<p>ಬೆಳಗಾವಿ: ನಗರದ ಟಿಳಕವಾಡಿ ಮೊದಲ ರೈಲ್ವೆ ಗೇಟ್ ಬಳಿ ಅಳವಡಿಸಿರುವ ಬ್ಯಾರಿಕೇಡ್ ತೆರವುಗೊಳಿಸುವಂತೆ ಆಗ್ರಹಿಸಿ ಸ್ಥಳೀಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಅಲ್ಲಿನ ಚಿತ್ರಣದ 100 ಫೋಟೊಗಳನ್ನು ಒಳಗೊಂಡಿರುವ ದೊಡ್ಡದಾದ ಮನವಿ ಪತ್ರವನ್ನು ಅವರು ಸಲ್ಲಿಸಿದ್ದು ಗಮನಸೆಳೆಯಿತು.</p>.<p>‘ಅಲ್ಲಿ 2014ರ ಜೂನ್ 19ರಿಂದಲೂ ಸಂಚಾರ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿದ್ದಾರೆ. ಇದರಿಂದ ಸುಗಮ ಸಂಚಾರಕ್ಕೆ ತೊಂದರೆ ಆಗುತ್ತಿದೆ. ವಾಹನದಟ್ಟಣೆಯೂ ಉಂಟಾಗುತ್ತಿದೆ. ಈ ರಸ್ತೆಯಲ್ಲಿ ನಿತ್ಯ ಲಕ್ಷಕ್ಕೂ ಹೆಚ್ಚು ಜನರು ಸಂಚರಿಸುತ್ತಾರೆ. ಹೀಗಾಗಿ ಬ್ಯಾರಿಕೇಡ್ ತೆರವುಗೊಳಿಸಿ, ಜನರಿಗೆ ಅನುಕೂಲ ಮಾಡಿಕೊಡಬೇಕು. ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಮೇಲ್ಸೇತುವೆ ನಿರ್ಮಿಸಬೇಕು’ ಎಂದು ಹೋರಾಟಗಾರ ಸುಭಾಷ ಘೋಲಪ ತಿಳಿಸಿದರು.</p>.<p>‘ಬ್ಯಾರಿಕೇಡ್ ಹಾಕಿರುವುದರಿಂದಾಗಿ ಮಂಗಳವಾರ ಪೇಟೆ, ಸೋಮವಾರ ಪೇಟೆ, ಗುರುವಾರ ಪೇಟೆ, ಬುಧವಾರ ಪೇಟೆ, ರಾಯ್ ರಸ್ತೆ, ಮಂಡೋಳಿ ಮುಂತಾದ ಪ್ರದೇಶಗಳ ಜನರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ. ಹೀಗಾಗಿ ಈ ಅನಧಿಕೃತ ಬ್ಯಾರಿಕೇಡ್ ತೆರವುಗೊಳಿಸಿ, ಅಗತ್ಯ ಬಿದ್ದರೆ ಸಂಚಾರ ಪೊಲೀಸರನ್ನು ನಿಯೋಜಿಸಬೇಕು. ಜನರು ಸುತ್ತಿಬಳಸಿ ಸಂಚರಿಸುವುದನ್ನು ತಪ್ಪಿಸಬೇಕು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ನಗರದ ಟಿಳಕವಾಡಿ ಮೊದಲ ರೈಲ್ವೆ ಗೇಟ್ ಬಳಿ ಅಳವಡಿಸಿರುವ ಬ್ಯಾರಿಕೇಡ್ ತೆರವುಗೊಳಿಸುವಂತೆ ಆಗ್ರಹಿಸಿ ಸ್ಥಳೀಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಅಲ್ಲಿನ ಚಿತ್ರಣದ 100 ಫೋಟೊಗಳನ್ನು ಒಳಗೊಂಡಿರುವ ದೊಡ್ಡದಾದ ಮನವಿ ಪತ್ರವನ್ನು ಅವರು ಸಲ್ಲಿಸಿದ್ದು ಗಮನಸೆಳೆಯಿತು.</p>.<p>‘ಅಲ್ಲಿ 2014ರ ಜೂನ್ 19ರಿಂದಲೂ ಸಂಚಾರ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿದ್ದಾರೆ. ಇದರಿಂದ ಸುಗಮ ಸಂಚಾರಕ್ಕೆ ತೊಂದರೆ ಆಗುತ್ತಿದೆ. ವಾಹನದಟ್ಟಣೆಯೂ ಉಂಟಾಗುತ್ತಿದೆ. ಈ ರಸ್ತೆಯಲ್ಲಿ ನಿತ್ಯ ಲಕ್ಷಕ್ಕೂ ಹೆಚ್ಚು ಜನರು ಸಂಚರಿಸುತ್ತಾರೆ. ಹೀಗಾಗಿ ಬ್ಯಾರಿಕೇಡ್ ತೆರವುಗೊಳಿಸಿ, ಜನರಿಗೆ ಅನುಕೂಲ ಮಾಡಿಕೊಡಬೇಕು. ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಮೇಲ್ಸೇತುವೆ ನಿರ್ಮಿಸಬೇಕು’ ಎಂದು ಹೋರಾಟಗಾರ ಸುಭಾಷ ಘೋಲಪ ತಿಳಿಸಿದರು.</p>.<p>‘ಬ್ಯಾರಿಕೇಡ್ ಹಾಕಿರುವುದರಿಂದಾಗಿ ಮಂಗಳವಾರ ಪೇಟೆ, ಸೋಮವಾರ ಪೇಟೆ, ಗುರುವಾರ ಪೇಟೆ, ಬುಧವಾರ ಪೇಟೆ, ರಾಯ್ ರಸ್ತೆ, ಮಂಡೋಳಿ ಮುಂತಾದ ಪ್ರದೇಶಗಳ ಜನರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ. ಹೀಗಾಗಿ ಈ ಅನಧಿಕೃತ ಬ್ಯಾರಿಕೇಡ್ ತೆರವುಗೊಳಿಸಿ, ಅಗತ್ಯ ಬಿದ್ದರೆ ಸಂಚಾರ ಪೊಲೀಸರನ್ನು ನಿಯೋಜಿಸಬೇಕು. ಜನರು ಸುತ್ತಿಬಳಸಿ ಸಂಚರಿಸುವುದನ್ನು ತಪ್ಪಿಸಬೇಕು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>