<p><strong>ಅಥಣಿ: ‘</strong>ಅಪರಾಧ ತಡೆಯುವಲ್ಲಿ ಪೊಲೀಸರಿಗೆ ನಾಗರಿಕರು ಸಹಕಾರ ನೀಡಬೇಕು. ಅಂತೆಯೇ, ಪ್ರತಿಯೊಬ್ಬರೂ ಜಾಗರೂಕರಾಗಿಬೇಕು’ ಎಂದು ಇಲ್ಲಿನ ಠಾಣೆಯ ಪಿಎಸ್ಐ ಯು.ಎಸ್. ಅವಟಿ ತಿಳಿಸಿದರು.</p>.<p>ಜೆ.ಎ. ಪದವಿಪೂರ್ವ ಕಾಲೇಜಿನಲ್ಲಿ ಪೋಲಿಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ‘ಅಪರಾಧ ತಡೆ ಮಾಸಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪೊಲೀಸರು ಸಾಕಷ್ಟು ಜಾಗೃತಿ ವಹಿಸುತ್ತಿದ್ದರೂ ನಾಗರಿಕರ ಅಸಡ್ಡೆಯಿಂದಾಗಿ ಹಲವಾರು ಪ್ರಕರಣಗಳು ಜರುಗುತ್ತಿವೆ. ಮುಂಜಾನೆ, ಸಂಜೆ ಒಬ್ಬೊಬ್ಬರೇ ವಾಯುವಿಹಾರಕ್ಕೆ ಹೋಗಬಾರದು. ಅದರಲ್ಲೂ ಮಹಿಳೆಯರು ಹೆಚ್ಚಿನ ಕಾಳಜಿ ವಹಿಸಬೇಕು. ಅಪರಿಚಿತರು ಮಾತನಾಡಿಸಿದರೆ ಅವರಿಂದ ದೂರವಿರಬೇಕು. ವಿದ್ಯಾರ್ಥಿನಿಯರು ಯಾವುದೇ ಕಾರಣಕ್ಕೂ ಲೈಂಗಿಕ ದೌರ್ಜನ್ಯಗಳನ್ನು ಸಹಿಸಿಕೊಳ್ಳಬಾರದು. ಭಯಪಡದೇ ನೇರವಾಗಿ ಠಾಣೆಗೆ ದೂರು ನೀಡಬೇಕು ಅಥವಾ ಸಂಬಂಧಿಸಿದ ಕಾಲೇಜಿನವರಿಗೆ ತಿಳಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಎಸ್.ಎಸ್. ಗೌಡರ ಮಾತನಾಡಿದರು. ಉಪನ್ಯಾಸಕಿ ಪಿ.ಎಂ. ಹುಲಗಬಾಳಿ, ಬಿ.ಎಸ್. ಲೋಕೂರ, ಆರ್.ಎಸ್. ದೊಡ್ಡನಿಂಗಪ್ಪಗೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ: ‘</strong>ಅಪರಾಧ ತಡೆಯುವಲ್ಲಿ ಪೊಲೀಸರಿಗೆ ನಾಗರಿಕರು ಸಹಕಾರ ನೀಡಬೇಕು. ಅಂತೆಯೇ, ಪ್ರತಿಯೊಬ್ಬರೂ ಜಾಗರೂಕರಾಗಿಬೇಕು’ ಎಂದು ಇಲ್ಲಿನ ಠಾಣೆಯ ಪಿಎಸ್ಐ ಯು.ಎಸ್. ಅವಟಿ ತಿಳಿಸಿದರು.</p>.<p>ಜೆ.ಎ. ಪದವಿಪೂರ್ವ ಕಾಲೇಜಿನಲ್ಲಿ ಪೋಲಿಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ‘ಅಪರಾಧ ತಡೆ ಮಾಸಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪೊಲೀಸರು ಸಾಕಷ್ಟು ಜಾಗೃತಿ ವಹಿಸುತ್ತಿದ್ದರೂ ನಾಗರಿಕರ ಅಸಡ್ಡೆಯಿಂದಾಗಿ ಹಲವಾರು ಪ್ರಕರಣಗಳು ಜರುಗುತ್ತಿವೆ. ಮುಂಜಾನೆ, ಸಂಜೆ ಒಬ್ಬೊಬ್ಬರೇ ವಾಯುವಿಹಾರಕ್ಕೆ ಹೋಗಬಾರದು. ಅದರಲ್ಲೂ ಮಹಿಳೆಯರು ಹೆಚ್ಚಿನ ಕಾಳಜಿ ವಹಿಸಬೇಕು. ಅಪರಿಚಿತರು ಮಾತನಾಡಿಸಿದರೆ ಅವರಿಂದ ದೂರವಿರಬೇಕು. ವಿದ್ಯಾರ್ಥಿನಿಯರು ಯಾವುದೇ ಕಾರಣಕ್ಕೂ ಲೈಂಗಿಕ ದೌರ್ಜನ್ಯಗಳನ್ನು ಸಹಿಸಿಕೊಳ್ಳಬಾರದು. ಭಯಪಡದೇ ನೇರವಾಗಿ ಠಾಣೆಗೆ ದೂರು ನೀಡಬೇಕು ಅಥವಾ ಸಂಬಂಧಿಸಿದ ಕಾಲೇಜಿನವರಿಗೆ ತಿಳಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಎಸ್.ಎಸ್. ಗೌಡರ ಮಾತನಾಡಿದರು. ಉಪನ್ಯಾಸಕಿ ಪಿ.ಎಂ. ಹುಲಗಬಾಳಿ, ಬಿ.ಎಸ್. ಲೋಕೂರ, ಆರ್.ಎಸ್. ದೊಡ್ಡನಿಂಗಪ್ಪಗೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>