<p><strong>ಬೆಳಗಾವಿ:</strong> ಇಲ್ಲಿನ ಜಿಲ್ಲಾಸ್ಪತ್ರೆಯ ವಿಶೇಷ ನವಜಾತ ಶಿಶುಗಳ ತೀವ್ರ ನಿಗಾ ಘಟಕಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಭಾನುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.</p><p>‘ಹವಾನಿಯಂತ್ರಿತ ವ್ಯವಸ್ಥೆಯಲ್ಲಿ ಈ ಘಟಕ ಕಾರ್ಯನಿರ್ವಹಿಸಬೇಕು ಎಂಬ ನಿಯಮವಿದೆ. ಆದರೆ, ಎಲ್ಲ ಕೊಠಡಿಗಳಲ್ಲೂ ಹವಾನಿಯಂತ್ರಿತ ವ್ಯವಸ್ಥೆ ಏಕೆ ಮಾಡಿಲ್ಲ. ಶಿಶುಗಳಿಗೆ ಉಸಿರಾಟದ ತೊಂದರೆಯಾದರೆ ಯಾರು ಹೊಣೆ’ ಎಂದು ವೈದ್ಯರು ಮತ್ತು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.</p><p>‘ಪ್ರತಿ ಕೊಠಡಿಯಲ್ಲಿ ತಕ್ಷಣವೇ ಹವಾನಿಯಂತ್ರಿತ ವ್ಯವಸ್ಥೆ ಮಾಡಿ, ಸೋಮವಾರ ವರದಿ ನೀಡಬೇಕು’ ಎಂದು ನಿರ್ದೇಶನ ಕೊಟ್ಟರು.</p><p>‘ಕಾಂಗರೂ ಮದರ್ ಕೇರ್ ವ್ಯವಸ್ಥೆ ಸರಿಯಾಗಿಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದ ಕೋಸಂಬೆ, ‘ಸರ್ಕಾರದ ಮಾರ್ಗಸೂಚಿ ಅನ್ವಯ, ಒಂದು ವಾರದೊಳಗೆ ವ್ಯವಸ್ಥೆ ಮಾಡಿ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.</p><p>‘ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ(ಆರ್ಬಿಎಸ್ಕೆ) ಅಪೌಷ್ಟಿಕ ಮಕ್ಕಳ ಪುನಶ್ಚೇತನ ಘಟಕಕ್ಕೆ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ದಾಖಲಿಸಬೇಕು. ಆದರೆ, ಇಲ್ಲಿ ಆ ಕಾರ್ಯಕ್ರಮದಡಿ ಮಕ್ಕಳನ್ನು ದಾಖಲಿಸದಿರಲು ಕಾರಣವೇನು?’ ಎಂದು ಪ್ರಶ್ನಿಸಿದರು.</p><p>‘ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಗತ್ಯ ಸೌಕರ್ಯ ಕಲ್ಪಿಸಿ, ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು. ಒಂದುವೇಳೆ ಇದರಲ್ಲಿ ನಿರ್ಲಕ್ಷ್ಯ ವಹಿಸಿದರೆ, ಸಂಬಂಧಿತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ಕೊಟ್ಟರು.</p><p>ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪರ್ವೀನ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಜಗದೀಶ ಸರಿಕರ, ಸದಸ್ಯರಾದ ಸದಾಶಿವ ಕಾಂಬಳೆ, ದುರುಗಪ್ಪ ಮಾಚನೂರು, ಮಕ್ಕಳ ರಕ್ಷಣಾಧಿಕಾರಿ ಸಚಿನ ಹಿರೇಮಠ, ಮಕ್ಕಳ ಸಹಾಯವಾಣಿ 1098 ಸಂಯೋಜಕ ಮಲ್ಲೇಶ ಕುಂದರಗಿ ಇತರರಿದ್ದರು.