<figcaption>""</figcaption>.<p><strong>ಬೆಳಗಾವಿ:</strong> ಎಂಟು ತಿಂಗಳ ಬಳಿಕ ಪದವಿ ಕಾಲೇಜುಗಳು ಪುನರಾರಂಭಗೊಂಡಿದ್ದು, ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.</p>.<p>ಕೋವಿಡ್ - 19 ಕಾರಣದಿಂದ ಕಾಲೇಜುಗಳಲ್ಲಿ ಸುರಕ್ಷತಾ ಕ್ರಮ ಕೈಗೊಂಡು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಾಗಿದ್ದಾರೆ. ವಿದ್ಯಾರ್ಥಿಗಳಿಗಾಗಿ ಕಾಯುತ್ತಾ ಕುಳಿತಿದ್ದಾರೆ.</p>.<p>ವಿದ್ಯಾರ್ಥಿಗಳು ಕೋವಿಡ್ ಪ್ರಮಾಣಪತ್ರ ತರುವುದು ಕಡ್ಡಾಯಗೊಳಿಸಲಾಗಿದೆ. ಅವರಿಗೆ ಪರೀಕ್ಷೆ ಎಲ್ಲಿ ಮಾಡಿಸಬೇಕು ಎನ್ನುವ ಗೊಂದಲ ಅವರಲ್ಲಿ ಉಂಟಾಗಿದೆ. ಹಬ್ಬದ ಕಾರಣ ಹಾಗೂ ಸಾಲು ಸಾಲು ರಜೆಗಳು ಬಂದಿದ್ದರಿಂದ ಕೋವಿಡ್ ಪರೀಕ್ಷಾ ಪ್ರಮಾಣಪತ್ರ ಪಡೆಯುವುದು ಅವರಿಗೆ ಸಾಧ್ಯವಾಗಿಲ್ಲ. ಗ್ರಾಮೀಣ ಪ್ರದೇಶದ ಬಹಳ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ ಇನ್ನೂ ಸಿಕ್ಕಿಲ್ಲ.</p>.<p>ಇವೂ ಸೇರಿದಂತೆ ಹಲವು ಕಾರಣಗಳಿಂದಾಗಿ ವಿದ್ಯಾರ್ಥಿಗಳು ಕಾಲೇಜುಗಳ ಕಡೆ ಸುಳಿದಿಲ್ಲ. ಬಹುತೇಕರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. ಪರಿಣಾಮ, ಕಾಲೇಜುಗಳ ಕ್ಯಾಂಪಸ್ ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವಿರಳವಾಗಿತ್ತು.</p>.<p>ಕೆಲವರು ಬಂದಿದ್ದರಾದರೂ ಅವರ ಬಳಿ ಕೋವಿಡ್ ಪರೀಕ್ಷಾ ವರದಿ ಇರಲಿಲ್ಲ. ಆದ್ದರಿಂದ ಅವರನ್ನು ಮಾರ್ಗಸೂಚಿಗಳ ಪ್ರಕಾರ ವಾಪಸ್ ಕಳುಹಿಸಲಾಯಿತು.</p>.<div style="text-align:center"><figcaption><strong>ಬೆಳಗಾವಿಯ ಜ್ಯೋತಿ ಕಾಲೇಜಿನ ನೋಟ</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಳಗಾವಿ:</strong> ಎಂಟು ತಿಂಗಳ ಬಳಿಕ ಪದವಿ ಕಾಲೇಜುಗಳು ಪುನರಾರಂಭಗೊಂಡಿದ್ದು, ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.</p>.<p>ಕೋವಿಡ್ - 19 ಕಾರಣದಿಂದ ಕಾಲೇಜುಗಳಲ್ಲಿ ಸುರಕ್ಷತಾ ಕ್ರಮ ಕೈಗೊಂಡು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಾಗಿದ್ದಾರೆ. ವಿದ್ಯಾರ್ಥಿಗಳಿಗಾಗಿ ಕಾಯುತ್ತಾ ಕುಳಿತಿದ್ದಾರೆ.</p>.<p>ವಿದ್ಯಾರ್ಥಿಗಳು ಕೋವಿಡ್ ಪ್ರಮಾಣಪತ್ರ ತರುವುದು ಕಡ್ಡಾಯಗೊಳಿಸಲಾಗಿದೆ. ಅವರಿಗೆ ಪರೀಕ್ಷೆ ಎಲ್ಲಿ ಮಾಡಿಸಬೇಕು ಎನ್ನುವ ಗೊಂದಲ ಅವರಲ್ಲಿ ಉಂಟಾಗಿದೆ. ಹಬ್ಬದ ಕಾರಣ ಹಾಗೂ ಸಾಲು ಸಾಲು ರಜೆಗಳು ಬಂದಿದ್ದರಿಂದ ಕೋವಿಡ್ ಪರೀಕ್ಷಾ ಪ್ರಮಾಣಪತ್ರ ಪಡೆಯುವುದು ಅವರಿಗೆ ಸಾಧ್ಯವಾಗಿಲ್ಲ. ಗ್ರಾಮೀಣ ಪ್ರದೇಶದ ಬಹಳ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ ಇನ್ನೂ ಸಿಕ್ಕಿಲ್ಲ.</p>.<p>ಇವೂ ಸೇರಿದಂತೆ ಹಲವು ಕಾರಣಗಳಿಂದಾಗಿ ವಿದ್ಯಾರ್ಥಿಗಳು ಕಾಲೇಜುಗಳ ಕಡೆ ಸುಳಿದಿಲ್ಲ. ಬಹುತೇಕರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. ಪರಿಣಾಮ, ಕಾಲೇಜುಗಳ ಕ್ಯಾಂಪಸ್ ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವಿರಳವಾಗಿತ್ತು.</p>.<p>ಕೆಲವರು ಬಂದಿದ್ದರಾದರೂ ಅವರ ಬಳಿ ಕೋವಿಡ್ ಪರೀಕ್ಷಾ ವರದಿ ಇರಲಿಲ್ಲ. ಆದ್ದರಿಂದ ಅವರನ್ನು ಮಾರ್ಗಸೂಚಿಗಳ ಪ್ರಕಾರ ವಾಪಸ್ ಕಳುಹಿಸಲಾಯಿತು.</p>.<div style="text-align:center"><figcaption><strong>ಬೆಳಗಾವಿಯ ಜ್ಯೋತಿ ಕಾಲೇಜಿನ ನೋಟ</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>