ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಮೇಶ ಜಾರಕಿಹೊಳಿ ಸೇರಿ ಮೂವರ ವಿರುದ್ಧ ಭ್ರಷ್ಟಾಚಾರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ದೂರು ನೀಡಿದ್ದಾರೆ. ರಮೇಶ ಜಾರಕಿಹೊಳಿ ₹6,000 ಹಂಚಿರುವ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ. ಬಹಿರಂಗವಾಗಿ ಜನರಿಗೆ ಆಮಿಷ ಒಡ್ಡುತ್ತಿರುವುದನ್ನು ನಾವು ತೋರಿಸುತ್ತೇವೆ’ ಎಂದ ಅವರು, ಮಿಕ್ಸರ್ ಹಂಚಿಕೆ ಬಗ್ಗೆ ವಿಡಿಯೊ ಒಂದನ್ನು ತೋರಿಸಿದರು.