<p><strong>ಬೆಳಗಾವಿ</strong>: ‘ಶ್ರೀರವಿಶಂಕರ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಜೊತೆಗೂಡಿ ಅಂತರ್ಜಲ ಮಟ್ಟ ಹೆಚ್ಚಿಸಲು ಅಂತರ್ಜಲ ಚೇತನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಇದರ ಸಮರ್ಪಕ ಅನುಷ್ಠಾನಕ್ಕಾಗಿ ಬೆಳಗಾವಿ ಜಿಲ್ಲೆಯ ಅಧಿಕಾರಿಗಳೂ ಕೈ ಜೋಡಿಸಬೇಕು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸೂಚಿಸಿದರು.</p>.<p>ಇಲ್ಲಿನ ಪ್ರವಾಸಿಮಂದಿರದಲ್ಲಿ ಮಂಗಳವಾರ ನಡೆದ ಅಂತರ್ಜಲ ಚೈತನ್ಯ ಹಾಗೂ ನರೇಗಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ ನೀರಾವರಿ ಹಾಗೂ ಕಬ್ಬು ಬೆಳೆ ಹೆಚ್ಚಾಗಿರುವ ಕಾರಣ ಅಂತರ್ಜಲ ಮಟ್ಟ ಹೆಚ್ಚಿಸಲು ಆದ್ಯತೆ ನೀಡಬೇಕು. ನರೇಗಾ ಯೋಜನೆ ಹಾಗೂ ಬದು ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿಗದಿಪಡಿಸಿದ ಗುರಿ ಸಾಧನೆಗೆ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಘನ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಶೀಘ್ರದಲ್ಲಿ ನಿರ್ಮಿಸಬೇಕು. ಇದಕ್ಕಾಗಿ ಅಗತ್ಯವಾದ ಎಲ್ಲ ನೆರವನ್ನು ಜಿಲ್ಲಾಧಿಕಾರಿ ಮೂಲಕ ಪಡೆದುಕೊಂಡು ಶೀಘ್ರ ಕಾಮಗಾರಿ ಆರಂಭಿಸಬೇಕು’ ಎಂದು ಹೇಳಿದರು.</p>.<p>ನರೇಗಾ ಯೋಜನೆ ಅನುಷ್ಠಾನದ ಕುರಿತು ಸಚಿವರಿಗೆ ಮಾಹಿತಿ ನೀಡಿದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ‘ಬೆಳಗಾವಿ ಜಿಲ್ಲೆಗೆ ಒಟ್ಟು 1.20 ಕೋಟಿ ಮಾನವ ದಿನಗಳ ಸೃಜನೆಯ ಗುರಿ ನೀಡಲಾಗಿತ್ತು. ಇದುವರೆಗೆ ಶೇ 42 ಗುರಿ ಸಾಧಿಸಲಾಗಿದೆ.</p>.<p>ಕೊರೊನಾ ಹಿನ್ನೆಲೆಯಲ್ಲಿ ಸ್ವಲ್ಪಮಟ್ಟಿಗೆ ನಿಧಾನವಾಗಿ ಕಾಮಗಾರಿ ಆರಂಭಗೊಂಡಿದ್ದು, ಇದೀಗ ಚುರುಕುಗೊಂಡಿದೆ’ ಎಂದು ವಿವರಿಸಿದರು.</p>.<p>‘ಬದು ನಿರ್ಮಾಣ 3,444 ಗುರಿ ಹೊಂದಲಾಗಿದ್ದು, ಜಿಲ್ಲೆಯ ಬಹುತೇಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು. ಹಿರಣ್ಯಕೇಶಿ ನದಿ ವ್ಯಾಪ್ತಿಯಲ್ಲಿ , 2,33,713 ಮಾನವ ದಿನಗಳ ಸೃಜನೆಗೆ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಪರಿಸ್ಥಿತಿ ಬಂದಿಲ್ಲ. ಸ್ವಚ್ಛ ಭಾರತ ಮಿಷನ್, ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಸೇರಿದಂತೆ ಬಹುತೇಕ ಕೆಲಸಗಳು ಇದೀಗ ಚುರುಕು ಪಡೆದುಕೊಂಡಿವೆ’ ಎಂದು ತಿಳಿಸಿದರು.</p>.<p>ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ‘ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಲಾಮೃತ ಯೋಜನೆಯನ್ನು ವಿಸ್ತರಿಸಬೇಕು’ ಎಂದು ಕೋರಿಕೊಂಡರು.</p>.<p>ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ‘ಅಂತರ್ಜಲ ಮಟ್ಟ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮುತುವರ್ಜಿ ವಹಿಸಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.</p>.