ಬಜಾರ್ ರಸ್ತೆ ಸೇರಿದಂತೆ ವಿವಿಧ ಬಡಾವಣೆಯ ಲಿಂಗಾಯತ ಒಳಪಂಗಡ ಸಮುದಾಯದ ಜನರು ಬೆಳಿಗ್ಗೆ ಸ್ಮಶಾನ ಭೂಮಿಗೆ ಬಂದು ಸ್ವಚ್ಛತಾ ಅಭಿಯಾನ ಹಮ್ಮಿಕೊಂಡರು.
ಸ್ಮಶಾನದಲ್ಲಿ ಬೆಳೆದಿದ್ದ ಮುಳ್ಳು ಕಂಟಿ, ಗಿಡಗಂಟಿ, ಹುಲ್ಲು ಸೇರಿದಂತೆ ಕುರುಚಲ ಗಿಡಗಳನ್ನು ಕತ್ತರಿಸಿ ಸ್ವಚ್ಛಗೊಳಿಸಿದರು. ಒಣಗಿದ ಗಿಡದ ಬೊಡ್ಡೆ ದಂಡೆಗೆ ಸಾಗಿಸುವ, ತಗ್ಗು ಪ್ರದೇಶವನ್ನು ಜೆಸಿಬಿ ಮೂಲಕ ತುಂಬುವ ಕಾರ್ಯ ಮಾಡಿದರು. ಒಣಗಿದ ಎಲ್ಲ ಗಿಡಗಂಟಿ, ಮುಳ್ಳುಕಂಟಿಗಳನ್ನು ಸುಟ್ಟು ಹಾಕಿ ಇಡೀ ಸ್ಮಶಾನ ಸ್ವಚ್ಛಗೊಳಿಸಿದರು.