<p>ಚಿಕ್ಕೋಡಿ: ಸಮೀಪದ ನಿಪ್ಪಾಣಿ ತಾಲ್ಲೂಕಿನ ಬೋರಗಾಂವ ಪಟ್ಟಣ ಹಾಗೂ ಮಾಣಕಾಪೂರ ಗ್ರಾಮದಲ್ಲಿ ಗುರುವಾರ ತಡರಾತ್ರಿ ಜೋರಾಗಿ ಬೀಸಿದ ಮಳೆ ಗಾಳಿಯಿಂದ ಶಾಲೆಯ ತಗಡಿನ ಚಾವಣಿ ಹಾರಿ ಹೋಗಿದ್ದು, ಜವಳಿ ಘಟಕದೊಳಗೆ ನೀರು ನುಗ್ಗಿ ಯಂತ್ರೋಪಕರಣಗಳು ಹಾನಿಗೊಳಗಾಗಿವೆ.</p>.<p>ಮಾಣಕಾಪೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಚಾವಣಿ ಹಾರಿ ಹೋಗಿದೆ. ಶಾಲೆಯ ಕೆಲವೊಂದು ಕೊಠಡಿಗಳ ಗೋಡೆಗಳು ಬಿರುಕು ಬಿಟ್ಟಿದ್ದು, ಕಿಟಕಿ ಬಾಗಿಲುಗಳಿಗೂ ಹಾನಿಯಾಗಿದೆ.</p>.<p>ಬೋರಗಾಂವ ಪಟ್ಟಣದಲ್ಲಿಯ ಕೆಲವೊಂದು ಜವಳಿ ಘಟಕಗಳಿಗೆ ನೀರು ನುಗ್ಗಿದ್ದು, ಯಂತ್ರೋಪಕರಣಗಳು ನೀರಿನಲ್ಲಿ ನಿಂತಿವೆ. ಹೀಗಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಗೊಳಗಾಗಿವೆ. ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳೊಂದಿಗೆ ಯುವ ಮುಖಂಡ ಉತ್ತಮ ಪಾಟೀಲ ಶುಕ್ರವಾರ ಭೇಟಿ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-21-476854059</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕೋಡಿ: ಸಮೀಪದ ನಿಪ್ಪಾಣಿ ತಾಲ್ಲೂಕಿನ ಬೋರಗಾಂವ ಪಟ್ಟಣ ಹಾಗೂ ಮಾಣಕಾಪೂರ ಗ್ರಾಮದಲ್ಲಿ ಗುರುವಾರ ತಡರಾತ್ರಿ ಜೋರಾಗಿ ಬೀಸಿದ ಮಳೆ ಗಾಳಿಯಿಂದ ಶಾಲೆಯ ತಗಡಿನ ಚಾವಣಿ ಹಾರಿ ಹೋಗಿದ್ದು, ಜವಳಿ ಘಟಕದೊಳಗೆ ನೀರು ನುಗ್ಗಿ ಯಂತ್ರೋಪಕರಣಗಳು ಹಾನಿಗೊಳಗಾಗಿವೆ.</p>.<p>ಮಾಣಕಾಪೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಚಾವಣಿ ಹಾರಿ ಹೋಗಿದೆ. ಶಾಲೆಯ ಕೆಲವೊಂದು ಕೊಠಡಿಗಳ ಗೋಡೆಗಳು ಬಿರುಕು ಬಿಟ್ಟಿದ್ದು, ಕಿಟಕಿ ಬಾಗಿಲುಗಳಿಗೂ ಹಾನಿಯಾಗಿದೆ.</p>.<p>ಬೋರಗಾಂವ ಪಟ್ಟಣದಲ್ಲಿಯ ಕೆಲವೊಂದು ಜವಳಿ ಘಟಕಗಳಿಗೆ ನೀರು ನುಗ್ಗಿದ್ದು, ಯಂತ್ರೋಪಕರಣಗಳು ನೀರಿನಲ್ಲಿ ನಿಂತಿವೆ. ಹೀಗಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಗೊಳಗಾಗಿವೆ. ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳೊಂದಿಗೆ ಯುವ ಮುಖಂಡ ಉತ್ತಮ ಪಾಟೀಲ ಶುಕ್ರವಾರ ಭೇಟಿ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-21-476854059</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>