<p><strong>ಸಾಂಬ್ರಾ: </strong>ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದ ಕನ್ನಡ ಮತ್ತು ಮರಾಠಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಮುಚ್ಚಂಡಿ ಕ್ಲಸ್ಟರ್ ಮಟ್ಟದ ಮಕ್ಕಳ ವಿಜ್ಞಾನ ಹಬ್ಬ’ ಬುಧವಾರ ಸಂಭ್ರಮದಿಂದ ನಡೆಯಿತು.</p>.<p>ವಿವಿಧ ವೇಷಭೂಷಣ ಧರಿಸಿದ್ದ ಮಕ್ಕಳು ಮತ್ತು ಅಲಂಕಾರಿಕ ಚಕ್ಕಡಿ, ಟ್ರ್ಯಾಕ್ಟರ್ಗಳ ಮೆರವಣಿಗೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪಿ. ಜುಟ್ಟನವರ ಚಾಲನೆ ನೀಡಿದರು. ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.</p>.<p>ನಂತರ ಕಾರ್ಯಕ್ರಮವು ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಶೋಕ ಮೋದಗೇಕರ ಅಧ್ಯಕ್ಷತೆಯಲ್ಲಿ ನಡೆಯಿತು.</p>.<p>ಕ್ಷೇತ್ರ ಸಮನ್ವಯ ಅಧಿಕಾರಿ ಎಂ.ಎಸ್.ಮೇದಾರ ಮಾತನಾಡಿ, ‘ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಗುರುತಿಸಿ ಅವಕಾಶ ಒದಗಿಸಲು ಮಕ್ಕಳ ಹಬ್ಬ ಒಂದು ಉತ್ತಮ ವೇದಿಕೆ’ ಎಂದರು.</p>.<p>ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಆರ್.ಸಿ.ಮುದಕನಗೌಡರ ಮತ್ತು ಸರ್ಕಾರಿ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಯಕುಮಾರ ಹೆಬಳಿ ಮಾತನಾಡಿದರು.</p>.<p>ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳು ನಡೆದವು.</p>.<p>ಜಿಲ್ಲಾ ಪಂಚಾಯ್ತಿ ಸದಸ್ಯೆ ಮಲ್ಲವ್ವ ಬುಡ್ರಿ, ತಾಲ್ಲೂಕು ಪಂಚಾಯ್ತಿ ಸದಸ್ಯ ಸಿದ್ದಪ್ಪ ಮೊದಗೇಕರ, ಎಸ್ಡಿಎಂಸಿ ಅಧ್ಯಕ್ಷ ಅಶೋಕ ಗುತ್ತಿ, ಲಕ್ಷ್ಮಿ ವಣ್ಣೂರ, ಎಸ್.ಸಿ.ಬರಗಾಲಿ, ಗೀತಾ ಮಡಿವಾಳರ, ಬಿ.ಎಫ್.ಇಂಚಲ, ಸಂತೋಷ ಹುಲಕಾಯಿ, ಎಂ.ಎಸ್.ಶಿವಪೂಜಿಮಠ, ಆರ್.ಎ.ಮೋದಗೇಕರ ಇದ್ದರು.</p>.<p>ಸಿಆರ್ಪಿ ಆರ್.ಐ.ಮೇಟ್ಯಾಲಮಠ ಸ್ವಾಗತಿಸಿದರು. ಎಂ.ಎನ್.ರೊಟ್ಟಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಂಬ್ರಾ: </strong>ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದ ಕನ್ನಡ ಮತ್ತು ಮರಾಠಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಮುಚ್ಚಂಡಿ ಕ್ಲಸ್ಟರ್ ಮಟ್ಟದ ಮಕ್ಕಳ ವಿಜ್ಞಾನ ಹಬ್ಬ’ ಬುಧವಾರ ಸಂಭ್ರಮದಿಂದ ನಡೆಯಿತು.</p>.<p>ವಿವಿಧ ವೇಷಭೂಷಣ ಧರಿಸಿದ್ದ ಮಕ್ಕಳು ಮತ್ತು ಅಲಂಕಾರಿಕ ಚಕ್ಕಡಿ, ಟ್ರ್ಯಾಕ್ಟರ್ಗಳ ಮೆರವಣಿಗೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪಿ. ಜುಟ್ಟನವರ ಚಾಲನೆ ನೀಡಿದರು. ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.</p>.<p>ನಂತರ ಕಾರ್ಯಕ್ರಮವು ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಶೋಕ ಮೋದಗೇಕರ ಅಧ್ಯಕ್ಷತೆಯಲ್ಲಿ ನಡೆಯಿತು.</p>.<p>ಕ್ಷೇತ್ರ ಸಮನ್ವಯ ಅಧಿಕಾರಿ ಎಂ.ಎಸ್.ಮೇದಾರ ಮಾತನಾಡಿ, ‘ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಗುರುತಿಸಿ ಅವಕಾಶ ಒದಗಿಸಲು ಮಕ್ಕಳ ಹಬ್ಬ ಒಂದು ಉತ್ತಮ ವೇದಿಕೆ’ ಎಂದರು.</p>.<p>ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಆರ್.ಸಿ.ಮುದಕನಗೌಡರ ಮತ್ತು ಸರ್ಕಾರಿ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಯಕುಮಾರ ಹೆಬಳಿ ಮಾತನಾಡಿದರು.</p>.<p>ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳು ನಡೆದವು.</p>.<p>ಜಿಲ್ಲಾ ಪಂಚಾಯ್ತಿ ಸದಸ್ಯೆ ಮಲ್ಲವ್ವ ಬುಡ್ರಿ, ತಾಲ್ಲೂಕು ಪಂಚಾಯ್ತಿ ಸದಸ್ಯ ಸಿದ್ದಪ್ಪ ಮೊದಗೇಕರ, ಎಸ್ಡಿಎಂಸಿ ಅಧ್ಯಕ್ಷ ಅಶೋಕ ಗುತ್ತಿ, ಲಕ್ಷ್ಮಿ ವಣ್ಣೂರ, ಎಸ್.ಸಿ.ಬರಗಾಲಿ, ಗೀತಾ ಮಡಿವಾಳರ, ಬಿ.ಎಫ್.ಇಂಚಲ, ಸಂತೋಷ ಹುಲಕಾಯಿ, ಎಂ.ಎಸ್.ಶಿವಪೂಜಿಮಠ, ಆರ್.ಎ.ಮೋದಗೇಕರ ಇದ್ದರು.</p>.<p>ಸಿಆರ್ಪಿ ಆರ್.ಐ.ಮೇಟ್ಯಾಲಮಠ ಸ್ವಾಗತಿಸಿದರು. ಎಂ.ಎನ್.ರೊಟ್ಟಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>