<p><strong>ಕೌಜಲಗಿ</strong>: ‘ನಮ್ಮವರ ಕುತಂತ್ರದಿಂದ ಸಂಗೊಳ್ಳಿ ರಾಯಣ್ಣನನ್ನು ಬ್ರಿಟಿಷರು ಸೆರೆ ಹಿಡಿದರು. ಒಳ್ಳೆಯ ಕೆಲಸ ಮಾಡುವವರ ಹಿಂದೆ ಇಂಥವರು ಇರುತ್ತಾರೆ. ಹಿಂದುಳಿದ ಸಮುದಾಯಕ್ಕೆ ಸೇರಿದ ನಾನು ಮುಖ್ಯಮಂತ್ರಿ ಆಗಿರುವುದು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ಗ್ರಾಮದಲ್ಲಿ ಸೋಮವಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮತ್ತು ಕೋಟೆ ಉದ್ಘಾಟಿಸಿದ ಅವರು, ಸಂಗೊಳ್ಳಿ ರಾಯಣ್ಣನ ಬದುಕಿಗೂ ಮತ್ತು ತಮ್ಮ ಇಂದಿನ ಪರಿಸ್ಥಿತಿಗೂ ಹೆಚ್ಚು ವ್ಯತ್ಯಾಸವಿಲ್ಲ ಎಂಬರ್ಥದಲ್ಲಿ ಮಾತನಾಡಿದರು. </p>.<p>‘ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇಲ್ಲಿದ್ದಾರೆ. ಹಿಂದುಳಿದ ಸಮುದಾಯದವರು ಅಧಿಕಾರದಲ್ಲಿ ಇರಬಾರದು ಎಂಬುದೇ ಅವರ ಸಿದ್ಧಾಂತ. ಇದೇ ಕಾರಣಕ್ಕೆ ಯಾವುದೇ ತಪ್ಪು ಮಾಡದಿದ್ದರೂ ನನ್ನ ವಿರುದ್ಧ ಕುತಂತ್ರ ಮಾಡಿದ್ದಾರೆ’ ಎಂದು ಅವರು ಆರೋಪಿಸಿದರು.</p>.<p>‘ಬಿಜೆಪಿಯ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನನ್ನ ಪರ ಇದ್ದರೆ, ಅವರ ಸಹಪಾಠಿಗಳು (ಬಿಜೆಪಿಯವರು) ನನ್ನ ವಿರುದ್ಧ ಇದ್ದಾರೆ. ಹೇಗಾದರೂ ಮಾಡಿ ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನ ನಡೆಸಿದ್ದಾರೆ’ ಎಂದರು.</p>.<p>ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ, ಮುಖ್ಯಸಚೇತಕ ಅಶೋಕ ಪಟ್ಟಣ, ಶಾಸಕ ಬಾಲಚಂದ್ರ ಜಾರಕಿಹೊಳಿ, ಬಾಗೋಜಿಕೊಪ್ಪ ಮಠದ ಶಿವಲಿಂಗ ಮುರುಘರಾಜೇಂದ್ರ ಸ್ವಾಮೀಜಿ ಇದ್ದರು.</p>.<div><blockquote>ನಾನು ಯಾವ ತಪ್ಪೂ ಮಾಡಿಲ್ಲ. ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳ ಆಶೀರ್ವಾದ ನನ್ನ ಮತ್ತು ನಮ್ಮ ಸರ್ಕಾರದ ಮೇಲೆ ಇರುವವರೆಗೆ ನನ್ನನ್ನು ಕೆಳಗಿಳಿಸಲು ಆಗುವುದಿಲ್ಲ. </blockquote><span class="attribution">ಸಿದ್ದರಾಮಯ್ಯ ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೌಜಲಗಿ</strong>: ‘ನಮ್ಮವರ ಕುತಂತ್ರದಿಂದ ಸಂಗೊಳ್ಳಿ ರಾಯಣ್ಣನನ್ನು ಬ್ರಿಟಿಷರು ಸೆರೆ ಹಿಡಿದರು. ಒಳ್ಳೆಯ ಕೆಲಸ ಮಾಡುವವರ ಹಿಂದೆ ಇಂಥವರು ಇರುತ್ತಾರೆ. ಹಿಂದುಳಿದ ಸಮುದಾಯಕ್ಕೆ ಸೇರಿದ ನಾನು ಮುಖ್ಯಮಂತ್ರಿ ಆಗಿರುವುದು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ಗ್ರಾಮದಲ್ಲಿ ಸೋಮವಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮತ್ತು ಕೋಟೆ ಉದ್ಘಾಟಿಸಿದ ಅವರು, ಸಂಗೊಳ್ಳಿ ರಾಯಣ್ಣನ ಬದುಕಿಗೂ ಮತ್ತು ತಮ್ಮ ಇಂದಿನ ಪರಿಸ್ಥಿತಿಗೂ ಹೆಚ್ಚು ವ್ಯತ್ಯಾಸವಿಲ್ಲ ಎಂಬರ್ಥದಲ್ಲಿ ಮಾತನಾಡಿದರು. </p>.<p>‘ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇಲ್ಲಿದ್ದಾರೆ. ಹಿಂದುಳಿದ ಸಮುದಾಯದವರು ಅಧಿಕಾರದಲ್ಲಿ ಇರಬಾರದು ಎಂಬುದೇ ಅವರ ಸಿದ್ಧಾಂತ. ಇದೇ ಕಾರಣಕ್ಕೆ ಯಾವುದೇ ತಪ್ಪು ಮಾಡದಿದ್ದರೂ ನನ್ನ ವಿರುದ್ಧ ಕುತಂತ್ರ ಮಾಡಿದ್ದಾರೆ’ ಎಂದು ಅವರು ಆರೋಪಿಸಿದರು.</p>.<p>‘ಬಿಜೆಪಿಯ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನನ್ನ ಪರ ಇದ್ದರೆ, ಅವರ ಸಹಪಾಠಿಗಳು (ಬಿಜೆಪಿಯವರು) ನನ್ನ ವಿರುದ್ಧ ಇದ್ದಾರೆ. ಹೇಗಾದರೂ ಮಾಡಿ ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನ ನಡೆಸಿದ್ದಾರೆ’ ಎಂದರು.</p>.<p>ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ, ಮುಖ್ಯಸಚೇತಕ ಅಶೋಕ ಪಟ್ಟಣ, ಶಾಸಕ ಬಾಲಚಂದ್ರ ಜಾರಕಿಹೊಳಿ, ಬಾಗೋಜಿಕೊಪ್ಪ ಮಠದ ಶಿವಲಿಂಗ ಮುರುಘರಾಜೇಂದ್ರ ಸ್ವಾಮೀಜಿ ಇದ್ದರು.</p>.<div><blockquote>ನಾನು ಯಾವ ತಪ್ಪೂ ಮಾಡಿಲ್ಲ. ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳ ಆಶೀರ್ವಾದ ನನ್ನ ಮತ್ತು ನಮ್ಮ ಸರ್ಕಾರದ ಮೇಲೆ ಇರುವವರೆಗೆ ನನ್ನನ್ನು ಕೆಳಗಿಳಿಸಲು ಆಗುವುದಿಲ್ಲ. </blockquote><span class="attribution">ಸಿದ್ದರಾಮಯ್ಯ ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>