‘ವಿದ್ಯುತ್ ಮಗ್ಗ ಘಟಕಗಳಲ್ಲಿನ ನೇಕಾರರು ಹಾಗೂ ಮಗ್ಗಪೂರ್ವ ಚಟುವಟಿಕೆಗಳ ಕೆಲಸಗಾರರ ಖಾತೆ ಜಮೆಯಾಗಿದೆ. ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಪರಿಹಾರ ಧನ ಪಡೆದ ಫಲಾನುಭವಿಗಳಿಗೆ ಡಿಟಿಬಿ ಮೂಲಕ ಜಮಾ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಿ ಪರಿಹಾರ ಧನ ಜಮಾ ಆಗದೇ ಇರುವ ಫಲಾನುಭವಿಗಳು ಡಿಬಿಟಿ ಮೂಲಕ ಪ್ರಸಕ್ತ ಸಾಲಿನ ಪರಿಹಾರ ಪಡೆಯಲು ತಮ್ಮ ಬ್ಯಾಂಕ್ ಖಾತೆಯನ್ನು ಕಡ್ಡಾಯವಾಗಿ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಸಬೇಕು. ಖಾತೆಯು ಚಾಲನೆಯಲ್ಲಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು’ ಎಂದು ಸೂಚಿಸಿದೆ.