<p><strong>ಚಿಕ್ಕೋಡಿ:</strong> ತಾಲ್ಲೂಕಿನ ಕೋಥಳಿ–ಕುಪ್ಪಾನವಾಡಿಯ ಆಚಾರ್ಯ ದೇಶಭೂಷಣ ಜೈನ ಆಶ್ರಮದ ಸಾಕು ಆನೆ ಉಷಾರಾಣಿ (50) ಅನಾರೋಗ್ಯದಿಂದ ಶನಿವಾರ ಸಾವನ್ನಪ್ಪಿದ್ದು, ಆಚಾರ್ಯ ದೇಶ ಭೂಷಣ ಆಶ್ರಮ ಟ್ರಸ್ಟ್ ಹಾಗೂ ಶಾಂತಿಗಿರಿ ಟ್ರಸ್ಟ್ ವತಿಯಿಂದ ಅಂತಿಮ ನಮನಗಳನ್ನು ಸಲ್ಲಿಸಲಾಯಿತು.</p><p>ಆಶ್ರಮದ ಆವರಣದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಅನ್ವಯ ಜೈನ ಮುನಿಗಳು ಹಾಗೂ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ತಿಳಿಸಲಾಗಿದೆ.</p><p>1977ರಲ್ಲಿ 3 ವರ್ಷದ ಮರಿ ಇದ್ದಾಗ ಶಿವಮೊಗ್ಗದ ಅರಣ್ಯ ಪ್ರದೇಶದಿಂದ ತರಲಾಗಿದ್ದ ಆನೆಗೆ 1978ರಲ್ಲಿ ಉಷಾರಾಣಿ ಎಂದು ನಾಮಕರಣ ಮಾಡಲಾಗಿತ್ತು. ಕಳೆದ 4 ದಶಕಗಳಿಂದ ಉಷಾರಾಣಿ ಆನೆಯನ್ನು ತ್ರಿಲೋಕ ವಿಧಾನ ಪೂಜಾ ಕಾರ್ಯಕ್ರಮ, ಪಂಚಕಲ್ಯಾಣ ಮೆರವಣಿಗೆ, ವಿವಿಧ ಜಾತ್ರಾ ಮಹೋತ್ಸವಗಳ ಮೆರವಣಿಗೆಯಲ್ಲಿ ಬಳಸಲಾಗುತ್ತಿತ್ತು. ರಾಜ್ಯದ ಬೆಳಗಾವಿ, ಮಹಾರಾಷ್ಟ್ರದ ಕೊಲ್ಹಾಪುರ, ಸಾಂಗ್ಲಿ ಜಿಲ್ಲೆ ಸೇರಿದಂತೆ ಹಲವು ಕಡೆಗೆ ಉಷಾರಾಣಿ ಆನೆಯು ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಪ್ರಮುಖ ಆಕರ್ಷಣೆಯಾಗಿತ್ತು.</p><p>ಅನಾರೋಗ್ಯ ಪೀಡಿತವಾಗಿ ಸಾವನ್ನಪ್ಪಿದ ಉಷಾರಾಣಿ ಆನೆಯ ಮರಣೋತ್ತರ ಪರೀಕ್ಷೆಯ ಬಳಿಕ ಅರಣ್ಯ ಇಲಾಖೆಯ ನಿಯಮಾವಳಿಯಂತೆ ಅಗ್ನಿ ಸ್ಪರ್ಶದ ಮೂಲಕ ಅಂತ್ಯಕ್ರಿಯೆನ್ನು ಆಶ್ರಮದ ಆವರಣದಲ್ಲಿ ರಾತ್ರಿ 8 ಗಂಟೆಗೆ ನೆರವೇರಿಸಲಾಯಿತು.</p><p>ಅಂತ್ಯಕ್ರಿಯೆಲ್ಲಿ ಶಾಂತಿಗಿರಿ ಟ್ರಸ್ಟ್ ಮುಖ್ಯಸ್ಥರಾದ ಪಿ ಆರ್ ಪಾಟೀಲ, ಪಾಸಗೊಂಡ ಪಾಟೀಲ, ಸಂದೀಪ ಪಾಟೀಲ, ದೇಶಭೂಷಣ ಆಶ್ರಮ ಟ್ರಸ್ಟ್ ಅಧ್ಯಕ್ಷ ವರ್ಧಮಾನ ಸದಲಗೆ, ಶಾಂತಿನಾಥ ತಾರದಾಳೆ, ಆದಿನಾಥ ಶೆಟ್ಟಿ, ಇಂದ್ರಜೀತ ಪಾಟೀಲ, ಮಹಾವೀರ ಮುಖರೆ ಸೇರಿದಂತೆ ಕೋಥಳಿ-ಕುಪ್ಪಾನವಾಡಿ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ತಾಲ್ಲೂಕಿನ ಕೋಥಳಿ–ಕುಪ್ಪಾನವಾಡಿಯ ಆಚಾರ್ಯ ದೇಶಭೂಷಣ ಜೈನ ಆಶ್ರಮದ ಸಾಕು ಆನೆ ಉಷಾರಾಣಿ (50) ಅನಾರೋಗ್ಯದಿಂದ ಶನಿವಾರ ಸಾವನ್ನಪ್ಪಿದ್ದು, ಆಚಾರ್ಯ ದೇಶ ಭೂಷಣ ಆಶ್ರಮ ಟ್ರಸ್ಟ್ ಹಾಗೂ ಶಾಂತಿಗಿರಿ ಟ್ರಸ್ಟ್ ವತಿಯಿಂದ ಅಂತಿಮ ನಮನಗಳನ್ನು ಸಲ್ಲಿಸಲಾಯಿತು.</p><p>ಆಶ್ರಮದ ಆವರಣದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಅನ್ವಯ ಜೈನ ಮುನಿಗಳು ಹಾಗೂ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ತಿಳಿಸಲಾಗಿದೆ.</p><p>1977ರಲ್ಲಿ 3 ವರ್ಷದ ಮರಿ ಇದ್ದಾಗ ಶಿವಮೊಗ್ಗದ ಅರಣ್ಯ ಪ್ರದೇಶದಿಂದ ತರಲಾಗಿದ್ದ ಆನೆಗೆ 1978ರಲ್ಲಿ ಉಷಾರಾಣಿ ಎಂದು ನಾಮಕರಣ ಮಾಡಲಾಗಿತ್ತು. ಕಳೆದ 4 ದಶಕಗಳಿಂದ ಉಷಾರಾಣಿ ಆನೆಯನ್ನು ತ್ರಿಲೋಕ ವಿಧಾನ ಪೂಜಾ ಕಾರ್ಯಕ್ರಮ, ಪಂಚಕಲ್ಯಾಣ ಮೆರವಣಿಗೆ, ವಿವಿಧ ಜಾತ್ರಾ ಮಹೋತ್ಸವಗಳ ಮೆರವಣಿಗೆಯಲ್ಲಿ ಬಳಸಲಾಗುತ್ತಿತ್ತು. ರಾಜ್ಯದ ಬೆಳಗಾವಿ, ಮಹಾರಾಷ್ಟ್ರದ ಕೊಲ್ಹಾಪುರ, ಸಾಂಗ್ಲಿ ಜಿಲ್ಲೆ ಸೇರಿದಂತೆ ಹಲವು ಕಡೆಗೆ ಉಷಾರಾಣಿ ಆನೆಯು ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಪ್ರಮುಖ ಆಕರ್ಷಣೆಯಾಗಿತ್ತು.</p><p>ಅನಾರೋಗ್ಯ ಪೀಡಿತವಾಗಿ ಸಾವನ್ನಪ್ಪಿದ ಉಷಾರಾಣಿ ಆನೆಯ ಮರಣೋತ್ತರ ಪರೀಕ್ಷೆಯ ಬಳಿಕ ಅರಣ್ಯ ಇಲಾಖೆಯ ನಿಯಮಾವಳಿಯಂತೆ ಅಗ್ನಿ ಸ್ಪರ್ಶದ ಮೂಲಕ ಅಂತ್ಯಕ್ರಿಯೆನ್ನು ಆಶ್ರಮದ ಆವರಣದಲ್ಲಿ ರಾತ್ರಿ 8 ಗಂಟೆಗೆ ನೆರವೇರಿಸಲಾಯಿತು.</p><p>ಅಂತ್ಯಕ್ರಿಯೆಲ್ಲಿ ಶಾಂತಿಗಿರಿ ಟ್ರಸ್ಟ್ ಮುಖ್ಯಸ್ಥರಾದ ಪಿ ಆರ್ ಪಾಟೀಲ, ಪಾಸಗೊಂಡ ಪಾಟೀಲ, ಸಂದೀಪ ಪಾಟೀಲ, ದೇಶಭೂಷಣ ಆಶ್ರಮ ಟ್ರಸ್ಟ್ ಅಧ್ಯಕ್ಷ ವರ್ಧಮಾನ ಸದಲಗೆ, ಶಾಂತಿನಾಥ ತಾರದಾಳೆ, ಆದಿನಾಥ ಶೆಟ್ಟಿ, ಇಂದ್ರಜೀತ ಪಾಟೀಲ, ಮಹಾವೀರ ಮುಖರೆ ಸೇರಿದಂತೆ ಕೋಥಳಿ-ಕುಪ್ಪಾನವಾಡಿ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>