<p><strong>ಬೆಳಗಾವಿ: </strong>‘ಕೊರೊನಾ ಮುಂಜಾಗ್ರತೆಯ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಕಾರವಾರ ಧರ್ಮಪ್ರಾಂತಕ್ಕೆ ಒಳಪಡುವ ಚರ್ಚ್ಗಳನ್ನು ಜೂನ್ 30ರ ನಂತರವೇ ತೆರೆಯಲಾಗುವುದು’ ಎಂದು ಬಿಷಪ್ ಡೆರಿಕ್ ಫರ್ನಾಂಡೀಸ್ ಹೇಳಿದರು.</p>.<p>‘ಚರ್ಚ್ ಸೇರಿದಂತೆ ಎಲ್ಲ ಧರ್ಮದ ಪ್ರಾರ್ಥನಾ ಮಂದಿರಗಳನ್ನು ಜೂನ್ 13ರಿಂದ ತೆರೆಯಲು ಸರ್ಕಾರ ಅನುಮತಿ ನೀಡಿತ್ತು. ಇದರ ಹಿನ್ನೆಲೆಯಲ್ಲಿ ಚರ್ಚ್ನಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ ಎಂದು ಹಲವರು ಕೇಳಿದ್ದರು. ಅದಕ್ಕಾಗಿ ವಿವರಣೆ ನೀಡುತ್ತಿದ್ದೇನೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಹಾಗೂ ನೆರೆಯ ಮಹಾರಾಷ್ಟ್ರದ ಚಂದಗಡ ತಾಲ್ಲೂಕಿನ ಚರ್ಚ್ಗಳು ಬೆಳಗಾವಿ ಧರ್ಮಪ್ರಾಂತ ವ್ಯಾಪ್ತಿಯೊಳಗೆ ಕಾರ್ಯನಿರ್ವಹಿಸುತ್ತಿವೆ.</p>.<p>‘ಜನರ ಆರೋಗ್ಯ ಹಾಗೂ ಸುರಕ್ಷತೆಗೆ ಚರ್ಚ್ ಯಾವಾಗಲೂ ಆದ್ಯತೆ ನೀಡಿದೆ. ಇದೇ ಹಿನ್ನೆಲೆಯಲ್ಲಿ ಚರ್ಚ್ಗಳನ್ನು ತೆರೆಯುವುದನ್ನು ಮುಂದೂಡಲಾಗಿದೆ. ಜೂನ್ 30ರ ನಂತರ ಪರಿಸ್ಥಿತಿ ಅವಲೋಕಿಸಿ, ಚರ್ಚ್ಗಳನ್ನು ತೆರೆಯಲಾಗುವುದು’ ಎಂದು ಅವರು ವಿವರಣೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಕೊರೊನಾ ಮುಂಜಾಗ್ರತೆಯ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಕಾರವಾರ ಧರ್ಮಪ್ರಾಂತಕ್ಕೆ ಒಳಪಡುವ ಚರ್ಚ್ಗಳನ್ನು ಜೂನ್ 30ರ ನಂತರವೇ ತೆರೆಯಲಾಗುವುದು’ ಎಂದು ಬಿಷಪ್ ಡೆರಿಕ್ ಫರ್ನಾಂಡೀಸ್ ಹೇಳಿದರು.</p>.<p>‘ಚರ್ಚ್ ಸೇರಿದಂತೆ ಎಲ್ಲ ಧರ್ಮದ ಪ್ರಾರ್ಥನಾ ಮಂದಿರಗಳನ್ನು ಜೂನ್ 13ರಿಂದ ತೆರೆಯಲು ಸರ್ಕಾರ ಅನುಮತಿ ನೀಡಿತ್ತು. ಇದರ ಹಿನ್ನೆಲೆಯಲ್ಲಿ ಚರ್ಚ್ನಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ ಎಂದು ಹಲವರು ಕೇಳಿದ್ದರು. ಅದಕ್ಕಾಗಿ ವಿವರಣೆ ನೀಡುತ್ತಿದ್ದೇನೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಹಾಗೂ ನೆರೆಯ ಮಹಾರಾಷ್ಟ್ರದ ಚಂದಗಡ ತಾಲ್ಲೂಕಿನ ಚರ್ಚ್ಗಳು ಬೆಳಗಾವಿ ಧರ್ಮಪ್ರಾಂತ ವ್ಯಾಪ್ತಿಯೊಳಗೆ ಕಾರ್ಯನಿರ್ವಹಿಸುತ್ತಿವೆ.</p>.<p>‘ಜನರ ಆರೋಗ್ಯ ಹಾಗೂ ಸುರಕ್ಷತೆಗೆ ಚರ್ಚ್ ಯಾವಾಗಲೂ ಆದ್ಯತೆ ನೀಡಿದೆ. ಇದೇ ಹಿನ್ನೆಲೆಯಲ್ಲಿ ಚರ್ಚ್ಗಳನ್ನು ತೆರೆಯುವುದನ್ನು ಮುಂದೂಡಲಾಗಿದೆ. ಜೂನ್ 30ರ ನಂತರ ಪರಿಸ್ಥಿತಿ ಅವಲೋಕಿಸಿ, ಚರ್ಚ್ಗಳನ್ನು ತೆರೆಯಲಾಗುವುದು’ ಎಂದು ಅವರು ವಿವರಣೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>