ಸೌಭಾಗ್ಯಲಕ್ಷ್ಮಿ ಶುಗರ್ಸ್ನವರು ಅಪೆಕ್ಸ್ ಬ್ಯಾಂಕಿನಿಂದ ₹439 ಕೋಟಿ ಸಾಲ ಪಡೆದು ಮರುಪಾವತಿ ಮಾಡದ ಕುರಿತು ಬ್ಯಾಂಕ್ ವ್ಯವಸ್ಥಾಪಕ ರಾಜಣ್ಣ ಮುತ್ತಶೆಟ್ಟಿ ಅವರು ಜನವರಿ 5ರಂದು ಬೆಂಗಳೂರಿನಲ್ಲಿ ದೂರು ದಾಖಲಿಸಿದ್ದರು. ಕಲಂ 406, 420ರ ಅಡಿಯಲ್ಲಿ ದೂರು ದಾಖಲಿಸಲಾಗಿತ್ತು. ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿದೆ.