ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ| ನಾಗರಹಾವು ರಕ್ಷಣೆ

Last Updated 24 ಜುಲೈ 2020, 12:41 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ತಿಲಕವಾಡಿಯ 2ನೇ ರೈಲ್ವೆ ಗೇಟ್ ಸಮೀಪದಲ್ಲಿ ಶುಕ್ರವಾರ ಹಾವಾಡಿಗರಿಂದ ನಾಗರಹಾವನ್ನು ರಕ್ಷಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಅದನ್ನು ತಾಲ್ಲೂಕಿನ ಮಚ್ಚೆಯ ಟ್ರೀ ಪಾರ್ಕ್‌ ಎದುರಿನ ಅರಣ್ಯ ಪ್ರದೇಶದಲ್ಲಿ ಬಿಟ್ಟರು.

‘ಇಬ್ಬರು ಮಹಿಳೆಯರು ಹಾವನ್ನು ಹಿಡಿದು ತಂದು ಬುಟ್ಟಿಯಲ್ಲಿಟ್ಟುಕೊಂಡಿದ್ದರು. ಅದನ್ನು ಬಳಸಿಕೊಂಡು ಹಣ ಸಂಪಾದಿಸುವುದು ಅವರ ಉದ್ದೇಶವಾಗಿತ್ತು. ಅವರಿಗೆ ತಿಳಿವಳಿಕೆ ನೀಡಿ, ಹಾವನ್ನು ರಕ್ಷಿಸಿದ್ದೇವೆ. ಇಂಥವರು ಕಂಡುಬಂದರೆ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು’ ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT