ಇಲ್ಲಿಗೆ ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಒಪ್ಪಂದ ಆಗಿದೆ. ಕುಮಾರಸ್ವಾಮಿ ಅವರೇ 5 ವರ್ಷಗಳ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ. ಇಂತಹ ಸ್ಥಿತಿಯಲ್ಲಿ ಸಿ.ಎಂಗೆ ಯಾರು ಸೂಕ್ತ ಅಭ್ಯರ್ಥಿ ಎನ್ನುವುದರ ಬಗ್ಗೆ ಚರ್ಚಿಸುವುದು ಒಳ್ಳೆಯದಲ್ಲ’ ಎಂದರು.