ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಎ.ಬಿ.ಪಾಟೀಲ, ‘ಜುಲೈ 14ರಂದು ಆಸ್ಪತ್ರೆಗೆ ದಾಖಲಾದ ಗರ್ಭಿಣಿಗೆ ವೈದ್ಯರು ಸರಿಯಾಗಿಯೇ ಚಿಕಿತ್ಸೆ ನೀಡಿದ್ದಾರೆ. ಆದರೆ, ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರು ದೂರಿದ್ದಾರೆ. ಮರಣೋತ್ತರ ಪರೀಕ್ಷಾ ವರದಿ ಆಧರಿಸಿ ತನಿಖೆ ಕೈಗೊಳ್ಳಲಾಗುವುದು. ವೈದ್ಯರು ತಪ್ಪೆಸಗಿದ್ದರೆ ಕ್ರಮ ಜರುಗಿಸಲಾಗುವುದು’ ಎಂದರು.