<p>ಚಿಕ್ಕೋಡಿ: ತೋರಣಹಳ್ಳಿಯ ಮಾರುತಿ ದೇವರ ಕೃಪೆಯಿಂದ ಒಳ್ಳೆಯ ಅನುಭವವಾಗಿದೆ. ಹಾಗಾಗಿ ಇಲ್ಲಿಗೆ ಆಗಾಗ ಭೇಟಿ ನೀಡಿ ದೇವರ ಆಶೀರ್ವಾದವನ್ನು ಪಡೆದುಕೊಳ್ಳುತೇನೆ ಎಂದು ಮಹಾರಾಷ್ಟ್ರ ಸಚಿವ ಹಸನ್ ಮುಶ್ರೀಫ್ ಹೇಳಿದರು.</p>.<p>ತಾಲ್ಲೂಕಿನ ತೋರಣಹಳ್ಳಿ ಗ್ರಾಮದ ಮಾರುತಿ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಮಾತನಾಡಿದ ಅವರು, ಮಾರುತಿ ದೇವರು ಅನೇಕ ಜನರ ಕಷ್ಟ ನಿವಾರಣೆ ಮಾಡಿದಂತೆ ನನ್ನ ಕಷ್ಟವನ್ನೂ ನಿವಾರಣೆ ಮಾಡಿದ್ದಾನೆ. ಹೀಗಾಗಿ ಈ ದೇವಸ್ಥಾನಕ್ಕೆ ವೈಯಕ್ತಿಕವಾಗಿ ತಾನು ₹30 ಲಕ್ಷ ದೇಣಿಗೆ ನೀಡಿದ್ದು, ದೇವಸ್ಥಾನದ ದೀಪ ಸ್ಥಂಭ ನಿರ್ಮಾಣಕ್ಕೆ ಇದನ್ನು ದೇವಸ್ಥಾನ ಕಮಿಟಿಯವರು ವಿನಿಯೋಗಿಸುತ್ತಿದ್ದಾರೆ ಎಂದರು.</p>.<p>ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ ಅವರು ದೇವಸ್ಥಾನದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದು, ದೇವಸ್ಥಾನದ ಅಭಿವೃದ್ಧಿ ಕಾರ್ಯದಲ್ಲಿ ಭಾಗಿಯಾಗಿದ್ದು ಸಂತಸ ತಂದಿದೆ ಎಂದರು.</p>.<p>ಸ್ಥಳೀಯರಾದ ಕುಮಾರ ಪಾಟೀಲ, ಬಸವರಾಜ ಮಾಳಗೆ, ಕಿಶೋರ ಪವಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-21-1517234081</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕೋಡಿ: ತೋರಣಹಳ್ಳಿಯ ಮಾರುತಿ ದೇವರ ಕೃಪೆಯಿಂದ ಒಳ್ಳೆಯ ಅನುಭವವಾಗಿದೆ. ಹಾಗಾಗಿ ಇಲ್ಲಿಗೆ ಆಗಾಗ ಭೇಟಿ ನೀಡಿ ದೇವರ ಆಶೀರ್ವಾದವನ್ನು ಪಡೆದುಕೊಳ್ಳುತೇನೆ ಎಂದು ಮಹಾರಾಷ್ಟ್ರ ಸಚಿವ ಹಸನ್ ಮುಶ್ರೀಫ್ ಹೇಳಿದರು.</p>.<p>ತಾಲ್ಲೂಕಿನ ತೋರಣಹಳ್ಳಿ ಗ್ರಾಮದ ಮಾರುತಿ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಮಾತನಾಡಿದ ಅವರು, ಮಾರುತಿ ದೇವರು ಅನೇಕ ಜನರ ಕಷ್ಟ ನಿವಾರಣೆ ಮಾಡಿದಂತೆ ನನ್ನ ಕಷ್ಟವನ್ನೂ ನಿವಾರಣೆ ಮಾಡಿದ್ದಾನೆ. ಹೀಗಾಗಿ ಈ ದೇವಸ್ಥಾನಕ್ಕೆ ವೈಯಕ್ತಿಕವಾಗಿ ತಾನು ₹30 ಲಕ್ಷ ದೇಣಿಗೆ ನೀಡಿದ್ದು, ದೇವಸ್ಥಾನದ ದೀಪ ಸ್ಥಂಭ ನಿರ್ಮಾಣಕ್ಕೆ ಇದನ್ನು ದೇವಸ್ಥಾನ ಕಮಿಟಿಯವರು ವಿನಿಯೋಗಿಸುತ್ತಿದ್ದಾರೆ ಎಂದರು.</p>.<p>ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ ಅವರು ದೇವಸ್ಥಾನದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದು, ದೇವಸ್ಥಾನದ ಅಭಿವೃದ್ಧಿ ಕಾರ್ಯದಲ್ಲಿ ಭಾಗಿಯಾಗಿದ್ದು ಸಂತಸ ತಂದಿದೆ ಎಂದರು.</p>.<p>ಸ್ಥಳೀಯರಾದ ಕುಮಾರ ಪಾಟೀಲ, ಬಸವರಾಜ ಮಾಳಗೆ, ಕಿಶೋರ ಪವಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-21-1517234081</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>