<p><strong>ಕೊಕಟನೂರ (ಬೆಳಗಾವಿ ಜಿಲ್ಲೆ):</strong> ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೂ ಪ್ರತಿ ತಿಂಗಳು ₹5,000 ಹಣ ಸಿಗಲಿದೆ. ಜನರ ಕೈಯಲ್ಲಿ ದುಡ್ಡು ಇದ್ದರೆ ಆರ್ಥಿಕ ಚಟುವಟಿಕೆ ನಡೆಸುತ್ತಾರೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಳವಾಗಲಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.</p><p>ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ ಬಾವುರಾವ್ ದೇಶಪಾಂಡೆ ಪಶು ವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆ ಹಾಗೂ ₹260 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.</p><p>‘ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳ ಜನ ಆರ್ಥಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳು ದಾರಿ ಮಾಡಿಕೊಟ್ಟಿವೆ. ಈಗಾಗಲೇ ಮೂರು ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ಡಿಸೆಂಬರ್ ಒಳಗೆ ಉಳಿದವನ್ನೂ ಈಡೇರಿಸುತ್ತೇವೆ’ ಎಂದರು.</p><p>‘ಶಕ್ತಿ ಯೋಜನೆಯಡಿ ಈವರೆಗೆ 36 ಕೋಟಿ ಮಹಿಳೆಯರು ಬಸ್ಸುಗಳಲ್ಲಿ ಪ್ರಯಾಣಿಸಿದ್ದಾರೆ. ಇದರಿಂದ ಸರ್ಕಾರದ ಆದಾಯ ಕೂಡ ಹೆಚ್ಚಾಗಲಿದೆ. ಗೃಹಲಕ್ಷ್ಮೀ ಯೋಜನೆ ಅಡಿ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು ₹2,000 ಸಿಗಲಿದೆ. ದೇಶದಲ್ಲೇ ಅಪರೂಪದ ಯೋಜನೆ ಇದು. ವರ್ಷಕ್ಕೆ₹ 35 ಸಾವಿರ ಕೋಟಿಯನ್ನು ಇದಕ್ಕೆ ವಿನಿಯೋಗ ಮಾಡಲಾಗುವುದು’ ಎಂದರು.</p><p>‘ನಮ್ಮದು ಬಸವಾದಿ ಶರಣರ ಅನುಯಾಯಿ ಸರ್ಕಾರ. ಶರಣರು ನುಡಿದಂತೆ ನಡೆದರು. ನಾವೂ ನುಡಿದಂತೆ ನಡೆದಿದ್ದೇವೆ. ಶರಣರು ಅಸಮಾನತೆ, ಕಂದಾಚಾರ, ಭ್ರಷ್ಟಾಚಾರದ ವಿರುದ್ಧ ಹೊರಟವರು. ನಮ್ಮ ಸರ್ಕಾರವೂ ಅದನ್ನೇ ಮಾಡುತ್ತಿದೆ’ ಎಂದು ಹೇಳಿದರು.</p><p>‘ರಾಜ್ಯವು 1.29 ಕೋಟಿ ಪಶು ಸಂಪತ್ತು ಹೊಂದಿದೆ. ಹಾಲು ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಿಂದ ಜಾನುವಾರುಗಳ ಆರೋಗ್ಯ ರಕ್ಷಣೆ, ಕೃಷಿ ಅಭಿವೃದ್ಧಿ ಹಾಗೂ ರೈತರ ಮಕ್ಕಳ ಭವಿಷ್ಯ ಸುಧಾರಣೆಯಾಗಲಿದೆ' ಎಂದೂ ಅವರು ಹೇಳಿದರು.</p><p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಪಶುಸಂಗೋಪನೆ ಕೆ.ವೆಂಕಟೇಶ್, ಅಥಣಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿದರು. ವಿವಿಧ ಖಾತೆಗಳ ಸಚಿವರು, ಶಾಸಕರು ಇದ್ದರು.</p><p>ಇದಕ್ಕೂ ಮುನ್ನ ಅಥಣಿ ಪಟ್ಟಣದಲ್ಲಿ ನಿರ್ಮಿಸಿದ ಬಸವೇಶ್ವರರ ಅಶ್ವಾರೂಢ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಕಟನೂರ (ಬೆಳಗಾವಿ ಜಿಲ್ಲೆ):</strong> ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೂ ಪ್ರತಿ ತಿಂಗಳು ₹5,000 ಹಣ ಸಿಗಲಿದೆ. ಜನರ ಕೈಯಲ್ಲಿ ದುಡ್ಡು ಇದ್ದರೆ ಆರ್ಥಿಕ ಚಟುವಟಿಕೆ ನಡೆಸುತ್ತಾರೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಳವಾಗಲಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.</p><p>ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ ಬಾವುರಾವ್ ದೇಶಪಾಂಡೆ ಪಶು ವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆ ಹಾಗೂ ₹260 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.</p><p>‘ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳ ಜನ ಆರ್ಥಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳು ದಾರಿ ಮಾಡಿಕೊಟ್ಟಿವೆ. ಈಗಾಗಲೇ ಮೂರು ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ಡಿಸೆಂಬರ್ ಒಳಗೆ ಉಳಿದವನ್ನೂ ಈಡೇರಿಸುತ್ತೇವೆ’ ಎಂದರು.</p><p>‘ಶಕ್ತಿ ಯೋಜನೆಯಡಿ ಈವರೆಗೆ 36 ಕೋಟಿ ಮಹಿಳೆಯರು ಬಸ್ಸುಗಳಲ್ಲಿ ಪ್ರಯಾಣಿಸಿದ್ದಾರೆ. ಇದರಿಂದ ಸರ್ಕಾರದ ಆದಾಯ ಕೂಡ ಹೆಚ್ಚಾಗಲಿದೆ. ಗೃಹಲಕ್ಷ್ಮೀ ಯೋಜನೆ ಅಡಿ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು ₹2,000 ಸಿಗಲಿದೆ. ದೇಶದಲ್ಲೇ ಅಪರೂಪದ ಯೋಜನೆ ಇದು. ವರ್ಷಕ್ಕೆ₹ 35 ಸಾವಿರ ಕೋಟಿಯನ್ನು ಇದಕ್ಕೆ ವಿನಿಯೋಗ ಮಾಡಲಾಗುವುದು’ ಎಂದರು.</p><p>‘ನಮ್ಮದು ಬಸವಾದಿ ಶರಣರ ಅನುಯಾಯಿ ಸರ್ಕಾರ. ಶರಣರು ನುಡಿದಂತೆ ನಡೆದರು. ನಾವೂ ನುಡಿದಂತೆ ನಡೆದಿದ್ದೇವೆ. ಶರಣರು ಅಸಮಾನತೆ, ಕಂದಾಚಾರ, ಭ್ರಷ್ಟಾಚಾರದ ವಿರುದ್ಧ ಹೊರಟವರು. ನಮ್ಮ ಸರ್ಕಾರವೂ ಅದನ್ನೇ ಮಾಡುತ್ತಿದೆ’ ಎಂದು ಹೇಳಿದರು.</p><p>‘ರಾಜ್ಯವು 1.29 ಕೋಟಿ ಪಶು ಸಂಪತ್ತು ಹೊಂದಿದೆ. ಹಾಲು ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಿಂದ ಜಾನುವಾರುಗಳ ಆರೋಗ್ಯ ರಕ್ಷಣೆ, ಕೃಷಿ ಅಭಿವೃದ್ಧಿ ಹಾಗೂ ರೈತರ ಮಕ್ಕಳ ಭವಿಷ್ಯ ಸುಧಾರಣೆಯಾಗಲಿದೆ' ಎಂದೂ ಅವರು ಹೇಳಿದರು.</p><p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಪಶುಸಂಗೋಪನೆ ಕೆ.ವೆಂಕಟೇಶ್, ಅಥಣಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿದರು. ವಿವಿಧ ಖಾತೆಗಳ ಸಚಿವರು, ಶಾಸಕರು ಇದ್ದರು.</p><p>ಇದಕ್ಕೂ ಮುನ್ನ ಅಥಣಿ ಪಟ್ಟಣದಲ್ಲಿ ನಿರ್ಮಿಸಿದ ಬಸವೇಶ್ವರರ ಅಶ್ವಾರೂಢ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>