ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಪಟ್ಟಣದ ಬಾರ್ ಅಂಡ್ ರೆಸ್ಟಾರೆಂಟ್ ಒಂದರಲ್ಲಿ ಸೋಮವಾರ ರಾತ್ರಿ ಕುಡಿದ ಅಮಲಿನಲ್ಲಿದ್ದ ಕೆಲ ಯುವಕರು ಜಗಳ ತೆಗೆದು ಬಾರ್ ಮಾಲೀಕ ಹಾಗೂ ಕೆಲಸಗಾರರ ಮೇಲೆ ಹಲ್ಲೆ ಮಾಡಿದ್ದಾರೆ.
ಮಾಲೀಕ ವಜ್ರೇಶ್ ಹಾಗೂ ಮೂವರು ಕೆಲಸಗಾರರು ಗಾಯಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲ ದಿನಗಳ ಹಿಂದೆ ಇದೇ ಗುಂಪಿನ ಯುವಕರು ಇನ್ನೊಂದು ಬಾರಿನಲ್ಲೂ ಮದ್ಯದ ಅಮಲಿನಲ್ಲಿ ದರ್ಪ ತೋರಿಸಿ ಗಲಾಟೆ ಮಾಡಿದ್ದರು. ಈ ಕುರಿತು ಬಾರ್ ಮಾಲೀಕ ಪ್ರಕರಣ ದಾಖಲಿಸಿದ್ದಾರೆ.
ಬೈಲಹೊಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಗುಂಪಿನ ವಿರುದ್ಧ ಎರಡನೇ ದೂರು ದಾಖಲಾಗಿದೆ.