<p>ಚಿಕ್ಕೋಡಿ: ತಾಲ್ಲೂಕಿನ ಮನೂಚಿವಾಡಿ ಗ್ರಾಮದಲ್ಲಿ ಶಾಸಕ ಗಣೇಶ ಹುಕ್ಕೇರಿ ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಪ್ರಯತ್ನದಿಂದ ಬಿಡುಗೆಯಾದ ₹ 1 ಕೋಟಿ ಮೊತ್ತದಲ್ಲಿ ರಸ್ತೆ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸತೀಶ ಪಾಟೀಲ ಬುಧವಾರ ಚಾಲನೆ ನೀಡಿದರು.</p>.<p>ಕಾರ್ಯಕ್ರಮ ಉದ್ದೇಶಿಸಿ ಸತೀಶ ಪಾಟೀಲ ಮಾತನಾಡಿ, ’ಗಣೇಶ ಹುಕ್ಕೇರಿ ಹಾಗೂ ಪ್ರಕಾಶ ಹುಕ್ಕೇರಿ ಅವರ ಜನಪ್ರಿಯ ಕೆಲಸಗಳು ಕ್ಷೇತ್ರದ ಜನರ ಮನ ಗೆದ್ದಿವೆ. ಇಂತಹ ಕ್ರಿಯಾಶೀಲ ಜನಪ್ರತಿನಿಧಿಗಳ ಬೆಂಬಲದಿಂದ ಗ್ರಾಮ ಸರ್ವಾಂಗೀಣ ಅಭಿವೃದ್ಧಿಯಾಗುವುದು ಸಾಧ್ಯವಿದೆ’ ಎಂದು ಹೇಳಿದರು.</p>.<p>ಖಡಕಲಾಟದ ಅಪ್ಪನವರ ಮಠದ ಶಿವಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ’ರಸ್ತೆಗಳು ಗ್ರಾಮದ ಅಭಿವೃದ್ಧಿಯ ನಾಡಿಮಿಡಿತವಿದ್ದಂತೆ. ರೈತರು ತಮ್ಮ ಬೆಳೆಯನ್ನು ಮಾರುಕಟ್ಟೆಗೆ ಸಾಗಿಸಲು ಉತ್ತಮ ರಸ್ತೆಗಳ ಅವಶ್ಯಕತೆ ಇದೆ. ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿ ಸಾರ್ವಜನಿಕರಿಗೆ ಶೀಘ್ರ ಲಭ್ಯವಾಗುವಂತಾಗಲಿ’ ಎಂದರು.</p>.<p>ಸ್ಥಳೀಯ ಮುಖಂಡರಾದ ಸತೀಶ ಪಾಟೀಲ, ಧರ್ಮಾ ಖೋತ, ಶರದ ಖೋತ, ಕಿರಣ ಖೋತ, ರಾಹುಲ ಜಾಧವ, ಪ್ರವೀಣ ಪಾಟೀಲ, ದಿಲೀಪ ಪಾಟೀಲ, ಗೌತಮ ಕಾವಡಕರ, ವಿಜಯ ಖೋತ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-21-594318838</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕೋಡಿ: ತಾಲ್ಲೂಕಿನ ಮನೂಚಿವಾಡಿ ಗ್ರಾಮದಲ್ಲಿ ಶಾಸಕ ಗಣೇಶ ಹುಕ್ಕೇರಿ ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಪ್ರಯತ್ನದಿಂದ ಬಿಡುಗೆಯಾದ ₹ 1 ಕೋಟಿ ಮೊತ್ತದಲ್ಲಿ ರಸ್ತೆ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸತೀಶ ಪಾಟೀಲ ಬುಧವಾರ ಚಾಲನೆ ನೀಡಿದರು.</p>.<p>ಕಾರ್ಯಕ್ರಮ ಉದ್ದೇಶಿಸಿ ಸತೀಶ ಪಾಟೀಲ ಮಾತನಾಡಿ, ’ಗಣೇಶ ಹುಕ್ಕೇರಿ ಹಾಗೂ ಪ್ರಕಾಶ ಹುಕ್ಕೇರಿ ಅವರ ಜನಪ್ರಿಯ ಕೆಲಸಗಳು ಕ್ಷೇತ್ರದ ಜನರ ಮನ ಗೆದ್ದಿವೆ. ಇಂತಹ ಕ್ರಿಯಾಶೀಲ ಜನಪ್ರತಿನಿಧಿಗಳ ಬೆಂಬಲದಿಂದ ಗ್ರಾಮ ಸರ್ವಾಂಗೀಣ ಅಭಿವೃದ್ಧಿಯಾಗುವುದು ಸಾಧ್ಯವಿದೆ’ ಎಂದು ಹೇಳಿದರು.</p>.<p>ಖಡಕಲಾಟದ ಅಪ್ಪನವರ ಮಠದ ಶಿವಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ’ರಸ್ತೆಗಳು ಗ್ರಾಮದ ಅಭಿವೃದ್ಧಿಯ ನಾಡಿಮಿಡಿತವಿದ್ದಂತೆ. ರೈತರು ತಮ್ಮ ಬೆಳೆಯನ್ನು ಮಾರುಕಟ್ಟೆಗೆ ಸಾಗಿಸಲು ಉತ್ತಮ ರಸ್ತೆಗಳ ಅವಶ್ಯಕತೆ ಇದೆ. ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿ ಸಾರ್ವಜನಿಕರಿಗೆ ಶೀಘ್ರ ಲಭ್ಯವಾಗುವಂತಾಗಲಿ’ ಎಂದರು.</p>.<p>ಸ್ಥಳೀಯ ಮುಖಂಡರಾದ ಸತೀಶ ಪಾಟೀಲ, ಧರ್ಮಾ ಖೋತ, ಶರದ ಖೋತ, ಕಿರಣ ಖೋತ, ರಾಹುಲ ಜಾಧವ, ಪ್ರವೀಣ ಪಾಟೀಲ, ದಿಲೀಪ ಪಾಟೀಲ, ಗೌತಮ ಕಾವಡಕರ, ವಿಜಯ ಖೋತ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-21-594318838</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>