ಮಂಗಳವಾರ, ಮಾರ್ಚ್ 21, 2023
20 °C

ಸಂಜಯ್ ರಾವುತ್‌ ಅವರದ್ದು ಬಾಲಿಶ ಹೇಳಿಕೆ: ಆರಗ ಜ್ಞಾನೇಂದ್ರ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಸಂಜಯ ರಾವುತ್‌ ರಾಜಕೀಯ ಲಾಭಕ್ಕಾಗಿ ಈ ಹೇಳಿಕೆ ಕೊಟ್ಟಿದ್ದಾರೆ. ಭಾರತ–ಚೀನಾ ಮತ್ತು ಕರ್ನಾಟಕ–ಮಹಾರಾಷ್ಟ್ರ ಗಡಿಗಳ ಕುರಿತು ವ್ಯತ್ಯಾಸವೇ ಗೊತ್ತಿಲ್ಲದ ಬಾಲಿಶ ಹೇಳಿಕೆ ಅವರದ್ದಾಗಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದರು.

‘ದೇಶಕ್ಕೆ ಚೀನಾ ನುಗ್ಗಿದಂತೆ ನಾವೂ ಕರ್ನಾಟಕಕ್ಕೆ ನುಗ್ಗುತ್ತೇವೆ. ನಮಗೆ ಯಾರ ಅನುಮತಿಯೂ ಬೇಕಿಲ್ಲ’ ಎಂಬ ಶಿವಸೇನೆ(ಉದ್ಧವ್‌ ಠಾಕ್ರೆ ಬಣ) ವಕ್ತಾರ ಸಂಜಯ ರಾವುತ್‌ ನೀಡಿದ ಹೇಳಿಕೆಗೆ, ನಗರದಲ್ಲಿ ಬುಧವಾರ ಸುದ್ದಿಗಾರರಿಗೆ ಹೀಗೆ ಪ್ರತಿಕ್ರಿಯಿಸಿದರು.

‘ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸಿದ್ದಾರೆ. ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ, ಅನಗತ್ಯವಾಗಿ ಹೇಳಿಕೆ ನೀಡಿ ಜನರ ಭಾವನೆ ಕೆರಳಿಸಬಾರದು. ಏನೇನೋ ಮಾತನಾಡಬಾರದು. ರಾವುತ್ ಹೇಳಿಕೆಯಿಂದ ಜನರ ಬದುಕಿಗೆ ತೊಂದರೆಯಾಗಬಾರದು’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು