‘ಸಮ್ಮೇಳನಕ್ಕಾಗಿ ನಗರವನ್ನು ಅಂದಗೊಳಿಸುವುದಕ್ಕಾಗಿ, ನಮ್ಮ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸಲಾಯಿತು. ಹೊಸದಾಗಿ ಮಳಿಗೆಗಳನ್ನು ಕಟ್ಟಿನಿಮಗೆ ನೀಡಲಾಗುವುದು ಎಂಬ ಭರವಸೆಯನ್ನು ಪಾಲಿಕೆ ಅಧಿಕಾರಿಗಳು ನೀಡಿದ್ದರು. ಅದರಂತೆ ಮಳಿಗೆಗಳನ್ನು ನಿರ್ಮಿಸಲಾಗಿದೆ. ಆದರೆ, ಅವುಗಳನ್ನು ಹಂಚಿಕೆ ಮಾಡಲು ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇದರಿಂದ ನಾವು ತೊಂದದರೆ ಅನುಭವಿಸುವಂತಾಗಿದೆ. ರಸ್ತೆ ಬದಿಯಲ್ಲಿ ಬಿಸಿಲು, ಮಳೆ, ಗಾಳಿ, ಚಳಿ ಎನ್ನದೇ ವ್ಯಾಪಾರ ಮಾಡುವಂತಾಗಿದೆ’ಎಂದು ತಿಳಿಸಿದರು.