ದಕ್ಷಿಣ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ತಗ್ಗಿದ್ದು, ಕೃಷ್ಣಾ ಮತ್ತು ಉಪ ನದಿಗಳಿಗೆ ಸೇರುವ ನೀರಿನ ಪ್ರಮಾಣ ಸೋಮವಾರ ಮತ್ತಷ್ಟು ಕಡಿಮೆಯಾಗಿದೆ. ಆ ರಾಜ್ಯದ ರಾಜಾಪುರ ಬ್ಯಾರೇಜ್ನಿಂದ 42,625 ಮತ್ತು ದೂಧ್ಗಂಗಾ ನದಿಯಿಂದ 3,872 ಕ್ಯುಸೆಕ್ ಸೇರಿದಂತೆ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 46,497 ಕ್ಯುಸೆಕ್ ನೀರು ಸೇರುತ್ತಿದೆ.