<p><strong>ಎಂ.ಕೆ.ಹುಬ್ಬಳ್ಳಿ: </strong>ತಾಲ್ಲೂಕು ಪಂಚಾಯಿತಿ ಕಿತ್ತೂರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ನ್ಯಾಯಾಧೀಶರ ನಿರ್ದೇಶದನ್ವಯ ‘ಬಾಲ್ಯವಿವಾಹ ಮುಕ್ತ ಭಾರತ, ಬಾಲ್ಯ ವಿವಾಹ ನಿಷೇಧ ಜಾಗೃತಿ’ ಕಾರ್ಯಕ್ರಮ ಜರುಗಿತು.</p>.<p>ಚನ್ನಮ್ಮನ ಕಿತ್ತೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ಮತ್ತು ಅದರಿಂದಾಗುವ ತೊಂದರೆಗಳ ಬಗ್ಗೆ ಜನರಿಗೆ ತಿಳಿಹೇಳಲಾಯಿತು. ಬಾಲ್ಯ ವಿವಾಹ ನಡೆಯುತ್ತಿದ್ದರೆ, ತಕ್ಷಣವೇ ಮಕ್ಕಳ ಸಹಾಯವಾಣಿ ಅಥವಾ ಪೊಲೀಸ್ ಇಲಾಖೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಲು ತಿಳಿಸಿದರು.</p>.<p>ವೀರಾಪುರ, ಅಂಬಡಗಟ್ಟಿ, ದೇವರಶೀಗಿಹಳ್ಳಿ, ಕಾದರವಳ್ಳಿ, ಹುಣಶೀಕಟ್ಟಿ, ತುರಮರಿ, ಕಲಭಾವಿ ಸೇರಿ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ‘ಬಾಲ್ಯವಿವಾಹ ಮುಕ್ತ ಭಾರತ, ಬಾಲ್ಯ ವಿವಾಹ ನಿಷೇದ ಜಾಗೃತಿ’ ಕಾರ್ಯಕ್ರಮ ನಡೆಸಲಾಯಿತು.</p>.<p>ಕಾನೂನು ಸೇವಾ ಸಮಿತಿ ವಕೀರಾದ ಪಿ.ಬಿ.ತಳವಾರ, ಎನ್.ಎ.ಮರೇದ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಕುಂಟೋಜಿ, ಕಿತ್ತೂರು ನ್ಯಾಯಾಲಯದ ಸಿಬ್ಬಂದಿ ದ್ಯಾಮಣ್ಣ ಕಬ್ಬೂರ, ಆನಂದ ಮಾಳಗಿ ಹಾಗೂ ಆಯಾ ಗ್ರಾ.ಪಂ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಂ.ಕೆ.ಹುಬ್ಬಳ್ಳಿ: </strong>ತಾಲ್ಲೂಕು ಪಂಚಾಯಿತಿ ಕಿತ್ತೂರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ನ್ಯಾಯಾಧೀಶರ ನಿರ್ದೇಶದನ್ವಯ ‘ಬಾಲ್ಯವಿವಾಹ ಮುಕ್ತ ಭಾರತ, ಬಾಲ್ಯ ವಿವಾಹ ನಿಷೇಧ ಜಾಗೃತಿ’ ಕಾರ್ಯಕ್ರಮ ಜರುಗಿತು.</p>.<p>ಚನ್ನಮ್ಮನ ಕಿತ್ತೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ಮತ್ತು ಅದರಿಂದಾಗುವ ತೊಂದರೆಗಳ ಬಗ್ಗೆ ಜನರಿಗೆ ತಿಳಿಹೇಳಲಾಯಿತು. ಬಾಲ್ಯ ವಿವಾಹ ನಡೆಯುತ್ತಿದ್ದರೆ, ತಕ್ಷಣವೇ ಮಕ್ಕಳ ಸಹಾಯವಾಣಿ ಅಥವಾ ಪೊಲೀಸ್ ಇಲಾಖೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಲು ತಿಳಿಸಿದರು.</p>.<p>ವೀರಾಪುರ, ಅಂಬಡಗಟ್ಟಿ, ದೇವರಶೀಗಿಹಳ್ಳಿ, ಕಾದರವಳ್ಳಿ, ಹುಣಶೀಕಟ್ಟಿ, ತುರಮರಿ, ಕಲಭಾವಿ ಸೇರಿ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ‘ಬಾಲ್ಯವಿವಾಹ ಮುಕ್ತ ಭಾರತ, ಬಾಲ್ಯ ವಿವಾಹ ನಿಷೇದ ಜಾಗೃತಿ’ ಕಾರ್ಯಕ್ರಮ ನಡೆಸಲಾಯಿತು.</p>.<p>ಕಾನೂನು ಸೇವಾ ಸಮಿತಿ ವಕೀರಾದ ಪಿ.ಬಿ.ತಳವಾರ, ಎನ್.ಎ.ಮರೇದ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಕುಂಟೋಜಿ, ಕಿತ್ತೂರು ನ್ಯಾಯಾಲಯದ ಸಿಬ್ಬಂದಿ ದ್ಯಾಮಣ್ಣ ಕಬ್ಬೂರ, ಆನಂದ ಮಾಳಗಿ ಹಾಗೂ ಆಯಾ ಗ್ರಾ.ಪಂ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>