</p><p>___</p><p>ಹಿಂಡಲಗಾ ಕಾರಾಗೃಹಕ್ಕೂ ಭೇಟಿ</p><p>ಬೆಳಗಾವಿ ತಾಲ್ಲೂಕಿನ ಹಿಂಡಲಗಾದ ಕೇಂದ್ರ ಕಾರಾಗೃಹಕ್ಕೆ ಶಶಿಧರ ಕೋಸಂಬೆ ಭಾನುವಾರ ಭೇಟಿ ನೀಡಿ, ಅಲ್ಲಿನ ಪರಿಸರ, ಅಡುಗೆ ಸಿದ್ಧಪಡಿಸುವ ಕೊಠಡಿ ಮತ್ತು ಗ್ರಂಥಾಲಯ ವೀಕ್ಷಿಸಿದರು. ಕೈದಿಗಳ ಜತೆಗೆ ಮಾತುಕತೆ ನಡೆಸಿದರು.</p><p>‘ಇಲ್ಲಿ 826 ಕೈದಿಗಳು ಇದ್ದಾರೆ. ಅವರೊಂದಿಗೆ ಮಕ್ಕಳ ಕಲ್ಯಾಣ ಸಮಿತಿಯವರು, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮತ್ತು ಜೈಲಿನ ಅಧೀಕ್ಷಕರು ಸೋಮವಾರ ಸಮಾಲೋಚನೆ ನಡೆಸಿ, ಕೈದಿಗಳ ಕುಟುಂಬದ ಹಿನ್ನೆಲೆ ತಿಳಿಯಬೇಕು’ ಎಂದು ತಿಳಿಸಿದರು.</p><p>‘ಕೈದಿಗಳ 18 ವರ್ಷದೊಳಗಿನ ಮಕ್ಕಳ ಆರೋಗ್ಯ, ಶಿಕ್ಷಣ ಮತ್ತು ರಕ್ಷಣೆಗಾಗಿ ಸರ್ಕಾರದಿಂದ ಅಗತ್ಯ ಸೌಕರ್ಯ ಕಲ್ಪಿಸಲು ಕ್ರಮ ವಹಿಸಬೇಕು. ಅಗತ್ಯವಿರುವ ಮಕ್ಕಳಿಗೆ ಸರ್ಕಾರದ ವಸತಿ ಶಾಲೆಗಳು, ಬಾಲಮಂದಿರಗಳಲ್ಲಿ ಪ್ರವೇಶ ಕಲ್ಪಿಸಬೇಕು’ ಎಂದು ನಿರ್ದೇಶನ ಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ಜಿಲ್ಲಾಸ್ಪತ್ರೆಯ ವಿಶೇಷ ನವಜಾತ ಶಿಶುಗಳ ತೀವ್ರ ನಿಗಾ ಘಟಕಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಭಾನುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.</p><p>‘ಹವಾನಿಯಂತ್ರಿತ ವ್ಯವಸ್ಥೆಯಲ್ಲಿ ಈ ಘಟಕ ಕಾರ್ಯನಿರ್ವಹಿಸಬೇಕು ಎಂಬ ನಿಯಮವಿದೆ. ಆದರೆ, ಎಲ್ಲ ಕೊಠಡಿಗಳಲ್ಲೂ ಹವಾನಿಯಂತ್ರಿತ ವ್ಯವಸ್ಥೆ ಏಕೆ ಮಾಡಿಲ್ಲ. ಶಿಶುಗಳಿಗೆ ಉಸಿರಾಟದ ತೊಂದರೆಯಾದರೆ ಯಾರು ಹೊಣೆ’ ಎಂದು ವೈದ್ಯರು ಮತ್ತು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.</p><p>‘ಪ್ರತಿ ಕೊಠಡಿಯಲ್ಲಿ ತಕ್ಷಣವೇ ಹವಾನಿಯಂತ್ರಿತ ವ್ಯವಸ್ಥೆ ಮಾಡಿ, ಸೋಮವಾರ ವರದಿ ನೀಡಬೇಕು’ ಎಂದು ನಿರ್ದೇಶನ ಕೊಟ್ಟರು.</p><p>‘ಕಾಂಗರೂ ಮದರ್ ಕೇರ್ ವ್ಯವಸ್ಥೆ ಸರಿಯಾಗಿಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದ ಕೋಸಂಬೆ, ‘ಸರ್ಕಾರದ ಮಾರ್ಗಸೂಚಿ ಅನ್ವಯ, ಒಂದು ವಾರದೊಳಗೆ ವ್ಯವಸ್ಥೆ ಮಾಡಿ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.