‘ಸಚಿವಾಲಯಗಳ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳು ಹಾಗೂ ಪ್ರಮುಖ ಇಲಾಖೆಗಳ ರಾಜ್ಯ ಮಟ್ಟದ ಕಚೇರಿಗಳು ಇಲ್ಲಿಗೆ ಬರಬೇಕು. ವರ್ಷದ ಅರ್ಧ ಅವಧಿಯ ವಿಧಾನಸಭೆಯ ಅಧಿವೇಶನ ನಡೆಸಬೇಕು. ಇದರೊಂದಿಗೆ ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಶಕ್ತಿ ಕೇಂದ್ರವಾಗಬೇಕು ಎಂಬ ಉದ್ದೇಶದಿಂದ ಸುವರ್ಣ ವಿಧಾನಸೌಧ ನಿರ್ಮಿಸಲಾಯಿತು. ಆದರೆ, ಸರ್ಕಾರದ ನಡೆಯು ಈ ಆಶಯಕ್ಕೆ ವಿರುದ್ಧವಾಗಿದೆ’ ಎಂದಿದ್ದಾರೆ.