾ ಸಾಳುಂಕೆ, ಸ್ಥಳೀಯ ಮಹಿಳೆ</span></div>.<div><blockquote> ಪಟ್ಟಣದ ಹಲವು ಕಡೆಗೆ ರಸ್ತೆ ಡಾಂಬರೀಕಣ ಮಾಡಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಗುಂಡಿ ಬಿದ್ದಿರುವುದು ಗಮನಕ್ಕೆ ಬಂದಿದೆ. ಮಳೆ ನಿಂತ ತಕ್ಷಣ ರಸ್ತೆಗಳ ಸುಧಾರಣೆಗೆ ಕ್ರಮ ವಹಿಸಲಾಗುವುದು </blockquote><span class="attribution">ಜಗದೀಶ ಈಟಿ, ಮುಖ್ಯಾಧಿಕಾರಿ ಪುರಸಭೆ ಚಿಕ್ಕೋಡಿ</span></div>.<div><blockquote>ಲೋಕೋಪಯೋಗಿ ಇಲಾಖೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ಕರೆದು ರಸ್ತೆಗಳಲ್ಲಿನ ಗುಂಡಿ ಮುಚ್ಚುವಂತೆ ಸೂಚಿಸಲಾಗಿದೆ</blockquote><span class="attribution">- ರಾಜೇಶ ಬುರ್ಲಿ, ತಹಶೀಲ್ದಾರ್ ಚಿಕ್ಕೋಡಿ</span></div>. <p><strong>ಹೆದ್ದಾರಿಯಲ್ಲೂ ಇದೇ ಸ್ಥಿತಿ:</strong> ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ವಿವಿಧ ರಾಜ್ಯ ಹೆದ್ದಾರಿಗಳಲ್ಲಿ ಇದೇ ಸ್ಥಿತಿ ಇದೆ. ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಯಲ್ಲಿ ಕಮತನೂರ ಗೇಟ್ನಿಂದ ಕಾಗವಾಡದವರೆಗೆ ಗುಂಡಿಗಳು ಹೆಚ್ಚಿವೆ. ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಿಲ್ಲ. ಕಬ್ಬೂರ ಪಟ್ಟಣದ ಟೋಲ್ ನಾಕಾ ಬಳಿ ಹಾದುಹೋಗಿರುವ ಚಿಕ್ಕೋಡಿ ಉಪಕಾಲುವೆ ಬಳಿ ಗುಂಡಿ ಬಿದ್ದು ಹಲವು ತಿಂಗಳಾಗಿವೆ. ಆದರೆ ಇಂದಿಗೂ ದುರಸ್ತಿಯಾಗಿಲ್ಲ. ಚಿಕ್ಕೋಡಿಯಿಂದ ಮಹಾರಾಷ್ಟ್ರದ ಇಚಲಕರಂಜಿಗೆ ತೆರಳುವ ಮಾರ್ಗದ ರಸ್ತೆಯೂ ಹಾಳಾಗಿದೆ.</p>.<p> <strong>‘ಯುದ್ಧೋಪಾದಿಯಲ್ಲಿ ದುರಸ್ತಿ ಮಾಡಿ’</strong> </p><p>‘ಸತತ ಮಳೆ ಪ್ರವಾಹದಿಂದ ಬೆಳಗಾವಿ ಜಿಲ್ಲೆಯಲ್ಲಿನ ರಸ್ತೆಗಳೆಲ್ಲ ಹಾಳಾಗಿವೆ. ಯುದ್ಧೋಪಾದಿಯಲ್ಲಿ ಅವುಗಳನ್ನು ದುರಸ್ತಿ ಮಾಡಿ ಸವಾರರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>