</p><p>‘ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ(ಆರ್ಬಿಎಸ್ಕೆ) ಅಪೌಷ್ಟಿಕ ಮಕ್ಕಳ ಪುನಶ್ಚೇತನ ಘಟಕಕ್ಕೆ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ದಾಖಲಿಸಬೇಕು. ಆದರೆ, ಇಲ್ಲಿ ಆ ಕಾರ್ಯಕ್ರಮದಡಿ ಮಕ್ಕಳನ್ನು ದಾಖಲಿಸದಿರಲು ಕಾರಣವೇನು?’ ಎಂದು ಪ್ರಶ್ನಿಸಿದರು.</p><p>‘ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಗತ್ಯ ಸೌಕರ್ಯ ಕಲ್ಪಿಸಿ, ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು. ಒಂದುವೇಳೆ ಇದರಲ್ಲಿ ನಿರ್ಲಕ್ಷ್ಯ ವಹಿಸಿದರೆ, ಸಂಬಂಧಿತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ಕೊಟ್ಟರು.</p><p>ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪರ್ವೀನ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಜಗದೀಶ ಸರಿಕರ, ಸದಸ್ಯರಾದ ಸದಾಶಿವ ಕಾಂಬಳೆ, ದುರುಗಪ್ಪ ಮಾಚನೂರು, ಮಕ್ಕಳ ರಕ್ಷಣಾಧಿಕಾರಿ ಸಚಿನ ಹಿರೇಮಠ, ಮಕ್ಕಳ ಸಹಾಯವಾಣಿ 1098 ಸಂಯೋಜಕ ಮಲ್ಲೇಶ ಕುಂದರಗಿ ಇತರರಿದ್ದರು.</p><p>___</p><p>ಹಿಂಡಲಗಾ ಕಾರಾಗೃಹಕ್ಕೂ ಭೇಟಿ</p><p>ಬೆಳಗಾವಿ ತಾಲ್ಲೂಕಿನ ಹಿಂಡಲಗಾದ ಕೇಂದ್ರ ಕಾರಾಗೃಹಕ್ಕೆ ಶಶಿಧರ ಕೋಸಂಬೆ ಭಾನುವಾರ ಭೇಟಿ ನೀಡಿ, ಅಲ್ಲಿನ ಪರಿಸರ, ಅಡುಗೆ ಸಿದ್ಧಪಡಿಸುವ ಕೊಠಡಿ ಮತ್ತು ಗ್ರಂಥಾಲಯ ವೀಕ್ಷಿಸಿದರು. ಕೈದಿಗಳ ಜತೆಗೆ ಮಾತುಕತೆ ನಡೆಸಿದರು.</p><p>‘ಇಲ್ಲಿ 826 ಕೈದಿಗಳು ಇದ್ದಾರೆ. ಅವರೊಂದಿಗೆ ಮಕ್ಕಳ ಕಲ್ಯಾಣ ಸಮಿತಿಯವರು, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮತ್ತು ಜೈಲಿನ ಅಧೀಕ್ಷಕರು ಸೋಮವಾರ ಸಮಾಲೋಚನೆ ನಡೆಸಿ, ಕೈದಿಗಳ ಕುಟುಂಬದ ಹಿನ್ನೆಲೆ ತಿಳಿಯಬೇಕು’ ಎಂದು ತಿಳಿಸಿದರು.</p><p>‘ಕೈದಿಗಳ 18 ವರ್ಷದೊಳಗಿನ ಮಕ್ಕಳ ಆರೋಗ್ಯ, ಶಿಕ್ಷಣ ಮತ್ತು ರಕ್ಷಣೆಗಾಗಿ ಸರ್ಕಾರದಿಂದ ಅಗತ್ಯ ಸೌಕರ್ಯ ಕಲ್ಪಿಸಲು ಕ್ರಮ ವಹಿಸಬೇಕು. ಅಗತ್ಯವಿರುವ ಮಕ್ಕಳಿಗೆ ಸರ್ಕಾರದ ವಸತಿ ಶಾಲೆಗಳು, ಬಾಲಮಂದಿರಗಳಲ್ಲಿ ಪ್ರವೇಶ ಕಲ್ಪಿಸಬೇಕು’ ಎಂದು ನಿರ್ದೇಶನ ಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>