ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವೆ ಜೊಲ್ಲೆ, ಶಾಸಕ ಪರಣ್ಣ ವಿರುದ್ಧ ದೂರು

Last Updated 26 ಜುಲೈ 2021, 16:16 IST
ಅಕ್ಷರ ಗಾತ್ರ

ಬೆಳಗಾವಿ: ಅಂಗನವಾಡಿಗಳಲ್ಲಿ ವಿತರಿಸುವ ಮೊಟ್ಟೆಗಳ ಖರೀದಿ ಟೆಂಡರ್‌ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕುರಿತು ಟಿವಿ ವಾಹಿನಿಯೊಂದರಲ್ಲಿ ಪ್ರಸಾರವಾದ ವರದಿ ಆಧರಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಪರಣ್ಣ ಮುನವಳ್ಳಿ, ಚಿಕ್ಕೋಡಿಯ ಸಾಯಿನಗರ ನಿವಾಸಿ ಸಂಜಯ ಹರಗೆ ಹಾಗೂ ಸಚಿವರ ಆಪ್ತ ಕಾರ್ಯದರ್ಶಿ ಪ್ರಶಾಂತ ಘಾಟಗೆ ವಿರುದ್ಧ ಇಲ್ಲಿನ ವಕೀಲ ಸುರೇಂದ್ರ ಉಗಾರೆ ಅವರು ಲೋಕಾಯುಕ್ತ ಎಸ್ಪಿ ಕಚೇರಿಗೆ ಸೋಮವಾರ ದೂರು ನೀಡಿದ್ದಾರೆ.

‘ಟೆಂಡರ್‌ನಲ್ಲಿ ಅಕ್ರಮ ಮಾಡಿರುವ ಗುರುತರ ಆರೋಪ ಸಚಿವರ ಮೇಲೆ ಬಂದಿದೆ. ಅಕ್ರಮವಾಗಿ ಹಣ ಪಡೆಯುವುದು ಅಪರಾಧ ಎನ್ನುವುದು ಗೊತ್ತಿದ್ದರೂ ಭ್ರಷ್ಟಾಚಾರ ಎಸಗಿದ್ದಾರೆ. ಈ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇಲ್ಲಿನ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಕೂಡ ಸಚಿವೆ ಶಶಿಕಲಾ ಮತ್ತು ಶಾಸಕ ಪರಣ್ಣ ವಿರುದ್ಧ ಎಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಗುರುತರ ಆರೋಪ ಕೇಳಿಬಂದಿರುವುದರಿಂದಾಗಿ ಜೊಲ್ಲೆ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT