ನಂತರ ಪ್ಲಾಸ್ಟಿಕ್ ಮತ್ತು ಇ–ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ಡಿಡಿಪಿಯು ವಿ. ನಾಗರಾಜ ಚಾಲನೆ ನೀಡಿದರು. ಕಾಲೇಜಿನ ಪ್ರಾಚಾರ್ಯ ಬಿ.ವೈ. ಹನೂರು ಹಾಗೂ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ನಾಗರಾಜ ಮರೆಣ್ಣವರ, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ಅನುಸೂಯಾ ವಿ. ಹಿರೇಮಠ ಮತ್ತು ಉಪನ್ಯಾಸಕರು ಪಾಲ್ಗೊಂಡಿದ್ದರು. ಮನೆಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದರೆ ಇಡೀ ದೇಶವೆ ಪ್ಲಾಸ್ಟಿಕ್ ಮುಕ್ತವಾಗುತ್ತದೆ ಎಂಬ ಸಂದೇಶ ನೀಡಿದರು.