<p><strong>ಚಿಕ್ಕೋಡಿ</strong>: ಹೆಲ್ಮೆಟ್ ಹಾಕದೇ ಇದ್ದಿದ್ದನ್ನು ಪ್ರಶ್ನಿಸುವ ನೆಪದಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾಗಿ ಬೈಕ್ ಸವಾರ ಹೃಷಿಕೇಶ ಲಿಂಬಿಗಿಡದ ಅವರು, ತಾಲ್ಲೂಕಿನ ಅಂಕಲಿ ಗ್ರಾಮದಲ್ಲಿ ಅಂಕಲಿ ಠಾಣೆ ಪೊಲೀಸರ ಮೇಲೆ ಶುಕ್ರವಾರ ಆರೋಪಿಸಿದ್ದರು.</p>.<p>ಬೈಕ್ನಲ್ಲಿ ತಮ್ಮೊಂದಿಗೆ ಇದ್ದ ತಮ್ಮ ತಾಯಿ ಸುಶೀಲಾ ಲಿಂಬಿಗಿಡದ ಅವರ ಮೇಲೂ ಪೊಲೀಸರು ಹಲ್ಲೆ ಮಾಡಿದ್ದಾಗಿ ಆರೋಪಿಸಿದ್ದರು.</p>.<p>ಈ ಕುರಿತು ಸ್ಪಷ್ಟನೆ ನೀಡಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ‘ಬೈಕ್ ಸವಾರ ಹೃಷಿಕೇಶ ಅವರನ್ನು ತಡೆದ ಅಂಕಲಿ ಪೊಲೀಸರು ಹೆಲ್ಮೆಟ್ ಇಲ್ಲದನ್ನು ಪ್ರಶ್ನಿಸಿದ್ದು, ₹ 500 ದಂಡ ಪಾವತಿಸಲು ಹೇಳಿದ್ದಾರೆ. ತಾನು ಕೇವಲ ₹ 200 ದಂಡ ಪಾವತಿಸುವುದಾಗಿ ಬೈಕ್ ಸವಾರ ಹೇಳಿದರು. ಹೀಗಾಗಿ ಪೊಲೀಸರು ನ್ಯಾಯಾಲಯದ ದಂಡ ಬರೆದಿದ್ದಾರೆ’ ಎಂದು ತಿಳಿಸಿದರು.</p>.<p>‘ಅವರು ಕೆಟ್ಟದ್ದಾಗಿ ವರ್ತಿಸಲು ಪ್ರಾರಂಭಿಸಿದಾಗ ಬಿಎನ್ಎಸ್ಎಸ್ನ ಭದ್ರತಾ ವಿಭಾಗದ ಅಡಿಯಲ್ಲಿ ಚಿಕ್ಕೋಡಿ ತಹಶೀಲ್ದಾರ್ ಅವರ ಮುಂದೆ ಹಾಜರುಪಡಿಸಲಾಗಿದೆ. ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿಲ್ಲ ಮತ್ತು ಅವರ ವಿರುದ್ಧ ಬೇರೆ ಯಾವುದೇ ಪ್ರಕರಣ ದಾಖಲಾಗಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ಹೆಲ್ಮೆಟ್ ಹಾಕದೇ ಇದ್ದಿದ್ದನ್ನು ಪ್ರಶ್ನಿಸುವ ನೆಪದಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾಗಿ ಬೈಕ್ ಸವಾರ ಹೃಷಿಕೇಶ ಲಿಂಬಿಗಿಡದ ಅವರು, ತಾಲ್ಲೂಕಿನ ಅಂಕಲಿ ಗ್ರಾಮದಲ್ಲಿ ಅಂಕಲಿ ಠಾಣೆ ಪೊಲೀಸರ ಮೇಲೆ ಶುಕ್ರವಾರ ಆರೋಪಿಸಿದ್ದರು.</p>.<p>ಬೈಕ್ನಲ್ಲಿ ತಮ್ಮೊಂದಿಗೆ ಇದ್ದ ತಮ್ಮ ತಾಯಿ ಸುಶೀಲಾ ಲಿಂಬಿಗಿಡದ ಅವರ ಮೇಲೂ ಪೊಲೀಸರು ಹಲ್ಲೆ ಮಾಡಿದ್ದಾಗಿ ಆರೋಪಿಸಿದ್ದರು.</p>.<p>ಈ ಕುರಿತು ಸ್ಪಷ್ಟನೆ ನೀಡಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ‘ಬೈಕ್ ಸವಾರ ಹೃಷಿಕೇಶ ಅವರನ್ನು ತಡೆದ ಅಂಕಲಿ ಪೊಲೀಸರು ಹೆಲ್ಮೆಟ್ ಇಲ್ಲದನ್ನು ಪ್ರಶ್ನಿಸಿದ್ದು, ₹ 500 ದಂಡ ಪಾವತಿಸಲು ಹೇಳಿದ್ದಾರೆ. ತಾನು ಕೇವಲ ₹ 200 ದಂಡ ಪಾವತಿಸುವುದಾಗಿ ಬೈಕ್ ಸವಾರ ಹೇಳಿದರು. ಹೀಗಾಗಿ ಪೊಲೀಸರು ನ್ಯಾಯಾಲಯದ ದಂಡ ಬರೆದಿದ್ದಾರೆ’ ಎಂದು ತಿಳಿಸಿದರು.</p>.<p>‘ಅವರು ಕೆಟ್ಟದ್ದಾಗಿ ವರ್ತಿಸಲು ಪ್ರಾರಂಭಿಸಿದಾಗ ಬಿಎನ್ಎಸ್ಎಸ್ನ ಭದ್ರತಾ ವಿಭಾಗದ ಅಡಿಯಲ್ಲಿ ಚಿಕ್ಕೋಡಿ ತಹಶೀಲ್ದಾರ್ ಅವರ ಮುಂದೆ ಹಾಜರುಪಡಿಸಲಾಗಿದೆ. ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿಲ್ಲ ಮತ್ತು ಅವರ ವಿರುದ್ಧ ಬೇರೆ ಯಾವುದೇ ಪ್ರಕರಣ ದಾಖಲಾಗಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>