<p><strong>ಬೆಳಗಾವಿ</strong>: ಸರ್ಕಾರಿ ಮಾರ್ಗಸೂಚಿ ಪ್ರಕಾರ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ, ಸಫಾಯಿ ಕರ್ಮಚಾರಿ ಕಾವಲು ಸಮಿತಿ–ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ನೇತೃತ್ವದಲ್ಲಿ ಪೌರ ಕಾರ್ಮಿಕರು ಇಲ್ಲಿನ ಮಹಾನಗರ ಪಾಲಿಕೆ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. </p><p>ಪೌರ ಕಾರ್ಮಿಕರ ದಿನಾಚರಣೆ ಬಹಿಷ್ಕರಿಸಿದ ಅವರು, ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p><p>‘ಸರ್ಕಾರ ಪೌರ ಕಾರ್ಮಿಕರ ದಿನವನ್ನು ಅದ್ದೂರಿಯಾಗಿ ಆಚರಿಸಿದರೆ ಸಾಲದು. ಪೌರ ಕಾರ್ಮಿಕರ ಸಮಸ್ಯೆಗಳನ್ನೂ ಬಗೆಹರಿಸಬೇಕು’ ಎಂದು ಒತ್ತಾಯಿಸಿದರು.</p><p>‘ಆನಂದವಾಡಿಯ ರಮಾಬಾಯಿ ಅಂಬೇಡ್ಕರ್ ಹಾಲ್ನಲ್ಲಿ ವ್ಯಾಯಾಮ ಶಾಲೆ, ಗ್ರಂಥಾಲಯ ನಿರ್ಮಾಣಕ್ಕಾಗಿ 2023-24ನೇ ಸಾಲಿನ ಕ್ರಿಯಾ ಯೋಜನೆಯಡಿ ₹38 ಲಕ್ಷ ಅನುದಾನ ಮೀಸಲಿಟ್ಟ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಬೇಕು. 154 ಕಾಯಂ ಪೌರ ಕಾರ್ಮಿಕರ ಬಾಕಿ ವೇತನ ಪಾವತಿಸಬೇಕು’ ಎಂದು ಆಗ್ರಹಿಸಿದರು.</p><p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ್ ವಾಘೇಲಾ, ‘ಬೆಳಗಾವಿ ಪಾಲಿಕೆಯಲ್ಲಿ ಈಗ 1,350 ಪೌರ ಕಾರ್ಮಿಕರು ದುಡಿಯುತ್ತಿದ್ದೇವೆ. ಈ ಪೈಕಿ 540 ಕಾಯಂ ಪೌರ ಕಾರ್ಮಿಕರಿದ್ದೇವೆ. ಉಳಿದವರ ಸೇವೆಯನ್ನು ಸರ್ಕಾರ ಕಾಯಂಗೊಳಿಸಬೇಕು. ಹುಬ್ಬಳ್ಳಿ-ಧಾರವಾಡ, ಬೆಂಗಳೂರು, ಮೈಸೂರು ಪಾಲಿಕೆಗಳ ಮಾದರಿಯಲ್ಲಿ ಇಲ್ಲಿಯೂ ಪೌರ ಕಾರ್ಮಿಕರಿಗೆ ಬೆಳಗಿನ ಉಪಾಹಾರ ನೀಡಬೇಕು’ ಎಂದು ಒತ್ತಾಯಿಸಿದರು.</p><p>ಮುಖಂಡರಾದ ವಿಜಯ ನೀರಗಟ್ಟಿ, ಮುನಿಸ್ವಾಮಿ ಭಂಡಾರಿ, ಷಣ್ಮುಖ ಆದಿಯಂದ್ರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಸರ್ಕಾರಿ ಮಾರ್ಗಸೂಚಿ ಪ್ರಕಾರ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ, ಸಫಾಯಿ ಕರ್ಮಚಾರಿ ಕಾವಲು ಸಮಿತಿ–ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ನೇತೃತ್ವದಲ್ಲಿ ಪೌರ ಕಾರ್ಮಿಕರು ಇಲ್ಲಿನ ಮಹಾನಗರ ಪಾಲಿಕೆ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. </p><p>ಪೌರ ಕಾರ್ಮಿಕರ ದಿನಾಚರಣೆ ಬಹಿಷ್ಕರಿಸಿದ ಅವರು, ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p><p>‘ಸರ್ಕಾರ ಪೌರ ಕಾರ್ಮಿಕರ ದಿನವನ್ನು ಅದ್ದೂರಿಯಾಗಿ ಆಚರಿಸಿದರೆ ಸಾಲದು. ಪೌರ ಕಾರ್ಮಿಕರ ಸಮಸ್ಯೆಗಳನ್ನೂ ಬಗೆಹರಿಸಬೇಕು’ ಎಂದು ಒತ್ತಾಯಿಸಿದರು.</p><p>‘ಆನಂದವಾಡಿಯ ರಮಾಬಾಯಿ ಅಂಬೇಡ್ಕರ್ ಹಾಲ್ನಲ್ಲಿ ವ್ಯಾಯಾಮ ಶಾಲೆ, ಗ್ರಂಥಾಲಯ ನಿರ್ಮಾಣಕ್ಕಾಗಿ 2023-24ನೇ ಸಾಲಿನ ಕ್ರಿಯಾ ಯೋಜನೆಯಡಿ ₹38 ಲಕ್ಷ ಅನುದಾನ ಮೀಸಲಿಟ್ಟ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಬೇಕು. 154 ಕಾಯಂ ಪೌರ ಕಾರ್ಮಿಕರ ಬಾಕಿ ವೇತನ ಪಾವತಿಸಬೇಕು’ ಎಂದು ಆಗ್ರಹಿಸಿದರು.</p><p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ್ ವಾಘೇಲಾ, ‘ಬೆಳಗಾವಿ ಪಾಲಿಕೆಯಲ್ಲಿ ಈಗ 1,350 ಪೌರ ಕಾರ್ಮಿಕರು ದುಡಿಯುತ್ತಿದ್ದೇವೆ. ಈ ಪೈಕಿ 540 ಕಾಯಂ ಪೌರ ಕಾರ್ಮಿಕರಿದ್ದೇವೆ. ಉಳಿದವರ ಸೇವೆಯನ್ನು ಸರ್ಕಾರ ಕಾಯಂಗೊಳಿಸಬೇಕು. ಹುಬ್ಬಳ್ಳಿ-ಧಾರವಾಡ, ಬೆಂಗಳೂರು, ಮೈಸೂರು ಪಾಲಿಕೆಗಳ ಮಾದರಿಯಲ್ಲಿ ಇಲ್ಲಿಯೂ ಪೌರ ಕಾರ್ಮಿಕರಿಗೆ ಬೆಳಗಿನ ಉಪಾಹಾರ ನೀಡಬೇಕು’ ಎಂದು ಒತ್ತಾಯಿಸಿದರು.</p><p>ಮುಖಂಡರಾದ ವಿಜಯ ನೀರಗಟ್ಟಿ, ಮುನಿಸ್ವಾಮಿ ಭಂಡಾರಿ, ಷಣ್ಮುಖ ಆದಿಯಂದ್ರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>