<p><strong>ಬೆಳಗಾವಿ</strong>: ‘ಜಿಲ್ಲೆಯ ಚೋರ್ಲಾ ಘಾಟ್ನಲ್ಲಿ ನಡೆದಿದೆ ಎನ್ನಲಾದ ₹400 ಕೋಟಿ ದರೋಡೆ ಪ್ರಕರಣದ ಕುರಿತು ಇದೂವರೆಗೆ ಯಾರೂ ದೂರು ಕೊಟ್ಟಿಲ್ಲ. ಬಾಯಿ ಮಾತಿನ ಹೇಳಿಕೆಗಳೆಲ್ಲವೂ ನಿಜ ಎಂದು ನಂಬಲಾಗುವುದಿಲ್ಲ. ಕೃತ್ಯ ನೋಡಿದವರು ಅಥವಾ ಹಣ ಕಳೆದುಕೊಂಡವರಲ್ಲಿ ಯಾರಾದರೂ ದೂರು ನೀಡಿದರೆ ಪರಿಶೀಲಿಸುತ್ತೇವೆ‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪುನರುಚ್ಚರಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ‘ಘಟನೆ ಬಗ್ಗೆ ಇನ್ಯಾರೋ ತನಿಖೆ ನಡೆಸಿ ಎಂದು ಆಗ್ರಹಿಸಲು ಬರುವುದಿಲ್ಲ. ಇದು ಎಷ್ಟು ಸತ್ಯ ಎಂಬ ಬಗ್ಗೆ ನಾವು ಪರಿಶೀಲನೆ ನಡೆಸುವುದು ಪ್ರಾಥಮಿಕ ಕೆಲಸ. ಆದರೆ, ದೂರೇ ಇಲ್ಲದೆ ಏನು ಮಾಡಲಾಗುವುದಿಲ್ಲ’ ಎಂದರು.</p>.<p>‘ಮಹಾರಾಷ್ಟ್ರ ಸರ್ಕಾರ ಇದಕ್ಕೆ ಏಕೆ ವಿಶೇಷ ತನಿಖಾ ತಂಡ ರಚನೆ ಮಾಡಿದೆ ಎಂಬುದಕ್ಕೆ ಆ ಸರ್ಕಾರವೇ ವಿವರಣೆ ಕೊಡಬೇಕು. ಈವರೆಗೂ ನಮ್ಮ ಅಧಿಕಾರಿಗಳು ಎಲ್ಲ ರೀತಿಯ ಸಹಕಾರ ನೀಡಿದ್ದಾರೆ. ಇದರ ಬಗ್ಗೆ ಮಹಾರಾಷ್ಟ್ರದ ಅಧಿಕಾರಿಗಳು ನೀಡಿದ ಮಾಹಿತಿ ಅಪೂರ್ಣವಿದೆ. ಇನ್ನಷ್ಟು ಮಾಹಿತಿ ಬೇಕು ಎಂದಷ್ಟೇ ನಾವು ಉತ್ತರಿಸಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಜಿಲ್ಲೆಯ ಚೋರ್ಲಾ ಘಾಟ್ನಲ್ಲಿ ನಡೆದಿದೆ ಎನ್ನಲಾದ ₹400 ಕೋಟಿ ದರೋಡೆ ಪ್ರಕರಣದ ಕುರಿತು ಇದೂವರೆಗೆ ಯಾರೂ ದೂರು ಕೊಟ್ಟಿಲ್ಲ. ಬಾಯಿ ಮಾತಿನ ಹೇಳಿಕೆಗಳೆಲ್ಲವೂ ನಿಜ ಎಂದು ನಂಬಲಾಗುವುದಿಲ್ಲ. ಕೃತ್ಯ ನೋಡಿದವರು ಅಥವಾ ಹಣ ಕಳೆದುಕೊಂಡವರಲ್ಲಿ ಯಾರಾದರೂ ದೂರು ನೀಡಿದರೆ ಪರಿಶೀಲಿಸುತ್ತೇವೆ‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪುನರುಚ್ಚರಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ‘ಘಟನೆ ಬಗ್ಗೆ ಇನ್ಯಾರೋ ತನಿಖೆ ನಡೆಸಿ ಎಂದು ಆಗ್ರಹಿಸಲು ಬರುವುದಿಲ್ಲ. ಇದು ಎಷ್ಟು ಸತ್ಯ ಎಂಬ ಬಗ್ಗೆ ನಾವು ಪರಿಶೀಲನೆ ನಡೆಸುವುದು ಪ್ರಾಥಮಿಕ ಕೆಲಸ. ಆದರೆ, ದೂರೇ ಇಲ್ಲದೆ ಏನು ಮಾಡಲಾಗುವುದಿಲ್ಲ’ ಎಂದರು.</p>.<p>‘ಮಹಾರಾಷ್ಟ್ರ ಸರ್ಕಾರ ಇದಕ್ಕೆ ಏಕೆ ವಿಶೇಷ ತನಿಖಾ ತಂಡ ರಚನೆ ಮಾಡಿದೆ ಎಂಬುದಕ್ಕೆ ಆ ಸರ್ಕಾರವೇ ವಿವರಣೆ ಕೊಡಬೇಕು. ಈವರೆಗೂ ನಮ್ಮ ಅಧಿಕಾರಿಗಳು ಎಲ್ಲ ರೀತಿಯ ಸಹಕಾರ ನೀಡಿದ್ದಾರೆ. ಇದರ ಬಗ್ಗೆ ಮಹಾರಾಷ್ಟ್ರದ ಅಧಿಕಾರಿಗಳು ನೀಡಿದ ಮಾಹಿತಿ ಅಪೂರ್ಣವಿದೆ. ಇನ್ನಷ್ಟು ಮಾಹಿತಿ ಬೇಕು ಎಂದಷ್ಟೇ ನಾವು ಉತ್ತರಿಸಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>