<p>ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ ಅಂಗಡಿ ಅವರು ನರೇಗಾ ಅನುಷ್ಠಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಶ್ರೀರವಿಶಂಕರ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಜೊತೆಗೂಡಿ ಅಂತರ್ಜಲ ಮಟ್ಟ ಹೆಚ್ಚಿಸಲು ಅಂತರ್ಜಲ ಚೇತನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಇದರ ಸಮರ್ಪಕ ಅನುಷ್ಠಾನಕ್ಕಾಗಿ ಬೆಳಗಾವಿ ಜಿಲ್ಲೆಯ ಅಧಿಕಾರಿಗಳೂ ಕೈ ಜೋಡಿಸಬೇಕು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸೂಚಿಸಿದರು.</p>.<p>ಇಲ್ಲಿನ ಪ್ರವಾಸಿಮಂದಿರದಲ್ಲಿ ಮಂಗಳವಾರ ನಡೆದ ಅಂತರ್ಜಲ ಚೈತನ್ಯ ಹಾಗೂ ನರೇಗಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ ನೀರಾವರಿ ಹಾಗೂ ಕಬ್ಬು ಬೆಳೆ ಹೆಚ್ಚಾಗಿರುವ ಕಾರಣ ಅಂತರ್ಜಲ ಮಟ್ಟ ಹೆಚ್ಚಿಸಲು ಆದ್ಯತೆ ನೀಡಬೇಕು. ನರೇಗಾ ಯೋಜನೆ ಹಾಗೂ ಬದು ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿಗದಿಪಡಿಸಿದ ಗುರಿ ಸಾಧನೆಗೆ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಘನ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಶೀಘ್ರದಲ್ಲಿ ನಿರ್ಮಿಸಬೇಕು. ಇದಕ್ಕಾಗಿ ಅಗತ್ಯವಾದ ಎಲ್ಲ ನೆರವನ್ನು ಜಿಲ್ಲಾಧಿಕಾರಿ ಮೂಲಕ ಪಡೆದುಕೊಂಡು ಶೀಘ್ರ ಕಾಮಗಾರಿ ಆರಂಭಿಸಬೇಕು’ ಎಂದು ಹೇಳಿದರು.</p>.<p>ನರೇಗಾ ಯೋಜನೆ ಅನುಷ್ಠಾನದ ಕುರಿತು ಸಚಿವರಿಗೆ ಮಾಹಿತಿ ನೀಡಿದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ‘ಬೆಳಗಾವಿ ಜಿಲ್ಲೆಗೆ ಒಟ್ಟು 1.20 ಕೋಟಿ ಮಾನವ ದಿನಗಳ ಸೃಜನೆಯ ಗುರಿ ನೀಡಲಾಗಿತ್ತು. ಇದುವರೆಗೆ ಶೇ 42 ಗುರಿ ಸಾಧಿಸಲಾಗಿದೆ.</p>.<p>ಕೊರೊನಾ ಹಿನ್ನೆಲೆಯಲ್ಲಿ ಸ್ವಲ್ಪಮಟ್ಟಿಗೆ ನಿಧಾನವಾಗಿ ಕಾಮಗಾರಿ ಆರಂಭಗೊಂಡಿದ್ದು, ಇದೀಗ ಚುರುಕುಗೊಂಡಿದೆ’ ಎಂದು ವಿವರಿಸಿದರು.</p>.<p>‘ಬದು ನಿರ್ಮಾಣ 3,444 ಗುರಿ ಹೊಂದಲಾಗಿದ್ದು, ಜಿಲ್ಲೆಯ ಬಹುತೇಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು. ಹಿರಣ್ಯಕೇಶಿ ನದಿ ವ್ಯಾಪ್ತಿಯಲ್ಲಿ , 2,33,713 ಮಾನವ ದಿನಗಳ ಸೃಜನೆಗೆ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಪರಿಸ್ಥಿತಿ ಬಂದಿಲ್ಲ. ಸ್ವಚ್ಛ ಭಾರತ ಮಿಷನ್, ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಸೇರಿದಂತೆ ಬಹುತೇಕ ಕೆಲಸಗಳು ಇದೀಗ ಚುರುಕು ಪಡೆದುಕೊಂಡಿವೆ’ ಎಂದು ತಿಳಿಸಿದರು.</p>.<p>ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ‘ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಲಾಮೃತ ಯೋಜನೆಯನ್ನು ವಿಸ್ತರಿಸಬೇಕು’ ಎಂದು ಕೋರಿಕೊಂಡರು.</p>.<p>ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ‘ಅಂತರ್ಜಲ ಮಟ್ಟ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮುತುವರ್ಜಿ ವಹಿಸಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.</p>.<p>ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ ಅಂಗಡಿ ಅವರು ನರೇಗಾ ಅನುಷ್ಠಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>