ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಪ್ರವಾಹಬಾಧಿತ ಗಲ್ಲಿಗಳಿಗೆ ಭೇಟಿ ನೀಡದ, ಅಹವಾಲು ಆಲಿಸದ ಸಿಎಂ ಬಿಎಸ್‌ವೈ

Last Updated 25 ಜುಲೈ 2021, 6:27 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭಾನುವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಪ್ರವಾಹಬಾಧಿತ ಗಲ್ಲಿಗಳಿಗೆ ಭೇಟಿ ನೀಡಲಿಲ್ಲ. ಸಂತ್ರಸ್ತರ ಅಹವಾಲು ಆಲಿಸಲಿಲ್ಲ. ಆ ಪಟ್ಟಣದ ಮಹಾಲಕ್ಷ್ಮಿ ದೇವಸ್ಥಾನದ ಎದುರು ಉಕ್ಕಿ ಹರಿಯುತ್ತಿರುವ ಹಳ್ಳವನ್ನಷ್ಟೆ ವೀಕ್ಷಿಸಿದರು.

ಅಲ್ಲಿನ‌ ಮಠ ಗಲ್ಲಿ, ನದಿ ಗಲ್ಲಿ, ಕುಂಬಾರ ಗಲ್ಲಿ, ಹರಗಾಪುರ ಗಲ್ಲಿ, ಹೊಸ ಓಣಿ, ಸುತಾರ ಗಲ್ಲಿ, ಪಿಂಜಾರ ಗಲ್ಲಿಯಲ್ಲಿ ಮನೆಗಳು ಜಲಾವೃತವಾಗಿವೆ. ಮುಖ್ಯಮಂತ್ರಿ ನಮ್ಮ ಗಲ್ಲಿಗಳಿಗೆ ಬಂದು ಅಹವಾಲು ಆಲಿಸುತ್ತಾರೆ; ಪರಿಹಾರ ಕಲ್ಪಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಜನರು ಇದ್ದರು. ಆದರೆ, ಅವರ ನಿರೀಕ್ಷೆಗೆ ಯಡಿಯೂರಪ್ಪ ಅವರು ತಣ್ಣೀರು ಎರಚಿದರು. ಸ್ಥಳೀಯರ ಸಮಸ್ಯೆಗಳನ್ನು ಅವರು ಆಲಿಸಲಿಲ್ಲ. ಕೆಲವೆ ನಿಮಿಷಗಳಲ್ಲಿ ಅಲ್ಲಿಂದ ತೆರಳಿದರು.

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಬಂದಿದ್ದೇನೆ. ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುವುದು. ಅಧಿಕಾರಿಗಳ ಸಭೆ ನಡೆಸಿ ಅವರಿಂದ ಮಾಹಿತಿ ಪಡೆಯುತ್ತೇನೆ ಎಂದರು.

ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿಹೈಕಮಾಂಡ್ ಏನು ಸಂದೇಶ‌ ನೀಡುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಂದರು.

ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್. ಅಶೋಕ್, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್, ಎಸ್ಪಿ ಲಕ್ಷ್ಮಣ ನಿಂಬರಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT