<p><strong>ಮುಗಳಖೋಡ:</strong> ‘ಸದೃಢ ಶರೀರದಲ್ಲಿ ಸದೃಢ ಮನಸ್ಸು ಇರುತ್ತದೆ. ಹೀಗಾಗಿ ನಮ್ಮ ಆರೋಗ್ಯದ ದೃಷ್ಟಿಯಿಂದ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ ಎಂದು ಮುಖಂಡ ಡಾ.ಸಿ.ಬಿ. ಕುಲಿಗೋಡ ಹೇಳಿದರು.</p>.<p>ಪಟ್ಟಣದ ಚವಿವ ಸಂಘದ ಬ.ನೀ. ಕುಲಿಗೋಡ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಸ್ವಚ್ಛತೆ ಕಾರ್ಯದಲ್ಲಿ ತೊಡಗಿಕೊಳ್ಳಬೇಕು’ ಎಂದರು.</p>.<p>ಪ್ರಾಚಾರ್ಯ ಎಂ.ಕೆ. ಬೀಳಗಿ, ‘ಪ್ಲಾಸ್ಟಿಕ್ ಮುಕ್ತ ಭಾರತದ ಬಗ್ಗೆ ತಿಳಿವಳಿಕೆ ನೀಡುವುದು ನಮ್ಮ ಕರ್ತವ್ಯವಾಗಿದೆ’ ಎಂದು ತಿಳಿಸಿದರು.</p>.<p>ಪುರಸಭೆ ಆವರಣ, ಗಣಪತಿ ಮಂದಿರ ಆವರಣ ಹಾಗೂ ಪಟ್ಟಣದ ವಿವಿಧ ಬೀದಿಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.</p>.<p>ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಜೆ.ಆರ್. ಮೊಗವೀರ, ಉಪನ್ಯಾಸಕರಾದ ಕೆ.ಎ. ಕಾಂಬಳೆ, ಬಿ.ಎ. ಹಿಪ್ಪರಗಿ, ಎಂ.ಜಿ. ಬಾಳೋಜಿ, ಎಸ್.ಬಿ. ಕೊಕಟನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಗಳಖೋಡ:</strong> ‘ಸದೃಢ ಶರೀರದಲ್ಲಿ ಸದೃಢ ಮನಸ್ಸು ಇರುತ್ತದೆ. ಹೀಗಾಗಿ ನಮ್ಮ ಆರೋಗ್ಯದ ದೃಷ್ಟಿಯಿಂದ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ ಎಂದು ಮುಖಂಡ ಡಾ.ಸಿ.ಬಿ. ಕುಲಿಗೋಡ ಹೇಳಿದರು.</p>.<p>ಪಟ್ಟಣದ ಚವಿವ ಸಂಘದ ಬ.ನೀ. ಕುಲಿಗೋಡ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಸ್ವಚ್ಛತೆ ಕಾರ್ಯದಲ್ಲಿ ತೊಡಗಿಕೊಳ್ಳಬೇಕು’ ಎಂದರು.</p>.<p>ಪ್ರಾಚಾರ್ಯ ಎಂ.ಕೆ. ಬೀಳಗಿ, ‘ಪ್ಲಾಸ್ಟಿಕ್ ಮುಕ್ತ ಭಾರತದ ಬಗ್ಗೆ ತಿಳಿವಳಿಕೆ ನೀಡುವುದು ನಮ್ಮ ಕರ್ತವ್ಯವಾಗಿದೆ’ ಎಂದು ತಿಳಿಸಿದರು.</p>.<p>ಪುರಸಭೆ ಆವರಣ, ಗಣಪತಿ ಮಂದಿರ ಆವರಣ ಹಾಗೂ ಪಟ್ಟಣದ ವಿವಿಧ ಬೀದಿಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.</p>.<p>ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಜೆ.ಆರ್. ಮೊಗವೀರ, ಉಪನ್ಯಾಸಕರಾದ ಕೆ.ಎ. ಕಾಂಬಳೆ, ಬಿ.ಎ. ಹಿಪ್ಪರಗಿ, ಎಂ.ಜಿ. ಬಾಳೋಜಿ, ಎಸ್.ಬಿ. ಕೊಕಟನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>