<p><strong>ಬೆಳಗಾವಿ</strong>: 'ಪ್ರವಾಹದಿಂದ ಪ್ರತಿವರ್ಷ ಮುಳುಗಡೆಯಾಗುವ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಅವರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುವುದು. ಇದಕ್ಕೆ ಜನರೂ ಸಹಕರಿಸಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p><p>'ಪ್ರವಾಹ ಸಂತ್ರಸ್ತರಿಗೆ ಆಗಿರುವ ತೊಂದರೆ ಪರಿಶೀಲನೆಗೆ ಇಲ್ಲಿಗೆ ಬಂದಿದ್ದೇನೆ. ಮೈಸೂರು, ಕೊಡಗು, ಹಾಸನ ನಂತರ, ಬೆಳಗಾವಿಗೆ ಭೇಟಿ ನೀಡುತ್ತಿದ್ದೇನೆ. ಸಂತ್ರಸ್ತರಿಗೆ ಪರಿಹಾರ ಕೊಡುವ ಕೆಲಸ ಮಾಡುತ್ತೇವೆ' ಎಂದ ಅವರು, 'ಬೆಳಗಾವಿಯಲ್ಲಿ ಸತತ 42 ದಿನಗಳಿಂದ ಮಳೆ ಸುರಿಯುತ್ತಿದೆ.</p><p>ಹಾಗಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲು ಸೂಚಿಸಿದ್ದೇನೆ.</p><p>ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಅಗತ್ಯಬಿದ್ದರೆ ರಜೆ ಇನ್ನಷ್ಟು ವಿಸ್ತರಿಸಲಾಗುವುದು' ಎಂದರು.</p><p>'2019ರ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಬಿಜೆಪಿ ಸರ್ಕಾರ</p><p>₹5 ಲಕ್ಷ ಪರಿಹಾರ ನೀಡಿತ್ತು.</p><p>ಆದರೆ, ಅದು ದುರುಪಯೋಗವಾಯಿತು. ಎಲ್ಲ ಸಂತ್ರಸ್ತರಿಗೂ ಪರಿಹಾರ ಸಿಗಲಿಲ್ಲ.</p><p>ಅನೇಕರಿಗೆ ನಾಲ್ಕನೇ ಕಂತಿನ ಹಣವೇ ಕೈಗೆಟುಕಲಿಲ್ಲ.</p><p>ಹಾಗಾಗಿ ಎನ್ ಡಿಆರ್ ಎಫ್ ಮಾರ್ಗಸೂಚಿ ಪ್ರಕಾರ, ಮನೆ ಕಳೆದುಕೊಂಡವರಿಗೆ ನಾವು ₹1.20 ಲಕ್ಷ ಪರಿಹಾರ ಕೊಡುತ್ತೇವೆ. ಎಲ್ಲರಿಗೂ ಪರಿಹಾರ ತಲುಪಿಸುತ್ತೇವೆ' ಎಂದರು.</p><p>*</p><p>ಬಿಜೆಪಿ ವಿರುದ್ಧ ಕಾನೂನಾತ್ಮಕ ಹೋರಾಟ: </p><p>'ಮುಡಾ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿಯವರು ಮಾಡುತ್ತಿರುವ ಆರೋಪದ ವಿರುದ್ಧ </p><p>ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟಕ್ಕೆ ಸಿದ್ಧರಿದ್ದೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>'ರಾಜ್ಯಪಾಲರು ಕೊಟ್ಟಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕು. ಅಬ್ರಹಾಂ ಕೊಟ್ಟಿರುವ ದೂರು ತಿರಸ್ಕರಿಸಬೇಕು ಎಂದು ಹೇಳಿದ್ದೇವೆ. ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: 'ಪ್ರವಾಹದಿಂದ ಪ್ರತಿವರ್ಷ ಮುಳುಗಡೆಯಾಗುವ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಅವರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುವುದು. ಇದಕ್ಕೆ ಜನರೂ ಸಹಕರಿಸಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p><p>'ಪ್ರವಾಹ ಸಂತ್ರಸ್ತರಿಗೆ ಆಗಿರುವ ತೊಂದರೆ ಪರಿಶೀಲನೆಗೆ ಇಲ್ಲಿಗೆ ಬಂದಿದ್ದೇನೆ. ಮೈಸೂರು, ಕೊಡಗು, ಹಾಸನ ನಂತರ, ಬೆಳಗಾವಿಗೆ ಭೇಟಿ ನೀಡುತ್ತಿದ್ದೇನೆ. ಸಂತ್ರಸ್ತರಿಗೆ ಪರಿಹಾರ ಕೊಡುವ ಕೆಲಸ ಮಾಡುತ್ತೇವೆ' ಎಂದ ಅವರು, 'ಬೆಳಗಾವಿಯಲ್ಲಿ ಸತತ 42 ದಿನಗಳಿಂದ ಮಳೆ ಸುರಿಯುತ್ತಿದೆ.</p><p>ಹಾಗಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲು ಸೂಚಿಸಿದ್ದೇನೆ.</p><p>ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಅಗತ್ಯಬಿದ್ದರೆ ರಜೆ ಇನ್ನಷ್ಟು ವಿಸ್ತರಿಸಲಾಗುವುದು' ಎಂದರು.</p><p>'2019ರ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಬಿಜೆಪಿ ಸರ್ಕಾರ</p><p>₹5 ಲಕ್ಷ ಪರಿಹಾರ ನೀಡಿತ್ತು.</p><p>ಆದರೆ, ಅದು ದುರುಪಯೋಗವಾಯಿತು. ಎಲ್ಲ ಸಂತ್ರಸ್ತರಿಗೂ ಪರಿಹಾರ ಸಿಗಲಿಲ್ಲ.</p><p>ಅನೇಕರಿಗೆ ನಾಲ್ಕನೇ ಕಂತಿನ ಹಣವೇ ಕೈಗೆಟುಕಲಿಲ್ಲ.</p><p>ಹಾಗಾಗಿ ಎನ್ ಡಿಆರ್ ಎಫ್ ಮಾರ್ಗಸೂಚಿ ಪ್ರಕಾರ, ಮನೆ ಕಳೆದುಕೊಂಡವರಿಗೆ ನಾವು ₹1.20 ಲಕ್ಷ ಪರಿಹಾರ ಕೊಡುತ್ತೇವೆ. ಎಲ್ಲರಿಗೂ ಪರಿಹಾರ ತಲುಪಿಸುತ್ತೇವೆ' ಎಂದರು.</p><p>*</p><p>ಬಿಜೆಪಿ ವಿರುದ್ಧ ಕಾನೂನಾತ್ಮಕ ಹೋರಾಟ: </p><p>'ಮುಡಾ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿಯವರು ಮಾಡುತ್ತಿರುವ ಆರೋಪದ ವಿರುದ್ಧ </p><p>ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟಕ್ಕೆ ಸಿದ್ಧರಿದ್ದೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>'ರಾಜ್ಯಪಾಲರು ಕೊಟ್ಟಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕು. ಅಬ್ರಹಾಂ ಕೊಟ್ಟಿರುವ ದೂರು ತಿರಸ್ಕರಿಸಬೇಕು ಎಂದು ಹೇಳಿದ್ದೇವೆ. ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>