‘ರಾಜ್ಯದ ದಕ್ಷಿಣದ 12 ಜಿಲ್ಲೆಗಳಲ್ಲಿ ಪಡಿತರ ಚೀಟಿಯ ಪ್ರತಿ ಸದಸ್ಯನಿಗೆ 3 ಕೆ.ಜಿ. ರಾಗಿ ಮತ್ತು 2 ಕೆ.ಜಿ. ಅಕ್ಕಿ ನೀಡಲು ನಿರ್ಧರಿಸಲಾಗಿತ್ತು. ಅದರಂತೆ, ಕನಿಷ್ಠ ಬೆಂಬಲ ಬೆಲೆ ಯೋಜನೆಯಲ್ಲಿ ರಾಗಿ ಖರೀದಿ ಆಗಿರುವುದರಿಂದ, ರಾಗಿ ವಿತರಣೆಯನ್ನು ಏಪ್ರಿಲ್ನಿಂದ ಜಾರಿಗೆ ತರಲಾಗಿದೆ. ರಾಜ್ಯದ ಉತ್ತರದ 12 ಜಿಲ್ಲೆಗಳ ಪ್ರತಿ ಸದಸ್ಯನಿಗೆ 3 ಕೆ.ಜಿ. ಜೋಳ ಹಾಗೂ 2 ಕೆ.ಜಿ. ಅಕ್ಕಿ ನೀಡಲು ಉದ್ದೇಶಿಸಲಾಗಿದೆ. ಆದರೆ, ಜೋಳದ ಕನಿಷ್ಠ ಬೆಂಬಲ ಬೆಲೆಯು ಮಾರುಕಟ್ಟೆ ಬೆಲೆಗಿಂತ ಕಡಿಮೆ ಇದ್ದಿದ್ದರಿಂದ ನಿರ್ದಿಷ್ಟ ಪ್ರಮಾಣದಲ್ಲಿ ಜೋಳ ಖರೀದಿ ಸಾಧ್ಯವಾಗಿಲ್ಲ. ಆದ್ದರಿಂದ 3 ಕೆ.ಜಿ. ಜೋಳ ಬದಲಾಗಿ 3 ಕೆ.ಜಿ. ಗೋಧಿಯನ್ನು 2 ಕೆ.ಜಿ. ಅಕ್ಕಿಯೊಂದಿಗೆ ವಿತರಿಸಲು ಉದ್ದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದ ಜೋಳ ಲಭ್ಯತೆ ಇದ್ದಲ್ಲಿ 3 ಕೆ.ಜಿ. ಜೋಳ ಮತ್ತು 2 ಕೆ.ಜಿ. ಅಕ್ಕಿಯನ್ನು ನೀಡುವ ಕಾರ್ಯಕ್ರಮ ಜಾರಿಗೊಳಿಸಲಾಗುವುದು’ ಎಂದು ತಿಳಿಸಿದರು.