‘ಆರ್ಸಿಯು ಕ್ಯಾಂಪಸ್, ವಿಜಯಪುರ, ಬಾಗಲಕೋಟೆ, ಜಮಖಂಡಿ ಸ್ನಾತಕೋತ್ತರ ಕೇಂದ್ರಗಳು ಹಾಗೂ ಸಂಗೊಳ್ಳಿ ರಾಯಣ್ಣ ಘಟಕ ಕಾಲೇಜಿನಲ್ಲಿ 80 ಮಂದಿ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದೇವೆ. ಯುಜಿಸಿ ನಿಯಮಾವಳಿ ಪ್ರಕಾರ ನಮಗೆ ಗೌರವಧನ ಹೆಚ್ಚಿಸಬೇಕು. ಕಳೆದ ವರ್ಷದಲ್ಲಿ ಪರೀಕ್ಷೆ ಮೊದಲಾದ ಕಾರ್ಯಗಳನ್ನು ನಿರ್ವಹಿಸಿದ ಬಾಕಿಯನ್ನು ಶೀಘ್ರವೇ ಬಿಡುಗಡೆ ಮಾಡಬೇಕು’ ಎಂದು ಕೋರಿದರು.