ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ ಶೇ 10ರಷ್ಟು ಮೀಸಲಾತಿ ನೀಡಬೇಕು. ಪ್ರಸ್ತುತ ಶೇ 4ರಷ್ಟು ಮಾತ್ರ ಇದ್ದು, ಇದರಿಂದ ಹೆಚ್ಚಿನ ಅನುಕೂಲವಾಗುವುದಿಲ್ಲ. ಹೀಗಾಗಿ, ತಮಿಳುನಾಡು ಹಾಗೂ ಮಹಾರಾಷ್ಟ್ರದ ಮಾದರಿಯಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕು. ಅಲ್ಪಸಂಖ್ಯಾತರಿಗೆ ಹೆಚ್ಚಿನ ಬಜೆಟ್ ನೀಡಬೇಕು. ಗಲಭೆಗಳು ನಡೆಯದಂತೆ ನೋಡಿಕೊಳ್ಳಬೇಕು. ಅಮಾಯಕರ ಮೇಲೆ ಪ್ರಕರಣ ದಾಖಲಿಸುವುದನ್ನು ಬಿಡಬೇಕು. ಗಲಭೆಗಳ ಹಿಂದೆ ಯಾವ ರಾಜಕಾರಣಿಗಳ ಕೈವಾಡವಿದೆ ಎನ್ನುವುದನ್ನು ಪತ್ತೆ ಹಚ್ಚಿ, ಅವರಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.