ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ಗುಂಪುಗಳ ನಡುವೆ ಘರ್ಷಣೆ; ಕಲ್ಲು ತೂರಾಟ

Last Updated 22 ನವೆಂಬರ್ 2020, 16:55 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಖಾಸಬಾಗ್ ಪ್ರದೇಶದಲ್ಲಿ ಯುವಕರ ಎರಡು ಗುಂಪುಗಳ ನಡುವೆ ಘರ್ಷಣೆ ಹಾಗೂ ಕಲ್ಲು ತೂರಾಟ ಭಾನುವಾರ ನಡೆದಿದೆ.

ಘಟನೆಯಲ್ಲು ಯುವಕ ಒಬ್ಬನಿಗೆ ಗಾಯಗಳಾಗಿವೆ.

ಖಾಸಬಾಗ್ ಹಳೆಯ ಪಿ.ಬಿ. ರಸ್ತೆಯಲ್ಲಿರುವ ಜಯವಂತಿ ಮಂಗಲ ಕಾರ್ಯಾಲಯದ ಎದುರು ಈ ಘಟನೆ ನಡೆದಿದೆ. ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ‌ ನಂತರ ಪರಿಸ್ಥಿತಿ ‌ವಿಕೋಪಕ್ಕೆ ತಿರುಗಿತ್ತು. ಇದರಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT