ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಬೆಳಗಾವಿ | ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಾಣ: ಮುಖ್ಯಮಂತ್ರಿ ಭರವಸೆ

Published : 5 ಆಗಸ್ಟ್ 2024, 21:19 IST
Last Updated : 5 ಆಗಸ್ಟ್ 2024, 21:19 IST
ಫಾಲೋ ಮಾಡಿ
Comments
ರೈಲು ಹಳಿ ದುರಸ್ತಿ ಬಹುತೇಕ ಪೂರ್ಣ
ಹಾಸನ: ಬೆಂಗಳೂರು–ಮಂಗಳೂರು ಮಾರ್ಗದ ಯಡಕುಮೇರಿ ಮತ್ತು ಕಡಗರವಳ್ಳಿ ಮಧ್ಯೆ ರೈಲ್ವೆ ಹಳಿ ಬಳಿ ಭೂಕುಸಿತವಾಗಿದ್ದ ಸ್ಥಳದಲ್ಲಿ ದುರಸ್ತಿ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ. ಹಳಿ ಕೆಳಗೆ ಸುಮಾರು 500 ಮೀಟರ್‌ ಆಳಕ್ಕೆ ಕುಸಿದಿದ್ದ ಮಣ್ಣನ್ನು ತೆರವುಗೊಳಿಸಲಾಗಿದ್ದು, ಕಲ್ಲಿನಿಂದ ಕ್ರಿಬ್‌ ಗೋಡೆ ನಿರ್ಮಿಸಲಾಗಿದೆ. ಹಳಿಯ ಪಕ್ಕದಲ್ಲಿ ತಡೆಗೋಡೆ ನಿರ್ಮಾಣ ಭರದಿಂದ ಸಾಗಿದೆ. ಜುಲೈ 26ರಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಸ್ಥಗಿತವಾಗಿತ್ತು. ‘ಸತತ ಕಾರ್ಯಾಚರಣೆಯ ಬಳಿಕ ದುರಸ್ತಿ ಬಹುತೇಕ ಪೂರ್ಣಗೊಂಡಿದೆ.ಆಗಸ್ಟ್‌ 8ರವರೆಗೆ ಈ ಮಾರ್ಗದ ರೈಲುಗಳ ಸಂಚಾರ ರದ್ದುಗೊಳಿಸ ಲಾಗಿದ್ದು, ಆಗಸ್ಟ್‌ 9ರಿಂದ ಆರಂಭವಾಗುವ ಸಾಧ್ಯತೆ ಇದೆ’ ಎಂದು ನೈರುತ್ಯ ರೈಲ್ವೆ ಮೂಲಗಳು ತಿಳಿಸಿವೆ.
‘ಗುಡ್ಡ ಕುಸಿತ ತಡೆಗೆ ₹300 ಕೋಟಿ’
ಶಿವಮೊಗ್ಗ: ‘ರಾಜ್ಯದ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಲಾಗಿದೆ. ಅದನ್ನು ತಡೆಯಲು ಮುಂದಿನ ಎರಡು ವರ್ಷಗಳಲ್ಲಿ ₹300 ಕೋಟಿ ವ್ಯಯಿಸಲಿದ್ದೇವೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಸೋಮವಾರ ಭೇಟಿ ನೀಡಿದ್ದ ಅವರು, ‘ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ 55,000 ಹೆಕ್ಟೇರ್ ಬೆಳೆ ಹಾನಿಯಾಗಿದೆ. 58 ಮಂದಿ ಸಾವಿಗೀಡಾಗಿದ್ದಾರೆ. ಬೆಳೆ ಹಾನಿ ಹಾಗೂ ಪ್ರಕೃತಿ ವಿಕೋಪದಿಂದ ಸಾವಿಗೀಡಾದವರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡುವಂತೆ ಆಯಾ ಜಿಲ್ಲಾಧಿಕಾರಿಗೆ ಸೂಚನೆ ಕೊಟ್ಟಿದ್ದೇನೆ. ಪರಿಹಾರ ಕಾರ್ಯ ಕೈಗೊಳ್ಳಲು ಹಣದ ಕೊರತೆ ಇಲ್ಲ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಒಟ್ಟು ₹767 ಕೋಟಿ ಹಣ ಮೀಸಲಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT